ಕೃಷಿ ಇಲಾಖೆ ಮತ್ತು ಕೃಷಿ ಸಂಬಂಧಿ ವಿಶ್ವವಿದ್ಯಾನಿಲಯಗಳು ರೈತರ ಕೃಷಿ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಧ್ಯೇಯೋದ್ದೇಶಗಳನ್ನು ಹೊಂದಿವೆ. ಈ ನಿಟ್ಟಿನಲ್ಲಿ ನಿರಂತರವಾಗಿ ತರಬೇತಿ ಕಾರ್ಯಕ್ರಮಗಳನ್ನು ಸ್ಥಳೀಯ ಮಟ್ಟದಲ್ಲಿ ಆಯೋಜನೆ.
ಕೋವಿಡ್-19 ಸಮಯದಲ್ಲಿಯೂ ಆನ್ಲೈನ್ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಮುಂದುವರೆಸಿಕೊಂಡು ಬಂದಿವೆ. ಕಾಲಕಾಲಕ್ಕೆ ರಾಜ್ಯಮಟ್ಟದ ರೈತರ ಕೃಷಿ ಸಮಸ್ಯೆಗಳನ್ನು ಗುರುತಿಸಿ ನಿರಂತರವಾಗಿ ಆನ್ಲೈನ್ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡರೆ ಹಣ ಮತ್ತು ಸಮಯ ಉಳಿತಾಯವಾಗುವುದರ ಜೊತೆಗೆ ಶೀಘ್ರವಾಗಿ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗುತ್ತದೆ.
ಸಮೇತಿ(ದಕ್ಷಿಣ), ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಮತ್ತು ಸಮೇತಿ(ಉತ್ತರ) ಕೃಷಿ ವಿಶ್ವವಿದ್ಯಾನಿಲಯ, ಧಾರವಾಡದವರು ರಾಜ್ಯ ಮಟ್ಟದ ರೈತರ ಕೃಷಿ ಸಮಸ್ಯೆಗಳು ಮತ್ತು ಪರಿಹಾರ ಎಂಬ ವಿನೂತನ ಸರಣಿ ಕಾರ್ಯಕ್ರಮವನ್ನು ಪ್ರಾರಂಭಿಸುತ್ತಿದೆ.
ತೊಗರಿಯನ್ನು ಪ್ರಮುಖವಾಗಿ ಕಲುಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬೀದರ್, ಬೆಂಗಳೂರು (ಗ್ರಾಮಾಂತರ) ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಬೆಳೆಯಲಾಗುತ್ತಿದೆ. ತೊಗರಿಯನ್ನು ರಾಜ್ಯದಲ್ಲಿ 16.64 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ. ತೊಗರಿಗೆ ಬರುವ ಪ್ರಮುಖ ರೋಗವೆಂದರೆ ಸೊರಗು ರೋಗ ಅಥವಾ ನೆಟ್ಟಿ ರೋಗ, ಈ ರೋಗವು ಕಳೆದ ವರ್ಷ (2022-23) ತೊಗರಿ ಕಣಜ ಎಂದು ಹೆಸರು ಪಡೆದಿರುವ ಕಲುಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸುಮಾರು 0.78 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತುತ್ತಾಗಿತ್ತು.
ಈ ವರ್ಷವು ಸಹ ಬಿತ್ತನೆಯಾದ ತೊಗರಿ ಬೆಳೆಯು ಸೊರಗು ರೋಗಕ್ಕೆ ತುತ್ತಾಗುತ್ತಿದೆ. ಇದನ್ನು ಮನಗೊಂಡು ಮುಂಜಾಗ್ರತ ಕ್ರಮವಾಗಿ ಕೃಷಿ ಇಲಾಖೆ, ಸಮೇತಿ (ದಕ್ಷಿಣ), ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಮತ್ತು ಸಮೇತಿ (ಉತ್ತರ) ಕೃಷಿ ವಿಶ್ವವಿದ್ಯಾನಿಲಯ, ಧಾರವಾಡದವರು ಜಂಟಿಯಾಗಿ ದಿನಾಂಕ:2023 ರ ಜುಲೈ 19 (ಬುಧವಾರ) ದಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ನೂತನ ಪ್ರಯತ್ನವಾಗಿ ಇದೇ ಪ್ರಪ್ರಥಮ ಬಾರಿಗೆ ರಾಜ್ಯಮಟ್ಟದ ಆನ್ಲೈನ್ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿವೆ.
ಒಂದೇ ಸಲ 3 ಸಾವಿರ ತೊಗರಿ ಬೆಳೆಗಾರರು ಮತ್ತು ವಿಸ್ತರಣಾ ಕಾರ್ಯಕರ್ತರು ಭಾಗವಹಿಸಬಹುದು. ಆನ್ ಲೈನ್ ತರಬೇತಿಗೆ ಲಿಂಕ್https://zoom.us/i/929532558292pwd=TUVOVGZYTWJZMTdUSG5DNU1ScTQ1UT09 ಮತ್ತು ಪಾಸ್ ಕೋಡ್:123123, ನಮೂದಿಸಿ ತರಬೇತಿ ಪಡೆಯಬಹುದು.
ಹೆಚ್ಚಿನ ಮಾಹಿತಿಗೆ ಕೃಷಿ ಇಲಾಖೆಯ ಸಿಬ್ಬಂದಿ/ಅಧಿಕಾರಿಗಳನ್ನು ಅಥವಾ ಮೊಬೈಲ್ ಸಂ:9481425522/ 9591212871/ 9964689340 ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…