ರಾಜ್ಯ ಮಟ್ಟದ ಭೋವಿ ಬೃಹತ್ ಸಮಾವೇಶವನ್ನು ಜುಲೈ 18ರಂದು ಚಿತ್ರದುರ್ಗದಲ್ಲಿ ಹಮ್ಮಿಕೊಳ್ಳಲಾಗಿದ್ದು, ಬೆಂ.ಗ್ರಾಮಾಂತರ ಜಿಲ್ಲೆಯ ಭೋವಿ ಸಮಾಜ ಸಮಾವೇಶಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಭೋವಿ ಸಮಾಜದ ಅಧ್ಯಕ್ಷ ರಾಮಕೃಷ್ಣ ತಿಳಿಸಿದರು.
ನಗರದ ಬೆಂ.ಗ್ರಾ. ಜಿಲ್ಲಾ ಭೋವಿ ಸಂಘದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿತನ್ನುದ್ದೇಶಿಸಿ ಅವರು ಮಾತನಾಡಿದರು, ಜುಲೈ 18 ರಂದು ಚಿತ್ರದುರ್ಗದ ಗುರುಪೀಠದಲ್ಲಿ ರಾಜ್ಯ ಮಟ್ಟದ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶಕ್ಕೆ ಸಚಿವರಾದ ಶಿವರಾಜ ತಂಗಡಗಿ, ಹಾಲಿ ಶಾಸಕರು, ಬೋವಿ ಸಮಾಜದ ಐಎಎಸ್, ಐಪಿಎಸ್ ಅಧಿಕಾರಿಗಳು ಸೇರಿದಂತೆ ಹಲವು ಸಾಧಕರು ಮತ್ತು ಸಮಾಜದ ಮುಖಂಡರು ಭಾಗವಹಿಸಲಿದ್ದಾರೆ,
ಬೆಂ.ಗ್ರಾಮಾಂತರ ಜಿಲ್ಲೆಯಿಂದ ಕಾರ್ಯಕ್ರಮಕ್ಕೆ ಬೇಕಾದ ಎಲ್ಲಾ ರೂಪುರೇಷಗಳನ್ನು ಸಿದ್ಧಪಡಿಸಿಕೊಳ್ಳಲಾಗುತ್ತಿದೆ. ಈ ಬಾರಿಯ ಸಮಾವೇಶದಲ್ಲಿ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಭೋವಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಜನಾಂಗದ ವಧು-ವರರ ವೇದಿಕೆ ಸಿದ್ಧಪಡಿಸಲಾಗಿದೆ ಎಂದರು.
ಈ ಸಮಾವೇಶಕ್ಕೆ ಜಿಲ್ಲೆಯ ಭೋವಿ ಸಮಾಜದ ಜನಾಂಗ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಸಮಾಜದ ಒಗ್ಗಟ್ಟು ಪ್ರದರ್ಶನ ಮಾಡಬೇಕು ಎಂದು ಅವರು ಮನವಿ ಮಾಡಿಕೊಂಡರು.
ಈ ವೇಳೆ ಹೊಸಕೋಟೆ ಭೋವಿ ಸಂಘದ ಅಧ್ಯಕ್ಷ ವೆಂಕಟೇಶ್, ದೇವನಹಳ್ಳಿ ಅಧ್ಯಕ್ಷ ಕೆ.ಸಿ.ತಮ್ಮಯ್ಯ, ರಾಮಣ್ಣ, ಶ್ರೀನಿವಾಸ್, ಸೀನಪ್ಪ, ಉದಯ್ ಕುಮಾರ್, ಸುಗ್ರೀವಪ್ಪ ಸೇರಿದಂತೆ ಇತರರು ಇದ್ದರು.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…