ಜುಲೈ 15ರಂದು ವಿಶ್ವ ಕೌಶಲ್ಯ ದಿನಾಚರಣೆ ಅಂಗವಾಗಿ ಕೋಲಾರ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಭಾಗಿತ್ವದಲ್ಲಿ ಕೇಂದ್ರ ಲೋಕ ಸೇವಾ ಆಯೋಗ (UPSC)ಯಿಂದ ಅಧಿಸೂಚಿತವಾಗುವ ನಾಗರೀಕ ಸೇವಾ ಪರೀಕ್ಷೆಗಳು (Civil Services Exam, I.A.S) ಹಾಗೂ ಕರ್ನಾಟಕ ಲೋಕಸೇವಾ ಆಯೋಗ (KPSC) ಯಿಂದ ಅಧಿಸೂಚಿತವಾಗುವ ಗೆಜೆಟೆಡ್ ಪ್ರೊಬೇಷನರ್ ಪರೀಕ್ಷೆ (KA.S) ಗಳ ಕುರಿತು ಜಾಗೃತಿ ಹಾಗೂ ಪ್ರೇರೇಪಣೆ ಮೂಡಿಸುವ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಾಗಾರವು ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯ ಮೊದಲನೇ ಮಹಡಿಯಲ್ಲಿರುವ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬೆಳಿಗ್ಗೆ 10.30 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಜರುಗಲಿದೆ.
ಕಾರ್ಯಾಗಾರದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಪರೀಕ್ಷೆಗಳ ಪಠ್ಯಕ್ರಮ, ತಯಾರಿ, ಪರೀಕ್ಷಾ ಹಂತಗಳು ಮುಂತಾದ ಎಲ್ಲಾ ವಿಷಯಗಳ ಬಗ್ಗೆ ಸಮಗ್ರ ಮಾಹಿತಿಯನ್ನು ಒದಗಿಸಲಾಗುವುದು. ಈ ಕಾರ್ಯಾಗಾರದಲ್ಲಿ ಅಂತಿಮ ವರ್ಷ ಪದವಿ ಹಾಗೂ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ಹಾಗೂ ಪದವಿ ಪೂರೈಸಿರುವ ಆಸಕ್ತ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಪಾಲ್ಗೊಳ್ಳಬಹುದಾಗಿದೆ.
ಆಸಕ್ತ ಅಭ್ಯರ್ಥಿಗಳು ಮಾಹಿತಿಯನ್ನು ದಾಖಲಿಸಲು ಅಗತ್ಯವಾದ ನೋಟ್ ಬುಕ್ ಹಾಗೂ ಪೆನ್ನ್ನು ತರಬೇಕು, ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ಮಧ್ಯಾಹ್ನ ಲಘು ಉಪಹಾರದ ವ್ಯವಸ್ಥೆ ಕಲ್ಪಿಸಲಾಗುವುದು. ಈ ಕಾರ್ಯಾಗಾರದಲ್ಲಿ ಪಾಲ್ಗೊಳ್ಳುವ ಆಸಕ್ತಿಯುಳ್ಳ ಸ್ಪರ್ಧಾಕಾಂಕ್ಷಿಗಳು ಜಿಲ್ಲಾಡಳಿತದ ವತಿಯಿಂದ ಸೃಜಿಸಲಾದ ವೆಬ್ಸೈಟ್ ವಿಳಾಸ:http://kolar.nic.in/en/notice_category/annuouncements/ನಲ್ಲಿ ನೋಂದಾಯಿಸಿಕೊಳ್ಳಬಹುದು.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…