ಜುಲೈ 19 ರಂದು ತೊಗರಿ ಸೊರಗು ರೋಗದ ಸಮಗ್ರ ನಿರ್ವಹಣೆಯ ಬಗ್ಗೆ ರೈತರಿಗೆ ರಾಜ್ಯಮಟ್ಟದ ಆನ್‌ಲೈನ್‌ ತರಬೇತಿ

ಕೃಷಿ ಇಲಾಖೆ ಮತ್ತು ಕೃಷಿ ಸಂಬಂಧಿ ವಿಶ್ವವಿದ್ಯಾನಿಲಯಗಳು ರೈತರ ಕೃಷಿ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಧ್ಯೇಯೋದ್ದೇಶಗಳನ್ನು ಹೊಂದಿವೆ. ಈ ನಿಟ್ಟಿನಲ್ಲಿ ನಿರಂತರವಾಗಿ ತರಬೇತಿ ಕಾರ್ಯಕ್ರಮಗಳನ್ನು ಸ್ಥಳೀಯ ಮಟ್ಟದಲ್ಲಿ ಆಯೋಜನೆ.

ಕೋವಿಡ್-19 ಸಮಯದಲ್ಲಿಯೂ ಆನ್‌ಲೈನ್‌ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಮುಂದುವರೆಸಿಕೊಂಡು ಬಂದಿವೆ. ಕಾಲಕಾಲಕ್ಕೆ ರಾಜ್ಯಮಟ್ಟದ ರೈತರ ಕೃಷಿ ಸಮಸ್ಯೆಗಳನ್ನು ಗುರುತಿಸಿ ನಿರಂತರವಾಗಿ ಆನ್‌ಲೈನ್ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡರೆ ಹಣ ಮತ್ತು ಸಮಯ ಉಳಿತಾಯವಾಗುವುದರ ಜೊತೆಗೆ ಶೀಘ್ರವಾಗಿ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗುತ್ತದೆ.

ಸಮೇತಿ(ದಕ್ಷಿಣ), ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಮತ್ತು ಸಮೇತಿ(ಉತ್ತರ) ಕೃಷಿ ವಿಶ್ವವಿದ್ಯಾನಿಲಯ, ಧಾರವಾಡದವರು ರಾಜ್ಯ ಮಟ್ಟದ ರೈತರ ಕೃಷಿ ಸಮಸ್ಯೆಗಳು ಮತ್ತು ಪರಿಹಾರ ಎಂಬ ವಿನೂತನ ಸರಣಿ ಕಾರ್ಯಕ್ರಮವನ್ನು ಪ್ರಾರಂಭಿಸುತ್ತಿದೆ.

ತೊಗರಿಯನ್ನು ಪ್ರಮುಖವಾಗಿ ಕಲುಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬೀದರ್‍, ಬೆಂಗಳೂರು (ಗ್ರಾಮಾಂತರ) ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಬೆಳೆಯಲಾಗುತ್ತಿದೆ. ತೊಗರಿಯನ್ನು ರಾಜ್ಯದಲ್ಲಿ 16.64 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ. ತೊಗರಿಗೆ ಬರುವ ಪ್ರಮುಖ ರೋಗವೆಂದರೆ ಸೊರಗು ರೋಗ ಅಥವಾ ನೆಟ್ಟಿ ರೋಗ, ಈ ರೋಗವು ಕಳೆದ ವರ್ಷ (2022-23) ತೊಗರಿ ಕಣಜ ಎಂದು ಹೆಸರು ಪಡೆದಿರುವ ಕಲುಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸುಮಾರು 0.78 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತುತ್ತಾಗಿತ್ತು.

ಈ ವರ್ಷವು ಸಹ ಬಿತ್ತನೆಯಾದ ತೊಗರಿ ಬೆಳೆಯು ಸೊರಗು ರೋಗಕ್ಕೆ ತುತ್ತಾಗುತ್ತಿದೆ. ಇದನ್ನು ಮನಗೊಂಡು ಮುಂಜಾಗ್ರತ ಕ್ರಮವಾಗಿ ಕೃಷಿ ಇಲಾಖೆ, ಸಮೇತಿ (ದಕ್ಷಿಣ), ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಮತ್ತು ಸಮೇತಿ (ಉತ್ತರ) ಕೃಷಿ ವಿಶ್ವವಿದ್ಯಾನಿಲಯ, ಧಾರವಾಡದವರು ಜಂಟಿಯಾಗಿ ದಿನಾಂಕ:2023 ರ ಜುಲೈ 19 (ಬುಧವಾರ) ದಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ನೂತನ ಪ್ರಯತ್ನವಾಗಿ ಇದೇ ಪ್ರಪ್ರಥಮ ಬಾರಿಗೆ ರಾಜ್ಯಮಟ್ಟದ ಆನ್‌ಲೈನ್‌ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿವೆ.

ಒಂದೇ ಸಲ 3 ಸಾವಿರ ತೊಗರಿ ಬೆಳೆಗಾರರು ಮತ್ತು ವಿಸ್ತರಣಾ ಕಾರ್ಯಕರ್ತರು ಭಾಗವಹಿಸಬಹುದು. ಆನ್ ಲೈನ್ ತರಬೇತಿಗೆ ಲಿಂಕ್https://zoom.us/i/929532558292pwd=TUVOVGZYTWJZMTdUSG5DNU1ScTQ1UT09 ಮತ್ತು ಪಾಸ್ ಕೋಡ್:123123, ನಮೂದಿಸಿ ತರಬೇತಿ ಪಡೆಯಬಹುದು.

ಹೆಚ್ಚಿನ ಮಾಹಿತಿಗೆ ಕೃಷಿ ಇಲಾಖೆಯ ಸಿಬ್ಬಂದಿ/ಅಧಿಕಾರಿಗಳನ್ನು ಅಥವಾ ಮೊಬೈಲ್ ಸಂ:9481425522/ 95912128719964689340 ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ನೇಪಾಳದ ದಂಗೆ……

ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ…

4 hours ago

22 ವರ್ಷದ ಯುವಕ‌ ಮನೆಯಲ್ಲಿ ನೇಣಿಗೆ ಶರಣು

22 ವರ್ಷದ ಯುವಕ‌ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ‌ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…

7 hours ago

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

18 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

18 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

21 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

24 hours ago