ನಗರದ ಸಂಜಯ್ ನಗರದಲ್ಲಿ ಜು.14 (ಭಾನುವಾರ) ಕನ್ನಡಪಕ್ಷದ ಸದಸ್ಯತ್ವ ನೋಂದಣೆ ಅಭಿಯಾನ ಕಾರ್ಯಕ್ರಮ ನಡೆಯಲಿದೆ ಎಂದು ಕನ್ನಡ ಪಕ್ಷದ ಮುಖಂಡರಾದ ಸಂಜೀವ್ ನಾಯಕ ಹೇಳಿದರು.
ನಗರದ ಕನ್ನಡ ಪಕ್ಷದ ಕಚೇರಿಯಲ್ಲಿ ಶುಕ್ರವಾರ ನಡೆದ ಸದಸ್ಯತ್ವ ನೋಂದಣೆ ಕುರಿತು ಪತ್ರಿಕಾ ಗೋಷ್ಠಿ ನಡೆಸಿ ಅವರು ಮಾತನಾಡಿದರು.
ತಾಲೂಕಿನಲ್ಲಿ 30 ವರ್ಷಗಳಿಂದ ಕನ್ನಡ ಪಕ್ಷ ಸದೃಢವಾಗಿದ್ದು, ತನ್ನದೇ ಆದ ಕೊಡುಗೆಯನ್ನು ತಾಲೂಕಿಗೆ ನೀಡುತ್ತಾ ಬಂದಿದೆ. ತಾಲೂಕಿನಲ್ಲಿ ರಾಷ್ಟೀಯ ಪಕ್ಷಗಳ ನಡುವೆಯೂ ಗ್ರಾಮ ಪಂಚಾಯ್ತಿಯಿಂದ ಹಿಡಿದು ನಗರ ಸಭೆ ಸದಸ್ಯರ ಚುನಾವಣೆ ವರೆಗೂ ಸ್ಪರ್ಧಿಸಿ ಗೆಲುವುಕಂಡಿದೆ. ಮುಂಬರುವ ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ಈಗಿನಿಂದಲೇ ಕನ್ನಡ ಪಕ್ಷವನ್ನು ಗಟ್ಟಿಯಾಗಿ ಬೆಳೆಸುವ ನಿಟ್ಟಿನಲ್ಲಿ ಸದಸ್ಯತ್ವ ನೋಂದಣೆ ಅಭಿಯಾನ ನಡೆಸಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಕನ್ನಡ ಪಕ್ಷದ ರಾಜ್ಯ ಮುಖಂಡರಾದ ಪುರುಷೋತ್ತಮ್ ಆಗಮಿಸಲಿದ್ದು, ರೈತ ಸಂಘದ ಪ್ರಮುಖರಾದ ಸುಲೋಚನಾ ವೆಂಕಟರೆಡ್ಡಿ ಅವರು ಭಾಗವಹಿಸಲಿದ್ದಾರೆ ಎಂದರು.
ಈ ವೇಳೆ ಕನ್ನಡ ಪಕ್ಷದ ಮುಖಂಡರಾದ ಡಿ.ಪಿ ಆಂಜನೇಯ ಮಾತನಾಡಿ, ತಾಲೂಕಿನಲ್ಲಿ ಕನ್ನಡ ಪಕ್ಷ ಮೂರ ದಶಕಗಳಿಂದ ಎಲ್ಲ ಚಳುವಳಿಯಲ್ಲಿ ಮುಕ್ತವಾಗಿ ಭಾಗವಹಿಸಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಬೇಧಬಾವವಿಲ್ಲದೇ ದಲಿತ ಸಮುದಾಯದ ಮುಖಂಡರು, ರೈತ ಸಂಘದ ಮುಖಂಡರು ಹಾಗೂ ಕನ್ನಡ ಭಾಷೆಯನ್ನು ಅಭಿಮಾನಿಸುವ ಪ್ರತಿಯೊಬ್ಬರು ಕೂಡ ಆಗಮಿಸಿ ಕನ್ನಡ ಪಕ್ಷದ ಸದಸ್ಯತ್ವವನ್ನು ಪಡೆಯಬಹುದೆಂದು ನಮ್ಮದು ಕೇವಲ ಭಾಷೆ. ಪ್ರಾದೇಶಿಕತೆ ಹೋರಾಟಕ್ಕೆ ಸೀಮಿತವಾಗದೆ, ಎಲ್ಲಾ ಚಳುವಳಿ ಯಲ್ಲಿ ಭಾಗವಹಿಸಿ ಜನ ಸಾಮನ್ಯನ ಧ್ವನಿಯಾಗಬೇಕೆಂದು ಪಕ್ಷ ಸಿದ್ದಾಂತವಾಗಿದೆ ಎಂದರು
ಈ ವೇಳೆ ಕಾರ್ಯಕ್ರಮದಲ್ಲಿ ತಾಲೂಕು ಕನ್ನಡ ಪಕ್ಷದ ಅಧ್ಯಕ್ಷರಾದ ವೆಂಕಟೇಶ್, ಉಪಾಧ್ಯಕ್ಷ ಗುರುಮೂರ್ತಿ, ಮುಖಂಡರಾದ ಬೋರೇಗೌಡ, ಪರಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…