ಜುಲೈ 15ರಂದು ವಿಶ್ವ ಕೌಶಲ್ಯ ದಿನಾಚರಣೆ ಅಂಗವಾಗಿ ಕೋಲಾರ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಭಾಗಿತ್ವದಲ್ಲಿ ಕೇಂದ್ರ ಲೋಕ ಸೇವಾ ಆಯೋಗ (UPSC)ಯಿಂದ ಅಧಿಸೂಚಿತವಾಗುವ ನಾಗರೀಕ ಸೇವಾ ಪರೀಕ್ಷೆಗಳು (Civil Services Exam, I.A.S) ಹಾಗೂ ಕರ್ನಾಟಕ ಲೋಕಸೇವಾ ಆಯೋಗ (KPSC) ಯಿಂದ ಅಧಿಸೂಚಿತವಾಗುವ ಗೆಜೆಟೆಡ್ ಪ್ರೊಬೇಷನರ್ ಪರೀಕ್ಷೆ (KA.S) ಗಳ ಕುರಿತು ಜಾಗೃತಿ ಹಾಗೂ ಪ್ರೇರೇಪಣೆ ಮೂಡಿಸುವ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಾಗಾರವು ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯ ಮೊದಲನೇ ಮಹಡಿಯಲ್ಲಿರುವ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬೆಳಿಗ್ಗೆ 10.30 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಜರುಗಲಿದೆ.
ಕಾರ್ಯಾಗಾರದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಪರೀಕ್ಷೆಗಳ ಪಠ್ಯಕ್ರಮ, ತಯಾರಿ, ಪರೀಕ್ಷಾ ಹಂತಗಳು ಮುಂತಾದ ಎಲ್ಲಾ ವಿಷಯಗಳ ಬಗ್ಗೆ ಸಮಗ್ರ ಮಾಹಿತಿಯನ್ನು ಒದಗಿಸಲಾಗುವುದು. ಈ ಕಾರ್ಯಾಗಾರದಲ್ಲಿ ಅಂತಿಮ ವರ್ಷ ಪದವಿ ಹಾಗೂ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ಹಾಗೂ ಪದವಿ ಪೂರೈಸಿರುವ ಆಸಕ್ತ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಪಾಲ್ಗೊಳ್ಳಬಹುದಾಗಿದೆ.
ಆಸಕ್ತ ಅಭ್ಯರ್ಥಿಗಳು ಮಾಹಿತಿಯನ್ನು ದಾಖಲಿಸಲು ಅಗತ್ಯವಾದ ನೋಟ್ ಬುಕ್ ಹಾಗೂ ಪೆನ್ನ್ನು ತರಬೇಕು, ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ಮಧ್ಯಾಹ್ನ ಲಘು ಉಪಹಾರದ ವ್ಯವಸ್ಥೆ ಕಲ್ಪಿಸಲಾಗುವುದು. ಈ ಕಾರ್ಯಾಗಾರದಲ್ಲಿ ಪಾಲ್ಗೊಳ್ಳುವ ಆಸಕ್ತಿಯುಳ್ಳ ಸ್ಪರ್ಧಾಕಾಂಕ್ಷಿಗಳು ಜಿಲ್ಲಾಡಳಿತದ ವತಿಯಿಂದ ಸೃಜಿಸಲಾದ ವೆಬ್ಸೈಟ್ ವಿಳಾಸ:http://kolar.nic.in/en/notice_category/annuouncements/ನಲ್ಲಿ ನೋಂದಾಯಿಸಿಕೊಳ್ಳಬಹುದು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…