ಜುಲೈ 19 ರಂದು ತೊಗರಿ ಸೊರಗು ರೋಗದ ಸಮಗ್ರ ನಿರ್ವಹಣೆಯ ಬಗ್ಗೆ ರೈತರಿಗೆ ರಾಜ್ಯಮಟ್ಟದ ಆನ್‌ಲೈನ್‌ ತರಬೇತಿ

ಕೃಷಿ ಇಲಾಖೆ ಮತ್ತು ಕೃಷಿ ಸಂಬಂಧಿ ವಿಶ್ವವಿದ್ಯಾನಿಲಯಗಳು ರೈತರ ಕೃಷಿ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಧ್ಯೇಯೋದ್ದೇಶಗಳನ್ನು ಹೊಂದಿವೆ. ಈ ನಿಟ್ಟಿನಲ್ಲಿ ನಿರಂತರವಾಗಿ ತರಬೇತಿ ಕಾರ್ಯಕ್ರಮಗಳನ್ನು ಸ್ಥಳೀಯ ಮಟ್ಟದಲ್ಲಿ ಆಯೋಜನೆ.

ಕೋವಿಡ್-19 ಸಮಯದಲ್ಲಿಯೂ ಆನ್‌ಲೈನ್‌ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಮುಂದುವರೆಸಿಕೊಂಡು ಬಂದಿವೆ. ಕಾಲಕಾಲಕ್ಕೆ ರಾಜ್ಯಮಟ್ಟದ ರೈತರ ಕೃಷಿ ಸಮಸ್ಯೆಗಳನ್ನು ಗುರುತಿಸಿ ನಿರಂತರವಾಗಿ ಆನ್‌ಲೈನ್ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡರೆ ಹಣ ಮತ್ತು ಸಮಯ ಉಳಿತಾಯವಾಗುವುದರ ಜೊತೆಗೆ ಶೀಘ್ರವಾಗಿ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗುತ್ತದೆ.

ಸಮೇತಿ(ದಕ್ಷಿಣ), ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಮತ್ತು ಸಮೇತಿ(ಉತ್ತರ) ಕೃಷಿ ವಿಶ್ವವಿದ್ಯಾನಿಲಯ, ಧಾರವಾಡದವರು ರಾಜ್ಯ ಮಟ್ಟದ ರೈತರ ಕೃಷಿ ಸಮಸ್ಯೆಗಳು ಮತ್ತು ಪರಿಹಾರ ಎಂಬ ವಿನೂತನ ಸರಣಿ ಕಾರ್ಯಕ್ರಮವನ್ನು ಪ್ರಾರಂಭಿಸುತ್ತಿದೆ.

ತೊಗರಿಯನ್ನು ಪ್ರಮುಖವಾಗಿ ಕಲುಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬೀದರ್‍, ಬೆಂಗಳೂರು (ಗ್ರಾಮಾಂತರ) ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಬೆಳೆಯಲಾಗುತ್ತಿದೆ. ತೊಗರಿಯನ್ನು ರಾಜ್ಯದಲ್ಲಿ 16.64 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ. ತೊಗರಿಗೆ ಬರುವ ಪ್ರಮುಖ ರೋಗವೆಂದರೆ ಸೊರಗು ರೋಗ ಅಥವಾ ನೆಟ್ಟಿ ರೋಗ, ಈ ರೋಗವು ಕಳೆದ ವರ್ಷ (2022-23) ತೊಗರಿ ಕಣಜ ಎಂದು ಹೆಸರು ಪಡೆದಿರುವ ಕಲುಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸುಮಾರು 0.78 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತುತ್ತಾಗಿತ್ತು.

ಈ ವರ್ಷವು ಸಹ ಬಿತ್ತನೆಯಾದ ತೊಗರಿ ಬೆಳೆಯು ಸೊರಗು ರೋಗಕ್ಕೆ ತುತ್ತಾಗುತ್ತಿದೆ. ಇದನ್ನು ಮನಗೊಂಡು ಮುಂಜಾಗ್ರತ ಕ್ರಮವಾಗಿ ಕೃಷಿ ಇಲಾಖೆ, ಸಮೇತಿ (ದಕ್ಷಿಣ), ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಮತ್ತು ಸಮೇತಿ (ಉತ್ತರ) ಕೃಷಿ ವಿಶ್ವವಿದ್ಯಾನಿಲಯ, ಧಾರವಾಡದವರು ಜಂಟಿಯಾಗಿ ದಿನಾಂಕ:2023 ರ ಜುಲೈ 19 (ಬುಧವಾರ) ದಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ನೂತನ ಪ್ರಯತ್ನವಾಗಿ ಇದೇ ಪ್ರಪ್ರಥಮ ಬಾರಿಗೆ ರಾಜ್ಯಮಟ್ಟದ ಆನ್‌ಲೈನ್‌ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿವೆ.

ಒಂದೇ ಸಲ 3 ಸಾವಿರ ತೊಗರಿ ಬೆಳೆಗಾರರು ಮತ್ತು ವಿಸ್ತರಣಾ ಕಾರ್ಯಕರ್ತರು ಭಾಗವಹಿಸಬಹುದು. ಆನ್ ಲೈನ್ ತರಬೇತಿಗೆ ಲಿಂಕ್https://zoom.us/i/929532558292pwd=TUVOVGZYTWJZMTdUSG5DNU1ScTQ1UT09 ಮತ್ತು ಪಾಸ್ ಕೋಡ್:123123, ನಮೂದಿಸಿ ತರಬೇತಿ ಪಡೆಯಬಹುದು.

ಹೆಚ್ಚಿನ ಮಾಹಿತಿಗೆ ಕೃಷಿ ಇಲಾಖೆಯ ಸಿಬ್ಬಂದಿ/ಅಧಿಕಾರಿಗಳನ್ನು ಅಥವಾ ಮೊಬೈಲ್ ಸಂ:9481425522/ 95912128719964689340 ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

7 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

15 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

15 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago