ಜುಲೈ 19 ರಂದು ತೊಗರಿ ಸೊರಗು ರೋಗದ ಸಮಗ್ರ ನಿರ್ವಹಣೆಯ ಬಗ್ಗೆ ರೈತರಿಗೆ ರಾಜ್ಯಮಟ್ಟದ ಆನ್‌ಲೈನ್‌ ತರಬೇತಿ

ಕೃಷಿ ಇಲಾಖೆ ಮತ್ತು ಕೃಷಿ ಸಂಬಂಧಿ ವಿಶ್ವವಿದ್ಯಾನಿಲಯಗಳು ರೈತರ ಕೃಷಿ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಧ್ಯೇಯೋದ್ದೇಶಗಳನ್ನು ಹೊಂದಿವೆ. ಈ ನಿಟ್ಟಿನಲ್ಲಿ ನಿರಂತರವಾಗಿ ತರಬೇತಿ ಕಾರ್ಯಕ್ರಮಗಳನ್ನು ಸ್ಥಳೀಯ ಮಟ್ಟದಲ್ಲಿ ಆಯೋಜನೆ.

ಕೋವಿಡ್-19 ಸಮಯದಲ್ಲಿಯೂ ಆನ್‌ಲೈನ್‌ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಮುಂದುವರೆಸಿಕೊಂಡು ಬಂದಿವೆ. ಕಾಲಕಾಲಕ್ಕೆ ರಾಜ್ಯಮಟ್ಟದ ರೈತರ ಕೃಷಿ ಸಮಸ್ಯೆಗಳನ್ನು ಗುರುತಿಸಿ ನಿರಂತರವಾಗಿ ಆನ್‌ಲೈನ್ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡರೆ ಹಣ ಮತ್ತು ಸಮಯ ಉಳಿತಾಯವಾಗುವುದರ ಜೊತೆಗೆ ಶೀಘ್ರವಾಗಿ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗುತ್ತದೆ.

ಸಮೇತಿ(ದಕ್ಷಿಣ), ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಮತ್ತು ಸಮೇತಿ(ಉತ್ತರ) ಕೃಷಿ ವಿಶ್ವವಿದ್ಯಾನಿಲಯ, ಧಾರವಾಡದವರು ರಾಜ್ಯ ಮಟ್ಟದ ರೈತರ ಕೃಷಿ ಸಮಸ್ಯೆಗಳು ಮತ್ತು ಪರಿಹಾರ ಎಂಬ ವಿನೂತನ ಸರಣಿ ಕಾರ್ಯಕ್ರಮವನ್ನು ಪ್ರಾರಂಭಿಸುತ್ತಿದೆ.

ತೊಗರಿಯನ್ನು ಪ್ರಮುಖವಾಗಿ ಕಲುಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬೀದರ್‍, ಬೆಂಗಳೂರು (ಗ್ರಾಮಾಂತರ) ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಬೆಳೆಯಲಾಗುತ್ತಿದೆ. ತೊಗರಿಯನ್ನು ರಾಜ್ಯದಲ್ಲಿ 16.64 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ. ತೊಗರಿಗೆ ಬರುವ ಪ್ರಮುಖ ರೋಗವೆಂದರೆ ಸೊರಗು ರೋಗ ಅಥವಾ ನೆಟ್ಟಿ ರೋಗ, ಈ ರೋಗವು ಕಳೆದ ವರ್ಷ (2022-23) ತೊಗರಿ ಕಣಜ ಎಂದು ಹೆಸರು ಪಡೆದಿರುವ ಕಲುಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸುಮಾರು 0.78 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತುತ್ತಾಗಿತ್ತು.

ಈ ವರ್ಷವು ಸಹ ಬಿತ್ತನೆಯಾದ ತೊಗರಿ ಬೆಳೆಯು ಸೊರಗು ರೋಗಕ್ಕೆ ತುತ್ತಾಗುತ್ತಿದೆ. ಇದನ್ನು ಮನಗೊಂಡು ಮುಂಜಾಗ್ರತ ಕ್ರಮವಾಗಿ ಕೃಷಿ ಇಲಾಖೆ, ಸಮೇತಿ (ದಕ್ಷಿಣ), ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಮತ್ತು ಸಮೇತಿ (ಉತ್ತರ) ಕೃಷಿ ವಿಶ್ವವಿದ್ಯಾನಿಲಯ, ಧಾರವಾಡದವರು ಜಂಟಿಯಾಗಿ ದಿನಾಂಕ:2023 ರ ಜುಲೈ 19 (ಬುಧವಾರ) ದಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ನೂತನ ಪ್ರಯತ್ನವಾಗಿ ಇದೇ ಪ್ರಪ್ರಥಮ ಬಾರಿಗೆ ರಾಜ್ಯಮಟ್ಟದ ಆನ್‌ಲೈನ್‌ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿವೆ.

ಒಂದೇ ಸಲ 3 ಸಾವಿರ ತೊಗರಿ ಬೆಳೆಗಾರರು ಮತ್ತು ವಿಸ್ತರಣಾ ಕಾರ್ಯಕರ್ತರು ಭಾಗವಹಿಸಬಹುದು. ಆನ್ ಲೈನ್ ತರಬೇತಿಗೆ ಲಿಂಕ್https://zoom.us/i/929532558292pwd=TUVOVGZYTWJZMTdUSG5DNU1ScTQ1UT09 ಮತ್ತು ಪಾಸ್ ಕೋಡ್:123123, ನಮೂದಿಸಿ ತರಬೇತಿ ಪಡೆಯಬಹುದು.

ಹೆಚ್ಚಿನ ಮಾಹಿತಿಗೆ ಕೃಷಿ ಇಲಾಖೆಯ ಸಿಬ್ಬಂದಿ/ಅಧಿಕಾರಿಗಳನ್ನು ಅಥವಾ ಮೊಬೈಲ್ ಸಂ:9481425522/ 95912128719964689340 ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

4 minutes ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

2 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

2 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

4 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

5 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

9 hours ago