ಜುಲೈ 8 ರಂದು ಲೋಕ ಅದಾಲತ್‌ ಕಾರ್ಯಕ್ರಮ: ನ್ಯಾ. ಎಂ.ಎಲ್.ರಘುನಾಥ್

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನ್ಯಾಯಾಲಯ ಆವರಣಗಳಲ್ಲಿ ಜುಲೈ 8 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಬೃಹತ್ ಲೋಕ ಅದಾಲತ್‌ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಂ.ಎಲ್ ರಘುನಾಥ್ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ರಾಷ್ಟ್ರೀಯ ಲೋಕ ಅದಾಲತ್‌ಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ನೆಲಮಹಡಿ ಸಿಟಿ ಸಿವಿಲ್ ನ್ಯಾಯಾಲಯದ ಕೊಠಡಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.

ವ್ಯಾಜ್ಯ ಪೂರ್ವ ಪ್ರಕರಣಗಳಾದಂತಹ ಚೆಕ್ ಅಮಾನ್ಯ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಕಾರ್ಮಿಕ ವಿವಾದಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಪ್ರಕರಣಗಳು, ವಿದ್ಯುತ್‌ ಹಾಗೂ ನೀರಿನ ಶುಲ್ಕಗಳಿಗೆ ಸಂಬಂಧಿಸಿದ ಹಾಗೂ ವೈವಾಹಿಕ, ಕುಟುಂಬ ನ್ಯಾಯಾಲಯ ಇತರೆ ಸಿವಿಲ್ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯ ಪೂರ್ವ ಪ್ರಕರಣಗಳು ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ರಾಜೀಯಾಗಬಲ್ಲ ಅಪರಾಧ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ, ಭೂಸ್ವಾಧೀನ, ಕಂದಾಯ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಬಾಡಿಗೆ, ಬೋಗ್ಯ ಹಕ್ಕುಗಳಂತಹ ಪ್ರಕರಣಗಳು ಲೋಕ ಅದಾಲತ್‌ನಲ್ಲಿ ಇತ್ಯರ್ಥವಾಗಲಿವೆ ಎಂದು ಮಾಹಿತಿ ನೀಡಿದರು.

ಕಳೆದ ಬಾರಿ ಎರಡು ಲಕ್ಷ ಪ್ರಕರಣಗಳು ಲೋಕ ಅದಾಲತ್‌ನಲ್ಲಿ ನೊಂದಾಯಿಸಲ್ಪಟ್ಟಿದ್ದು, ಸುಮಾರು ಒಂದು ಲಕ್ಷ ಎಪ್ಪತ್ತೊಂಬತ್ತು ಸಾವಿರದಷ್ಟು ಪ್ರಕರಣಗಳು ಇತ್ಯರ್ಥಗೊಂಡಿದ್ದವು. ಈ ಬಾರಿ ಸುಮಾರು 2 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಿರುವುದಾಗಿ ತಿಳಿಸಿದರು.

ಸಾರ್ವಜನಿಕರು ಲೋಕ ಅದಾಲತ್‌ನ್ನು ಸದುಪಯೋಗ ಪಡಿಸಿಕೊಂಡು ಹಣ ಸಮಯ ಎರಡನ್ನು ಉಳಿತಾಯ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 080-22222919 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಅವರು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂದೀಪ್ ಸಾಲಿಯಾನ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

18 minutes ago

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

3 hours ago

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

15 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

16 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

21 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

23 hours ago