ಜುಲೈ 19 ರಂದು ತೊಗರಿ ಸೊರಗು ರೋಗದ ಸಮಗ್ರ ನಿರ್ವಹಣೆಯ ಬಗ್ಗೆ ರೈತರಿಗೆ ರಾಜ್ಯಮಟ್ಟದ ಆನ್‌ಲೈನ್‌ ತರಬೇತಿ

ಕೃಷಿ ಇಲಾಖೆ ಮತ್ತು ಕೃಷಿ ಸಂಬಂಧಿ ವಿಶ್ವವಿದ್ಯಾನಿಲಯಗಳು ರೈತರ ಕೃಷಿ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಧ್ಯೇಯೋದ್ದೇಶಗಳನ್ನು ಹೊಂದಿವೆ. ಈ ನಿಟ್ಟಿನಲ್ಲಿ ನಿರಂತರವಾಗಿ ತರಬೇತಿ ಕಾರ್ಯಕ್ರಮಗಳನ್ನು ಸ್ಥಳೀಯ ಮಟ್ಟದಲ್ಲಿ ಆಯೋಜನೆ.

ಕೋವಿಡ್-19 ಸಮಯದಲ್ಲಿಯೂ ಆನ್‌ಲೈನ್‌ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಮುಂದುವರೆಸಿಕೊಂಡು ಬಂದಿವೆ. ಕಾಲಕಾಲಕ್ಕೆ ರಾಜ್ಯಮಟ್ಟದ ರೈತರ ಕೃಷಿ ಸಮಸ್ಯೆಗಳನ್ನು ಗುರುತಿಸಿ ನಿರಂತರವಾಗಿ ಆನ್‌ಲೈನ್ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡರೆ ಹಣ ಮತ್ತು ಸಮಯ ಉಳಿತಾಯವಾಗುವುದರ ಜೊತೆಗೆ ಶೀಘ್ರವಾಗಿ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗುತ್ತದೆ.

ಸಮೇತಿ(ದಕ್ಷಿಣ), ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಮತ್ತು ಸಮೇತಿ(ಉತ್ತರ) ಕೃಷಿ ವಿಶ್ವವಿದ್ಯಾನಿಲಯ, ಧಾರವಾಡದವರು ರಾಜ್ಯ ಮಟ್ಟದ ರೈತರ ಕೃಷಿ ಸಮಸ್ಯೆಗಳು ಮತ್ತು ಪರಿಹಾರ ಎಂಬ ವಿನೂತನ ಸರಣಿ ಕಾರ್ಯಕ್ರಮವನ್ನು ಪ್ರಾರಂಭಿಸುತ್ತಿದೆ.

ತೊಗರಿಯನ್ನು ಪ್ರಮುಖವಾಗಿ ಕಲುಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬೀದರ್‍, ಬೆಂಗಳೂರು (ಗ್ರಾಮಾಂತರ) ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಬೆಳೆಯಲಾಗುತ್ತಿದೆ. ತೊಗರಿಯನ್ನು ರಾಜ್ಯದಲ್ಲಿ 16.64 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ. ತೊಗರಿಗೆ ಬರುವ ಪ್ರಮುಖ ರೋಗವೆಂದರೆ ಸೊರಗು ರೋಗ ಅಥವಾ ನೆಟ್ಟಿ ರೋಗ, ಈ ರೋಗವು ಕಳೆದ ವರ್ಷ (2022-23) ತೊಗರಿ ಕಣಜ ಎಂದು ಹೆಸರು ಪಡೆದಿರುವ ಕಲುಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸುಮಾರು 0.78 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತುತ್ತಾಗಿತ್ತು.

ಈ ವರ್ಷವು ಸಹ ಬಿತ್ತನೆಯಾದ ತೊಗರಿ ಬೆಳೆಯು ಸೊರಗು ರೋಗಕ್ಕೆ ತುತ್ತಾಗುತ್ತಿದೆ. ಇದನ್ನು ಮನಗೊಂಡು ಮುಂಜಾಗ್ರತ ಕ್ರಮವಾಗಿ ಕೃಷಿ ಇಲಾಖೆ, ಸಮೇತಿ (ದಕ್ಷಿಣ), ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಮತ್ತು ಸಮೇತಿ (ಉತ್ತರ) ಕೃಷಿ ವಿಶ್ವವಿದ್ಯಾನಿಲಯ, ಧಾರವಾಡದವರು ಜಂಟಿಯಾಗಿ ದಿನಾಂಕ:2023 ರ ಜುಲೈ 19 (ಬುಧವಾರ) ದಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ನೂತನ ಪ್ರಯತ್ನವಾಗಿ ಇದೇ ಪ್ರಪ್ರಥಮ ಬಾರಿಗೆ ರಾಜ್ಯಮಟ್ಟದ ಆನ್‌ಲೈನ್‌ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿವೆ.

ಒಂದೇ ಸಲ 3 ಸಾವಿರ ತೊಗರಿ ಬೆಳೆಗಾರರು ಮತ್ತು ವಿಸ್ತರಣಾ ಕಾರ್ಯಕರ್ತರು ಭಾಗವಹಿಸಬಹುದು. ಆನ್ ಲೈನ್ ತರಬೇತಿಗೆ ಲಿಂಕ್https://zoom.us/i/929532558292pwd=TUVOVGZYTWJZMTdUSG5DNU1ScTQ1UT09 ಮತ್ತು ಪಾಸ್ ಕೋಡ್:123123, ನಮೂದಿಸಿ ತರಬೇತಿ ಪಡೆಯಬಹುದು.

ಹೆಚ್ಚಿನ ಮಾಹಿತಿಗೆ ಕೃಷಿ ಇಲಾಖೆಯ ಸಿಬ್ಬಂದಿ/ಅಧಿಕಾರಿಗಳನ್ನು ಅಥವಾ ಮೊಬೈಲ್ ಸಂ:9481425522/ 95912128719964689340 ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

6 minutes ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

38 minutes ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

6 hours ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

10 hours ago

ಪರೀಕ್ಷಾ ಅಕ್ರಮಗಳು……

ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…

13 hours ago

ಮುತ್ತತ್ತಿಯಲ್ಲಿ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಸಾವು

ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…

14 hours ago