ಕೃಷಿ ಇಲಾಖೆ ಮತ್ತು ಕೃಷಿ ಸಂಬಂಧಿ ವಿಶ್ವವಿದ್ಯಾನಿಲಯಗಳು ರೈತರ ಕೃಷಿ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಧ್ಯೇಯೋದ್ದೇಶಗಳನ್ನು ಹೊಂದಿವೆ. ಈ ನಿಟ್ಟಿನಲ್ಲಿ ನಿರಂತರವಾಗಿ ತರಬೇತಿ ಕಾರ್ಯಕ್ರಮಗಳನ್ನು ಸ್ಥಳೀಯ ಮಟ್ಟದಲ್ಲಿ ಆಯೋಜನೆ.
ಕೋವಿಡ್-19 ಸಮಯದಲ್ಲಿಯೂ ಆನ್ಲೈನ್ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಮುಂದುವರೆಸಿಕೊಂಡು ಬಂದಿವೆ. ಕಾಲಕಾಲಕ್ಕೆ ರಾಜ್ಯಮಟ್ಟದ ರೈತರ ಕೃಷಿ ಸಮಸ್ಯೆಗಳನ್ನು ಗುರುತಿಸಿ ನಿರಂತರವಾಗಿ ಆನ್ಲೈನ್ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡರೆ ಹಣ ಮತ್ತು ಸಮಯ ಉಳಿತಾಯವಾಗುವುದರ ಜೊತೆಗೆ ಶೀಘ್ರವಾಗಿ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗುತ್ತದೆ.
ಸಮೇತಿ(ದಕ್ಷಿಣ), ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಮತ್ತು ಸಮೇತಿ(ಉತ್ತರ) ಕೃಷಿ ವಿಶ್ವವಿದ್ಯಾನಿಲಯ, ಧಾರವಾಡದವರು ರಾಜ್ಯ ಮಟ್ಟದ ರೈತರ ಕೃಷಿ ಸಮಸ್ಯೆಗಳು ಮತ್ತು ಪರಿಹಾರ ಎಂಬ ವಿನೂತನ ಸರಣಿ ಕಾರ್ಯಕ್ರಮವನ್ನು ಪ್ರಾರಂಭಿಸುತ್ತಿದೆ.
ತೊಗರಿಯನ್ನು ಪ್ರಮುಖವಾಗಿ ಕಲುಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬೀದರ್, ಬೆಂಗಳೂರು (ಗ್ರಾಮಾಂತರ) ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಬೆಳೆಯಲಾಗುತ್ತಿದೆ. ತೊಗರಿಯನ್ನು ರಾಜ್ಯದಲ್ಲಿ 16.64 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ. ತೊಗರಿಗೆ ಬರುವ ಪ್ರಮುಖ ರೋಗವೆಂದರೆ ಸೊರಗು ರೋಗ ಅಥವಾ ನೆಟ್ಟಿ ರೋಗ, ಈ ರೋಗವು ಕಳೆದ ವರ್ಷ (2022-23) ತೊಗರಿ ಕಣಜ ಎಂದು ಹೆಸರು ಪಡೆದಿರುವ ಕಲುಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸುಮಾರು 0.78 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತುತ್ತಾಗಿತ್ತು.
ಈ ವರ್ಷವು ಸಹ ಬಿತ್ತನೆಯಾದ ತೊಗರಿ ಬೆಳೆಯು ಸೊರಗು ರೋಗಕ್ಕೆ ತುತ್ತಾಗುತ್ತಿದೆ. ಇದನ್ನು ಮನಗೊಂಡು ಮುಂಜಾಗ್ರತ ಕ್ರಮವಾಗಿ ಕೃಷಿ ಇಲಾಖೆ, ಸಮೇತಿ (ದಕ್ಷಿಣ), ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಮತ್ತು ಸಮೇತಿ (ಉತ್ತರ) ಕೃಷಿ ವಿಶ್ವವಿದ್ಯಾನಿಲಯ, ಧಾರವಾಡದವರು ಜಂಟಿಯಾಗಿ ದಿನಾಂಕ:2023 ರ ಜುಲೈ 19 (ಬುಧವಾರ) ದಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ನೂತನ ಪ್ರಯತ್ನವಾಗಿ ಇದೇ ಪ್ರಪ್ರಥಮ ಬಾರಿಗೆ ರಾಜ್ಯಮಟ್ಟದ ಆನ್ಲೈನ್ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿವೆ.
ಒಂದೇ ಸಲ 3 ಸಾವಿರ ತೊಗರಿ ಬೆಳೆಗಾರರು ಮತ್ತು ವಿಸ್ತರಣಾ ಕಾರ್ಯಕರ್ತರು ಭಾಗವಹಿಸಬಹುದು. ಆನ್ ಲೈನ್ ತರಬೇತಿಗೆ ಲಿಂಕ್https://zoom.us/i/929532558292pwd=TUVOVGZYTWJZMTdUSG5DNU1ScTQ1UT09 ಮತ್ತು ಪಾಸ್ ಕೋಡ್:123123, ನಮೂದಿಸಿ ತರಬೇತಿ ಪಡೆಯಬಹುದು.
ಹೆಚ್ಚಿನ ಮಾಹಿತಿಗೆ ಕೃಷಿ ಇಲಾಖೆಯ ಸಿಬ್ಬಂದಿ/ಅಧಿಕಾರಿಗಳನ್ನು ಅಥವಾ ಮೊಬೈಲ್ ಸಂ:9481425522/ 9591212871/ 9964689340 ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…
ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…