ಜು.15ರಂದು ಚಾಲಕ ವಿರೋಧಿ ಮತ್ತು ಜನ ವಿರೋಧಿ ನೀತಿಗಳ ವಿರುದ್ಧ ಮೆರವಣಿಗೆ

ದೊಡ್ಡಬಳ್ಳಾಪುರ: ಭಾರತೀಯ ನ್ಯಾಯ ಸಂಹಿತೆ-2023 (ಬಿ.ಎಂ.ಎಸ್)ಸಂಸತ್ತಿನಲ್ಲಿ ಅಂಗೀಕರಿಸುವ ಮೂಲಕ ಹೊಸ ಕಾನೂನಿನಲ್ಲಿ ರಸ್ತೆ ಸಾರಿಗೆ ಚಾಲಕರನ್ನು ಅಮಾನುಷವಾಗಿ ಶಿಕ್ಷಿಸುವ ಕ್ರಮಕ್ಕೆ ಮುಂದಾಗಿದೆ. ಚಾಲಕ ವಿರೋಧಿ ಮತ್ತು ಜನ ವಿರೋಧಿ ನೀತಿಗಳ ವಿರುದ್ಧ ಜು.15 ಬೆಳಿಗ್ಗೆ 10.30ಕ್ಕೆ ನಗರದ ಸಿದ್ದಲಿಂಗಯ್ಯ ವೃತ್ತದಿಂದ ತಾಲ್ಲೂಕು ಕಚೇರಿವರೆಗೆ ಮೆರವಣಿಗೆ ನಡೆಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತಿದೆ ಎಂದು ಫೆಡರೇಷನ್ ಆಫ್ ಕರ್ನಾಟಕ ಆಟೋರಿಕ್ಷಾ ಡ್ರೈವರ್ಸ್ ಯೂನಿಯನ್ ತಾಲ್ಲೂಕು ಘಟಕದ ಅಧ್ಯಕ್ಷ ಪಿ.ಎ.ವೆಂಕಟೇಶ್ ಹೇಳಿದರು.

ಅವರು ನಗರದ ಸಿಪಿಐಎಂ ಕಾರ್ಯಾಲಯದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ವಾಹನ ಮಾಲೀಕರಿಂದ ತೆರಿಗೆ ಸಂಗ್ರಹ ಮಾಡಿದ್ದರು ಸಹ ಗುಂಡಿ ಬಿದ್ದಿರುವ ರಸ್ತೆಗಳ ದುರಸ್ಥಿ ಮಾತ್ರ ವರ್ಷಗಳು ಕಳೆದರು ನಡೆಯುತ್ತಿಲ್ಲ. ಪ್ರತಿನಿತ್ಯ ಟ್ರಾಫಿಕ್ ಜಾಮ್ ಆಗುವ ಪ್ರಮುಖ ವೃತ್ತಗಳಲ್ಲಿ ಸಿಗ್ನಲ್ ಲೈಟ್, ಸಿ.ಸಿ. ಕ್ಯಾಮೆರಾಗಳನ್ನು ಅಳವಡಿಸುವ ಕೆಲಸಗಳು ನಡೆಯುತ್ತಿಲ್ಲ. ಆಟೋ ನಿಲ್ದಾಣಗಳನ್ನು ಆಧುನೀಕರಣ ಮಾಡಲು ಮತ್ತು ಆಟೋ ನಿಲ್ದಾಣಗಳನ್ನು ಅಧಿಕೃತಗೊಳಿಸುವ ಕೆಲಸಗಳು ನಡೆಯುತ್ತಿಲ್ಲ. ಆದರೆ ಹೊಸ ಕಾನೂನಿನ ಮೂಲಕ ದುಬಾರಿ ದಂಡ ಹಾಗೂ ದುಬಾರಿ ಶುಲ್ಕ ವಿಧಿಸುವ ಮೋಟರ್ ವಾಹನಗಳ ತಿದ್ದುಪಡಿಗಳನ್ನು ಮಾತ್ರ ಜಾರಿಗೆ ತರುವ ಸರ್ಕಾರದ ನಿಯಮ ಅವೈಜ್ಞಾನಿಕವಾಗಿದೆ ಎಂದು ದೂರಿದರು.

ಕರ್ನಾಟಕ ಮೋಟರ್ ಟ್ರಾಸ್ಪೋರ್ಟ್ ಮತ್ತು ಇತರೆ ನೌಕರರ ಸಾಮಾಜಿಕ ಸುರಕ್ಷತೆ ಮತ್ತು ಕಲ್ಯಾಣ ಕಾಯ್ದೆ-2024 ಇದರಲ್ಲಿ ಚಾಲಕರ ನೋಂದಣಿ ಹಾಗೂ ಯೋಜನೆಗಳನ್ನು ಶೀಘ್ರವಾಗಿ ಜಾರಿ ಮಾಡಬೇಕು. ಪೆಟ್ರೋಲ್ ಡೀಸೆಲ್ ಹಾಗೂ ಗ್ಯಾಸ್ ಗಳ ಮೇಲೆ ಹಾಕುವ ತೆರಿಗೆಗಳನ್ನು ಕಡಿಮೆ ಮಾಡಬೇಕು. 15 ವರ್ಷಗಳ ಹಳೆಯ ವಾಹನಗಳ ನಿಷೇಧ ವಾಪಸಾತಿಯಲ್ಲಿ ಸಾರಿಗೆ ವಾಹನಗಳ ಇನ್ಸೂರೆನ್ಸ್ ಪಾಲಿಸಿಗಳ ಮೇಲೆ ವಿಧಿಸಿರುವ ಸೆನ್ಸ್ ತೆಗೆದುಹಾಕಬೇಕು. ತಾಲ್ಲೂಕು ಪಂಚಾಯಿತಿ ಮತ್ತು ನಗರಸಭೆಯಲ್ಲಿನ ಆಶ್ರಯ ಯೋಜನೆ ಮೂಲಕ ಸರ್ವರಿಗೂ ಸೂರು ಎಂಬ ಸರ್ಕಾರದ ಆಶಯದಂತೆ ‘ಸಾರಥಿಸುರು’ ಯೋಜನೆಯನ್ನು ಶೀಘ್ರವಾಗಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಹೊಸ ವಾಹನಗಳ ಮೇಲಿನ ಸರ್ಕಾರದ ಮಾರಾಟ ತೆರಿಗೆಯನ್ನು ಶೇ.28ರಿಂದ ಶೇ 5ಕ್ಕೆ ಇಳಿಸಬೇಕು. ಸಾರಿಗೆ ಚಾಲಕರಿಗೆ ಮರಣ ಶಾಸನವಾಗಿರುವ ಭಾರತೀಯ ನ್ಯಾಯ ಸಂಹಿತೆ 2023 (ಬಿ.ಎನ್.ಎಸ್)ರಲ್ಲಿ ಇರುವ ಅಪಘಾತಗಳನ್ನು ಕ್ರಿಮಿನಲ್ ಕೇಸ್ ಮಾಡುವ ಅಂಶಗಳು ರದ್ದಾಗಬೇಕು, ಹತ್ತು ವರ್ಷ ಜೈಲು ಶಿಕ್ಷೆ ಮತ್ತು ₹7 ಲಕ್ಷ ದಂಡ ವಿಧಿಸುವ ಚಾಲಕ ವಿರೋಧಿಯಾದ ಅಂಶಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಫೆಡರೇಷನ್ ಆಫ್ ಕರ್ನಾಟಕ ಆಟೋರಿಕ್ಷಾ ಡ್ರೈವರ್ಸ್ ಯೂನಿಯನ್ ರಾಜ್ಯ ಘಟಕದ ಅಧ್ಯಕ್ಷ ಬಿ.ವಿ.ರಾಘವೇಂದ್ರ, ತಾಲ್ಲೂಕು ಕಾರ್ಯದರ್ಶಿ ಇನಾಯಿತ್ ಪಾಷಾ, ಆಟೋರಿಕ್ಷಾ ಡ್ರೈವರ್ಸ್ ಯೂನಿಯನ್ ಜಿಲ್ಲಾ ಅಧ್ಯಕ್ಷ ಸಿ.ಎಂ.ಶ್ರೀನಿವಾಸ್, ತಾಲ್ಲೂಕು ಘಟಕದ ಅಧ್ಯಕ್ಷ ಸಾಧಿಕ್ ಪಾಷ,ಕಾರ್ಯದರ್ಶಿ ಎಜಾಜ್ ಪಾಷ, ಖಜಾಂಚಿ ಗುಲ್ಜಾರ್ ಪಾಷಾ, ತಾಲ್ಲೂಕು ಲಾರಿ ಡ್ರೈವರ್ಸ್ ಅಸೋಸಿಷನ್ ತಾಲ್ಲೂಕು ಕಾರ್ಯದರ್ಶಿ ಸೈಯದ್ ಅಲಿಮುಲ್ಲಾ, ತಾಲ್ಲೂಕು ಉಪಾಧ್ಯಕ್ಷ ಭಾಷಾ ಇದ್ದರು.

Ramesh Babu

Journalist

Recent Posts

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

7 hours ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

10 hours ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

14 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

1 day ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

1 day ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

1 day ago