ದೊಡ್ಡಬಳ್ಳಾಪುರ: ಭಾರತೀಯ ನ್ಯಾಯ ಸಂಹಿತೆ-2023 (ಬಿ.ಎಂ.ಎಸ್)ಸಂಸತ್ತಿನಲ್ಲಿ ಅಂಗೀಕರಿಸುವ ಮೂಲಕ ಹೊಸ ಕಾನೂನಿನಲ್ಲಿ ರಸ್ತೆ ಸಾರಿಗೆ ಚಾಲಕರನ್ನು ಅಮಾನುಷವಾಗಿ ಶಿಕ್ಷಿಸುವ ಕ್ರಮಕ್ಕೆ ಮುಂದಾಗಿದೆ. ಚಾಲಕ ವಿರೋಧಿ ಮತ್ತು ಜನ ವಿರೋಧಿ ನೀತಿಗಳ ವಿರುದ್ಧ ಜು.15 ಬೆಳಿಗ್ಗೆ 10.30ಕ್ಕೆ ನಗರದ ಸಿದ್ದಲಿಂಗಯ್ಯ ವೃತ್ತದಿಂದ ತಾಲ್ಲೂಕು ಕಚೇರಿವರೆಗೆ ಮೆರವಣಿಗೆ ನಡೆಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತಿದೆ ಎಂದು ಫೆಡರೇಷನ್ ಆಫ್ ಕರ್ನಾಟಕ ಆಟೋರಿಕ್ಷಾ ಡ್ರೈವರ್ಸ್ ಯೂನಿಯನ್ ತಾಲ್ಲೂಕು ಘಟಕದ ಅಧ್ಯಕ್ಷ ಪಿ.ಎ.ವೆಂಕಟೇಶ್ ಹೇಳಿದರು.
ಅವರು ನಗರದ ಸಿಪಿಐಎಂ ಕಾರ್ಯಾಲಯದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ವಾಹನ ಮಾಲೀಕರಿಂದ ತೆರಿಗೆ ಸಂಗ್ರಹ ಮಾಡಿದ್ದರು ಸಹ ಗುಂಡಿ ಬಿದ್ದಿರುವ ರಸ್ತೆಗಳ ದುರಸ್ಥಿ ಮಾತ್ರ ವರ್ಷಗಳು ಕಳೆದರು ನಡೆಯುತ್ತಿಲ್ಲ. ಪ್ರತಿನಿತ್ಯ ಟ್ರಾಫಿಕ್ ಜಾಮ್ ಆಗುವ ಪ್ರಮುಖ ವೃತ್ತಗಳಲ್ಲಿ ಸಿಗ್ನಲ್ ಲೈಟ್, ಸಿ.ಸಿ. ಕ್ಯಾಮೆರಾಗಳನ್ನು ಅಳವಡಿಸುವ ಕೆಲಸಗಳು ನಡೆಯುತ್ತಿಲ್ಲ. ಆಟೋ ನಿಲ್ದಾಣಗಳನ್ನು ಆಧುನೀಕರಣ ಮಾಡಲು ಮತ್ತು ಆಟೋ ನಿಲ್ದಾಣಗಳನ್ನು ಅಧಿಕೃತಗೊಳಿಸುವ ಕೆಲಸಗಳು ನಡೆಯುತ್ತಿಲ್ಲ. ಆದರೆ ಹೊಸ ಕಾನೂನಿನ ಮೂಲಕ ದುಬಾರಿ ದಂಡ ಹಾಗೂ ದುಬಾರಿ ಶುಲ್ಕ ವಿಧಿಸುವ ಮೋಟರ್ ವಾಹನಗಳ ತಿದ್ದುಪಡಿಗಳನ್ನು ಮಾತ್ರ ಜಾರಿಗೆ ತರುವ ಸರ್ಕಾರದ ನಿಯಮ ಅವೈಜ್ಞಾನಿಕವಾಗಿದೆ ಎಂದು ದೂರಿದರು.
ಕರ್ನಾಟಕ ಮೋಟರ್ ಟ್ರಾಸ್ಪೋರ್ಟ್ ಮತ್ತು ಇತರೆ ನೌಕರರ ಸಾಮಾಜಿಕ ಸುರಕ್ಷತೆ ಮತ್ತು ಕಲ್ಯಾಣ ಕಾಯ್ದೆ-2024 ಇದರಲ್ಲಿ ಚಾಲಕರ ನೋಂದಣಿ ಹಾಗೂ ಯೋಜನೆಗಳನ್ನು ಶೀಘ್ರವಾಗಿ ಜಾರಿ ಮಾಡಬೇಕು. ಪೆಟ್ರೋಲ್ ಡೀಸೆಲ್ ಹಾಗೂ ಗ್ಯಾಸ್ ಗಳ ಮೇಲೆ ಹಾಕುವ ತೆರಿಗೆಗಳನ್ನು ಕಡಿಮೆ ಮಾಡಬೇಕು. 15 ವರ್ಷಗಳ ಹಳೆಯ ವಾಹನಗಳ ನಿಷೇಧ ವಾಪಸಾತಿಯಲ್ಲಿ ಸಾರಿಗೆ ವಾಹನಗಳ ಇನ್ಸೂರೆನ್ಸ್ ಪಾಲಿಸಿಗಳ ಮೇಲೆ ವಿಧಿಸಿರುವ ಸೆನ್ಸ್ ತೆಗೆದುಹಾಕಬೇಕು. ತಾಲ್ಲೂಕು ಪಂಚಾಯಿತಿ ಮತ್ತು ನಗರಸಭೆಯಲ್ಲಿನ ಆಶ್ರಯ ಯೋಜನೆ ಮೂಲಕ ಸರ್ವರಿಗೂ ಸೂರು ಎಂಬ ಸರ್ಕಾರದ ಆಶಯದಂತೆ ‘ಸಾರಥಿಸುರು’ ಯೋಜನೆಯನ್ನು ಶೀಘ್ರವಾಗಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.
ಹೊಸ ವಾಹನಗಳ ಮೇಲಿನ ಸರ್ಕಾರದ ಮಾರಾಟ ತೆರಿಗೆಯನ್ನು ಶೇ.28ರಿಂದ ಶೇ 5ಕ್ಕೆ ಇಳಿಸಬೇಕು. ಸಾರಿಗೆ ಚಾಲಕರಿಗೆ ಮರಣ ಶಾಸನವಾಗಿರುವ ಭಾರತೀಯ ನ್ಯಾಯ ಸಂಹಿತೆ 2023 (ಬಿ.ಎನ್.ಎಸ್)ರಲ್ಲಿ ಇರುವ ಅಪಘಾತಗಳನ್ನು ಕ್ರಿಮಿನಲ್ ಕೇಸ್ ಮಾಡುವ ಅಂಶಗಳು ರದ್ದಾಗಬೇಕು, ಹತ್ತು ವರ್ಷ ಜೈಲು ಶಿಕ್ಷೆ ಮತ್ತು ₹7 ಲಕ್ಷ ದಂಡ ವಿಧಿಸುವ ಚಾಲಕ ವಿರೋಧಿಯಾದ ಅಂಶಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಫೆಡರೇಷನ್ ಆಫ್ ಕರ್ನಾಟಕ ಆಟೋರಿಕ್ಷಾ ಡ್ರೈವರ್ಸ್ ಯೂನಿಯನ್ ರಾಜ್ಯ ಘಟಕದ ಅಧ್ಯಕ್ಷ ಬಿ.ವಿ.ರಾಘವೇಂದ್ರ, ತಾಲ್ಲೂಕು ಕಾರ್ಯದರ್ಶಿ ಇನಾಯಿತ್ ಪಾಷಾ, ಆಟೋರಿಕ್ಷಾ ಡ್ರೈವರ್ಸ್ ಯೂನಿಯನ್ ಜಿಲ್ಲಾ ಅಧ್ಯಕ್ಷ ಸಿ.ಎಂ.ಶ್ರೀನಿವಾಸ್, ತಾಲ್ಲೂಕು ಘಟಕದ ಅಧ್ಯಕ್ಷ ಸಾಧಿಕ್ ಪಾಷ,ಕಾರ್ಯದರ್ಶಿ ಎಜಾಜ್ ಪಾಷ, ಖಜಾಂಚಿ ಗುಲ್ಜಾರ್ ಪಾಷಾ, ತಾಲ್ಲೂಕು ಲಾರಿ ಡ್ರೈವರ್ಸ್ ಅಸೋಸಿಷನ್ ತಾಲ್ಲೂಕು ಕಾರ್ಯದರ್ಶಿ ಸೈಯದ್ ಅಲಿಮುಲ್ಲಾ, ತಾಲ್ಲೂಕು ಉಪಾಧ್ಯಕ್ಷ ಭಾಷಾ ಇದ್ದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…