ರಾಜ್ಯ ಮಟ್ಟದ ಭೋವಿ ಬೃಹತ್ ಸಮಾವೇಶವನ್ನು ಜುಲೈ 18ರಂದು ಚಿತ್ರದುರ್ಗದಲ್ಲಿ ಹಮ್ಮಿಕೊಳ್ಳಲಾಗಿದ್ದು, ಬೆಂ.ಗ್ರಾಮಾಂತರ ಜಿಲ್ಲೆಯ ಭೋವಿ ಸಮಾಜ ಸಮಾವೇಶಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಭೋವಿ ಸಮಾಜದ ಅಧ್ಯಕ್ಷ ರಾಮಕೃಷ್ಣ ತಿಳಿಸಿದರು.
ನಗರದ ಬೆಂ.ಗ್ರಾ. ಜಿಲ್ಲಾ ಭೋವಿ ಸಂಘದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿತನ್ನುದ್ದೇಶಿಸಿ ಅವರು ಮಾತನಾಡಿದರು, ಜುಲೈ 18 ರಂದು ಚಿತ್ರದುರ್ಗದ ಗುರುಪೀಠದಲ್ಲಿ ರಾಜ್ಯ ಮಟ್ಟದ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶಕ್ಕೆ ಸಚಿವರಾದ ಶಿವರಾಜ ತಂಗಡಗಿ, ಹಾಲಿ ಶಾಸಕರು, ಬೋವಿ ಸಮಾಜದ ಐಎಎಸ್, ಐಪಿಎಸ್ ಅಧಿಕಾರಿಗಳು ಸೇರಿದಂತೆ ಹಲವು ಸಾಧಕರು ಮತ್ತು ಸಮಾಜದ ಮುಖಂಡರು ಭಾಗವಹಿಸಲಿದ್ದಾರೆ,
ಬೆಂ.ಗ್ರಾಮಾಂತರ ಜಿಲ್ಲೆಯಿಂದ ಕಾರ್ಯಕ್ರಮಕ್ಕೆ ಬೇಕಾದ ಎಲ್ಲಾ ರೂಪುರೇಷಗಳನ್ನು ಸಿದ್ಧಪಡಿಸಿಕೊಳ್ಳಲಾಗುತ್ತಿದೆ. ಈ ಬಾರಿಯ ಸಮಾವೇಶದಲ್ಲಿ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಭೋವಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಜನಾಂಗದ ವಧು-ವರರ ವೇದಿಕೆ ಸಿದ್ಧಪಡಿಸಲಾಗಿದೆ ಎಂದರು.
ಈ ಸಮಾವೇಶಕ್ಕೆ ಜಿಲ್ಲೆಯ ಭೋವಿ ಸಮಾಜದ ಜನಾಂಗ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಸಮಾಜದ ಒಗ್ಗಟ್ಟು ಪ್ರದರ್ಶನ ಮಾಡಬೇಕು ಎಂದು ಅವರು ಮನವಿ ಮಾಡಿಕೊಂಡರು.
ಈ ವೇಳೆ ಹೊಸಕೋಟೆ ಭೋವಿ ಸಂಘದ ಅಧ್ಯಕ್ಷ ವೆಂಕಟೇಶ್, ದೇವನಹಳ್ಳಿ ಅಧ್ಯಕ್ಷ ಕೆ.ಸಿ.ತಮ್ಮಯ್ಯ, ರಾಮಣ್ಣ, ಶ್ರೀನಿವಾಸ್, ಸೀನಪ್ಪ, ಉದಯ್ ಕುಮಾರ್, ಸುಗ್ರೀವಪ್ಪ ಸೇರಿದಂತೆ ಇತರರು ಇದ್ದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…