ಜುಲೈ 14ರಂದು ಕನ್ನಡ ಪಕ್ಷದ ಸದಸ್ಯತ್ವ ನೋಂದಣೆ ಅಭಿಯಾನ

ನಗರದ ಸಂಜಯ್ ನಗರದಲ್ಲಿ ಜು.14 (ಭಾನುವಾರ) ಕನ್ನಡಪಕ್ಷದ ಸದಸ್ಯತ್ವ ನೋಂದಣೆ ಅಭಿಯಾನ ಕಾರ್ಯಕ್ರಮ ನಡೆಯಲಿದೆ ಎಂದು ಕನ್ನಡ ಪಕ್ಷದ ಮುಖಂಡರಾದ ಸಂಜೀವ್ ನಾಯಕ ಹೇಳಿದರು.

ನಗರದ ಕನ್ನಡ ಪಕ್ಷದ ಕಚೇರಿಯಲ್ಲಿ ಶುಕ್ರವಾರ ನಡೆದ ಸದಸ್ಯತ್ವ ನೋಂದಣೆ ಕುರಿತು ಪತ್ರಿಕಾ ಗೋಷ್ಠಿ ನಡೆಸಿ ಅವರು ಮಾತನಾಡಿದರು.

ತಾಲೂಕಿನಲ್ಲಿ 30 ವರ್ಷಗಳಿಂದ ಕನ್ನಡ ಪಕ್ಷ ಸದೃಢವಾಗಿದ್ದು, ತನ್ನದೇ ಆದ ಕೊಡುಗೆಯನ್ನು ತಾಲೂಕಿಗೆ ನೀಡುತ್ತಾ ಬಂದಿದೆ. ತಾಲೂಕಿನಲ್ಲಿ ರಾಷ್ಟೀಯ ಪಕ್ಷಗಳ ನಡುವೆಯೂ ಗ್ರಾಮ ಪಂಚಾಯ್ತಿಯಿಂದ ಹಿಡಿದು ನಗರ ಸಭೆ ಸದಸ್ಯರ ಚುನಾವಣೆ ವರೆಗೂ ಸ್ಪರ್ಧಿಸಿ ಗೆಲುವುಕಂಡಿದೆ. ಮುಂಬರುವ ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ಈಗಿನಿಂದಲೇ ಕನ್ನಡ ಪಕ್ಷವನ್ನು ಗಟ್ಟಿಯಾಗಿ ಬೆಳೆಸುವ ನಿಟ್ಟಿನಲ್ಲಿ ಸದಸ್ಯತ್ವ ನೋಂದಣೆ ಅಭಿಯಾನ ನಡೆಸಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಕನ್ನಡ ಪಕ್ಷದ ರಾಜ್ಯ ಮುಖಂಡರಾದ ಪುರುಷೋತ್ತಮ್ ಆಗಮಿಸಲಿದ್ದು, ರೈತ ಸಂಘದ ಪ್ರಮುಖರಾದ ಸುಲೋಚನಾ ವೆಂಕಟರೆಡ್ಡಿ ಅವರು ಭಾಗವಹಿಸಲಿದ್ದಾರೆ ಎಂದರು.

ಈ ವೇಳೆ ಕನ್ನಡ ಪಕ್ಷದ ಮುಖಂಡರಾದ ಡಿ.ಪಿ ಆಂಜನೇಯ ಮಾತನಾಡಿ, ತಾಲೂಕಿನಲ್ಲಿ ಕನ್ನಡ ಪಕ್ಷ ಮೂರ ದಶಕಗಳಿಂದ ಎಲ್ಲ ಚಳುವಳಿಯಲ್ಲಿ ಮುಕ್ತವಾಗಿ ಭಾಗವಹಿಸಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಬೇಧಬಾವವಿಲ್ಲದೇ ದಲಿತ ಸಮುದಾಯದ ಮುಖಂಡರು, ರೈತ ಸಂಘದ ಮುಖಂಡರು ಹಾಗೂ ಕನ್ನಡ ಭಾಷೆಯನ್ನು ಅಭಿಮಾನಿಸುವ ಪ್ರತಿಯೊಬ್ಬರು ಕೂಡ ಆಗಮಿಸಿ ಕನ್ನಡ ಪಕ್ಷದ ಸದಸ್ಯತ್ವವನ್ನು ಪಡೆಯಬಹುದೆಂದು ನಮ್ಮದು ಕೇವಲ ಭಾಷೆ. ಪ್ರಾದೇಶಿಕತೆ ಹೋರಾಟಕ್ಕೆ ಸೀಮಿತವಾಗದೆ, ಎಲ್ಲಾ ಚಳುವಳಿ ಯಲ್ಲಿ ಭಾಗವಹಿಸಿ ಜನ ಸಾಮನ್ಯನ ಧ್ವನಿಯಾಗಬೇಕೆಂದು ಪಕ್ಷ ಸಿದ್ದಾಂತವಾಗಿದೆ ಎಂದರು

ಈ ವೇಳೆ ಕಾರ್ಯಕ್ರಮದಲ್ಲಿ ತಾಲೂಕು ಕನ್ನಡ ಪಕ್ಷದ ಅಧ್ಯಕ್ಷರಾದ ವೆಂಕಟೇಶ್, ಉಪಾಧ್ಯಕ್ಷ ಗುರುಮೂರ್ತಿ, ಮುಖಂಡರಾದ ಬೋರೇಗೌಡ, ಪರಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 hour ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

5 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

14 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

21 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

22 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago