ಜುಲೈ 8 ರಂದು ಲೋಕ ಅದಾಲತ್‌ ಕಾರ್ಯಕ್ರಮ: ನ್ಯಾ. ಎಂ.ಎಲ್.ರಘುನಾಥ್

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನ್ಯಾಯಾಲಯ ಆವರಣಗಳಲ್ಲಿ ಜುಲೈ 8 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಬೃಹತ್ ಲೋಕ ಅದಾಲತ್‌ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಂ.ಎಲ್ ರಘುನಾಥ್ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ರಾಷ್ಟ್ರೀಯ ಲೋಕ ಅದಾಲತ್‌ಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ನೆಲಮಹಡಿ ಸಿಟಿ ಸಿವಿಲ್ ನ್ಯಾಯಾಲಯದ ಕೊಠಡಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.

ವ್ಯಾಜ್ಯ ಪೂರ್ವ ಪ್ರಕರಣಗಳಾದಂತಹ ಚೆಕ್ ಅಮಾನ್ಯ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಕಾರ್ಮಿಕ ವಿವಾದಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಪ್ರಕರಣಗಳು, ವಿದ್ಯುತ್‌ ಹಾಗೂ ನೀರಿನ ಶುಲ್ಕಗಳಿಗೆ ಸಂಬಂಧಿಸಿದ ಹಾಗೂ ವೈವಾಹಿಕ, ಕುಟುಂಬ ನ್ಯಾಯಾಲಯ ಇತರೆ ಸಿವಿಲ್ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯ ಪೂರ್ವ ಪ್ರಕರಣಗಳು ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ರಾಜೀಯಾಗಬಲ್ಲ ಅಪರಾಧ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ, ಭೂಸ್ವಾಧೀನ, ಕಂದಾಯ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಬಾಡಿಗೆ, ಬೋಗ್ಯ ಹಕ್ಕುಗಳಂತಹ ಪ್ರಕರಣಗಳು ಲೋಕ ಅದಾಲತ್‌ನಲ್ಲಿ ಇತ್ಯರ್ಥವಾಗಲಿವೆ ಎಂದು ಮಾಹಿತಿ ನೀಡಿದರು.

ಕಳೆದ ಬಾರಿ ಎರಡು ಲಕ್ಷ ಪ್ರಕರಣಗಳು ಲೋಕ ಅದಾಲತ್‌ನಲ್ಲಿ ನೊಂದಾಯಿಸಲ್ಪಟ್ಟಿದ್ದು, ಸುಮಾರು ಒಂದು ಲಕ್ಷ ಎಪ್ಪತ್ತೊಂಬತ್ತು ಸಾವಿರದಷ್ಟು ಪ್ರಕರಣಗಳು ಇತ್ಯರ್ಥಗೊಂಡಿದ್ದವು. ಈ ಬಾರಿ ಸುಮಾರು 2 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಿರುವುದಾಗಿ ತಿಳಿಸಿದರು.

ಸಾರ್ವಜನಿಕರು ಲೋಕ ಅದಾಲತ್‌ನ್ನು ಸದುಪಯೋಗ ಪಡಿಸಿಕೊಂಡು ಹಣ ಸಮಯ ಎರಡನ್ನು ಉಳಿತಾಯ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 080-22222919 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಅವರು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂದೀಪ್ ಸಾಲಿಯಾನ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

7 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

7 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

22 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago