Categories: ಕೋಲಾರ

ಜುಲೈ 15ರಂದು ಸ್ಪರ್ಧಾತ್ಮಕ ಪರೀಕ್ಷೆ ಕುರಿತು ಕಾರ್ಯಾಗಾರ

ಜುಲೈ 15ರಂದು ವಿಶ್ವ ಕೌಶಲ್ಯ ದಿನಾಚರಣೆ ಅಂಗವಾಗಿ ಕೋಲಾರ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಭಾಗಿತ್ವದಲ್ಲಿ ಕೇಂದ್ರ ಲೋಕ ಸೇವಾ ಆಯೋಗ (UPSC)ಯಿಂದ ಅಧಿಸೂಚಿತವಾಗುವ ನಾಗರೀಕ ಸೇವಾ ಪರೀಕ್ಷೆಗಳು (Civil Services Exam, I.A.S) ಹಾಗೂ ಕರ್ನಾಟಕ ಲೋಕಸೇವಾ ಆಯೋಗ (KPSC) ಯಿಂದ ಅಧಿಸೂಚಿತವಾಗುವ ಗೆಜೆಟೆಡ್ ಪ್ರೊಬೇಷನರ್ ಪರೀಕ್ಷೆ (KA.S) ಗಳ ಕುರಿತು ಜಾಗೃತಿ ಹಾಗೂ ಪ್ರೇರೇಪಣೆ ಮೂಡಿಸುವ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಾಗಾರವು ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯ ಮೊದಲನೇ ಮಹಡಿಯಲ್ಲಿರುವ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬೆಳಿಗ್ಗೆ 10.30 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಜರುಗಲಿದೆ.

ಕಾರ್ಯಾಗಾರದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಪರೀಕ್ಷೆಗಳ ಪಠ್ಯಕ್ರಮ, ತಯಾರಿ, ಪರೀಕ್ಷಾ ಹಂತಗಳು ಮುಂತಾದ ಎಲ್ಲಾ ವಿಷಯಗಳ ಬಗ್ಗೆ ಸಮಗ್ರ ಮಾಹಿತಿಯನ್ನು ಒದಗಿಸಲಾಗುವುದು. ಈ ಕಾರ್ಯಾಗಾರದಲ್ಲಿ ಅಂತಿಮ ವರ್ಷ ಪದವಿ ಹಾಗೂ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ಹಾಗೂ ಪದವಿ ಪೂರೈಸಿರುವ ಆಸಕ್ತ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಪಾಲ್ಗೊಳ್ಳಬಹುದಾಗಿದೆ.

ಆಸಕ್ತ ಅಭ್ಯರ್ಥಿಗಳು ಮಾಹಿತಿಯನ್ನು ದಾಖಲಿಸಲು ಅಗತ್ಯವಾದ ನೋಟ್ ಬುಕ್ ಹಾಗೂ ಪೆನ್‌ನ್ನು ತರಬೇಕು, ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ಮಧ್ಯಾಹ್ನ ಲಘು ಉಪಹಾರದ ವ್ಯವಸ್ಥೆ ಕಲ್ಪಿಸಲಾಗುವುದು. ಈ ಕಾರ್ಯಾಗಾರದಲ್ಲಿ ಪಾಲ್ಗೊಳ್ಳುವ ಆಸಕ್ತಿಯುಳ್ಳ ಸ್ಪರ್ಧಾಕಾಂಕ್ಷಿಗಳು ಜಿಲ್ಲಾಡಳಿತದ ವತಿಯಿಂದ ಸೃಜಿಸಲಾದ ವೆಬ್‌ಸೈಟ್ ವಿಳಾಸ:http://kolar.nic.in/en/notice_category/annuouncements/ನಲ್ಲಿ ನೋಂದಾಯಿಸಿಕೊಳ್ಳಬಹುದು.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 hour ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

6 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

15 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

21 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

22 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago