ಜುಲೈ 19 ರಂದು ತೊಗರಿ ಸೊರಗು ರೋಗದ ಸಮಗ್ರ ನಿರ್ವಹಣೆಯ ಬಗ್ಗೆ ರೈತರಿಗೆ ರಾಜ್ಯಮಟ್ಟದ ಆನ್‌ಲೈನ್‌ ತರಬೇತಿ

ಕೃಷಿ ಇಲಾಖೆ ಮತ್ತು ಕೃಷಿ ಸಂಬಂಧಿ ವಿಶ್ವವಿದ್ಯಾನಿಲಯಗಳು ರೈತರ ಕೃಷಿ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಧ್ಯೇಯೋದ್ದೇಶಗಳನ್ನು ಹೊಂದಿವೆ. ಈ ನಿಟ್ಟಿನಲ್ಲಿ ನಿರಂತರವಾಗಿ ತರಬೇತಿ ಕಾರ್ಯಕ್ರಮಗಳನ್ನು ಸ್ಥಳೀಯ ಮಟ್ಟದಲ್ಲಿ ಆಯೋಜನೆ.

ಕೋವಿಡ್-19 ಸಮಯದಲ್ಲಿಯೂ ಆನ್‌ಲೈನ್‌ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಮುಂದುವರೆಸಿಕೊಂಡು ಬಂದಿವೆ. ಕಾಲಕಾಲಕ್ಕೆ ರಾಜ್ಯಮಟ್ಟದ ರೈತರ ಕೃಷಿ ಸಮಸ್ಯೆಗಳನ್ನು ಗುರುತಿಸಿ ನಿರಂತರವಾಗಿ ಆನ್‌ಲೈನ್ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡರೆ ಹಣ ಮತ್ತು ಸಮಯ ಉಳಿತಾಯವಾಗುವುದರ ಜೊತೆಗೆ ಶೀಘ್ರವಾಗಿ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗುತ್ತದೆ.

ಸಮೇತಿ(ದಕ್ಷಿಣ), ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಮತ್ತು ಸಮೇತಿ(ಉತ್ತರ) ಕೃಷಿ ವಿಶ್ವವಿದ್ಯಾನಿಲಯ, ಧಾರವಾಡದವರು ರಾಜ್ಯ ಮಟ್ಟದ ರೈತರ ಕೃಷಿ ಸಮಸ್ಯೆಗಳು ಮತ್ತು ಪರಿಹಾರ ಎಂಬ ವಿನೂತನ ಸರಣಿ ಕಾರ್ಯಕ್ರಮವನ್ನು ಪ್ರಾರಂಭಿಸುತ್ತಿದೆ.

ತೊಗರಿಯನ್ನು ಪ್ರಮುಖವಾಗಿ ಕಲುಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬೀದರ್‍, ಬೆಂಗಳೂರು (ಗ್ರಾಮಾಂತರ) ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಬೆಳೆಯಲಾಗುತ್ತಿದೆ. ತೊಗರಿಯನ್ನು ರಾಜ್ಯದಲ್ಲಿ 16.64 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ. ತೊಗರಿಗೆ ಬರುವ ಪ್ರಮುಖ ರೋಗವೆಂದರೆ ಸೊರಗು ರೋಗ ಅಥವಾ ನೆಟ್ಟಿ ರೋಗ, ಈ ರೋಗವು ಕಳೆದ ವರ್ಷ (2022-23) ತೊಗರಿ ಕಣಜ ಎಂದು ಹೆಸರು ಪಡೆದಿರುವ ಕಲುಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸುಮಾರು 0.78 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತುತ್ತಾಗಿತ್ತು.

ಈ ವರ್ಷವು ಸಹ ಬಿತ್ತನೆಯಾದ ತೊಗರಿ ಬೆಳೆಯು ಸೊರಗು ರೋಗಕ್ಕೆ ತುತ್ತಾಗುತ್ತಿದೆ. ಇದನ್ನು ಮನಗೊಂಡು ಮುಂಜಾಗ್ರತ ಕ್ರಮವಾಗಿ ಕೃಷಿ ಇಲಾಖೆ, ಸಮೇತಿ (ದಕ್ಷಿಣ), ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಮತ್ತು ಸಮೇತಿ (ಉತ್ತರ) ಕೃಷಿ ವಿಶ್ವವಿದ್ಯಾನಿಲಯ, ಧಾರವಾಡದವರು ಜಂಟಿಯಾಗಿ ದಿನಾಂಕ:2023 ರ ಜುಲೈ 19 (ಬುಧವಾರ) ದಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ನೂತನ ಪ್ರಯತ್ನವಾಗಿ ಇದೇ ಪ್ರಪ್ರಥಮ ಬಾರಿಗೆ ರಾಜ್ಯಮಟ್ಟದ ಆನ್‌ಲೈನ್‌ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿವೆ.

ಒಂದೇ ಸಲ 3 ಸಾವಿರ ತೊಗರಿ ಬೆಳೆಗಾರರು ಮತ್ತು ವಿಸ್ತರಣಾ ಕಾರ್ಯಕರ್ತರು ಭಾಗವಹಿಸಬಹುದು. ಆನ್ ಲೈನ್ ತರಬೇತಿಗೆ ಲಿಂಕ್https://zoom.us/i/929532558292pwd=TUVOVGZYTWJZMTdUSG5DNU1ScTQ1UT09 ಮತ್ತು ಪಾಸ್ ಕೋಡ್:123123, ನಮೂದಿಸಿ ತರಬೇತಿ ಪಡೆಯಬಹುದು.

ಹೆಚ್ಚಿನ ಮಾಹಿತಿಗೆ ಕೃಷಿ ಇಲಾಖೆಯ ಸಿಬ್ಬಂದಿ/ಅಧಿಕಾರಿಗಳನ್ನು ಅಥವಾ ಮೊಬೈಲ್ ಸಂ:9481425522/ 95912128719964689340 ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಬೆಂ.ಗ್ರಾ ಜಿ.ಪಂ ನೂತನ ಸಿ.ಇ.ಒ ಡಾ.ವಸಂತಿ ಅಮರ್ ಬಿ.ವಿ ನೇಮಕ

ಬೆಂಗಳೂರು ಗ್ರಾಮಾಂತರ ಜಿ.ಪಂ ನೂತನ ಸಿ.ಇ.ಒ ಆಗಿ ಡಾ.ವಸಂತಿ ಅಮರ್ ಬಿ.ವಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

2 hours ago

ನಾಳೆ( ಏ.19ಕ್ಕೆ) ತಾಲೂಕಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ ನಗರದಲ್ಲಿ ಏ.19 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F02-Raghunathapura, F07-Locall, F14-Scoutcamp & F21-KVN…

4 hours ago

ಬಸವ ಜಯಂತಿ ಮತ್ತು ಅಕ್ಷಯ ತೃತೀಯ ಹಿನ್ನೆಲೆ: ಬಾಲ್ಯವಿವಾಹ ತಡೆಗೆ ಜಾಗೃತಿ ಅಗತ್ಯ- ಡಿಸಿ ಡಾ. ಕೆ.ಎನ್ ಅನುರಾಧ

ಏಪ್ರಿಲ್ 20 ರಂದು ಬಸವ ಜಯಂತಿ ಮತ್ತು ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಬಾಲ್ಯವಿವಾಹಗಳು ಆಗುವ ಸಾಧ್ಯತೆ ಇದ್ದು, ಬಾಲ್ಯ ವಿವಾಹಗಳನ್ನು…

5 hours ago

ಬಿಲ್ ಕಲೆಕ್ಟರ್ ಲೋಕಾ ಬಲೆಗೆ

ಬಿಲ್ ಕಲೆಕ್ಟರ್ ಲೋಕಾ ಬಲೆಗೆ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.. ಲೋಕಾ ಬಲೆಗೆ ಬಿದ್ದ ಬಿಲ್ ಕಲೆಕ್ಟರ್ 'ಇ' ಖಾತೆ…

10 hours ago

ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ: ಟ್ರ್ಯಾಕ್ಟರ್ ಚಾಲಕ ಸಾವು

ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಚಾಲಕ ಸಾವನ್ನಪ್ಪಿರುವ ಘಟನೆ ದಾಬಸ್ ಪೇಟೆ - ಹೊಸಕೋಟೆ…

12 hours ago

ಇಚ್ಚಾ ಶಕ್ತಿಯ ಕೊರತೆ ಅಥವಾ ಕಪಟ ನಾಟಕ ಅಥವಾ ಸ್ವ ಹಿತಾಸಕ್ತಿ……

ಇಚ್ಚಾ ಶಕ್ತಿಯ ಕೊರತೆ ಅಥವಾ ಕಪಟ ನಾಟಕ ಅಥವಾ ಸ್ವ ಹಿತಾಸಕ್ತಿ...... ಮತದಾರರ ಪಟ್ಟಿ ಪರಿಷ್ಕರಣೆ, ಲೋಕಸಭಾ ಕ್ಷೇತ್ರಗಳ ಪುನರ್…

15 hours ago