ಜು.18ಕ್ಕೆ ತೂಬಗೆರೆಯಲ್ಲಿ ಪಾರಂಪರಿಕ ಭೂತ ನೆರಿಗೆ

ದೊಡ್ಡಬಳ್ಳಾಪುರ(ತೂಬಗೆರೆ): ತಾಲೂಕಿನ ತೂಬಗೆರೆ ಗ್ರಾಮದಲ್ಲಿ 600 ವರ್ಷಗಳಿಂದ ಆಚರಿಸಿಕೊಂಡು ಬಂದಿರುವ ಪಾರಂಪರಿಕ ಜನಪದ ಆಚರಣೆ ಭೂತ ನೆರಿಗೆ ಇದೇ ಜು.18 ರ ಗುರುವಾರ ಮಧ್ಯಾಹ್ನ 3 ಗಂಟೆಗೆ ನಡೆಸಲು ಇಲ್ಲಿನ ಶ್ರೀ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಾಲಯಲ್ಲಿ ಭೂತ ನೆರಿಗೆ ಆಚರಣಾ ಸಮಿತಿ ಸಭೆ ನೆಡೆಸಿ ತೀರ್ಮಾನಿಸಲಾಯಿತು.

ಪ್ರತಿವರ್ಷದಂತೆ ಈ ವರ್ಷವೂ ಸಹ ಆಷಾಢ ಮಾಸದ ಏಕಾದಶಿಯಾದ ಮಾರನೇ ದಿನವಾದ ದ್ವಾದಶಿಯಂದು ಭೂತ ನೆರಿಗೆ ಹಬ್ಬವನ್ನು ಆಚರಿಸಲು ಸಜ್ಜಾಗಿದ್ದಾರೆ.
ಕರಿಯಣ್ಣ – ಕೆಂಚಣ್ಣರ ವೇಷಧಾರಿಯಾದವರ ಮೇಲೆ ಭೂತ ಆಹ್ವಾನಿಸಿ, ಆರ್ಭಟಿಸುತ್ತವೆ. ಈ ವೇಳೆ, ಇವರ ಹಸಿವು ತಣಿಸುವ ಕೆಲಸ ಆಗುತ್ತದೆ. ವೇಷಧಾರಿಗಳು ಮನೆಗೆ ಬಂದರೆ ಮನೆಯಲ್ಲಿನ ದ್ವೆವ್ವ ಪಿಶಾಚಿಗಳು ಓಡಿ ಹೋಗುತ್ತವೆ ಎಂಬ ನಂಬಿಕೆಯೂ ಇದೆ.

ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಭೂತ ನೆರಿಗೆ ಆಚರಣಾ ಸಮಿತಿಯ ಚಿದಾನಂದ ಗುರೂಜಿ, ವಿಷ್ಣುವಿನ ದ್ವಾರಪಾಲಕರಾದ ಜಯ-ವಿಜಯರು ಶಾಪಕ್ಕೆ ಗುರಿಯಾಗಿ ಕಲಿಯುಗದಲ್ಲಿ ಕರಿಯಣ್ಣ ಕೆಂಚಣ್ಣರಾಗಿ ಭೂಲೋಕಕ್ಕೆ ಬರುತ್ತಾರೆ ಎಂಬ ಐತಿಹಾಸಿಕ ಹಿನ್ನೆಲೆ ಇದೆ. ಸುಮಾರು ಐದು ನೂರು ವರ್ಷಗಳ ಇತಿಹಾಸವಿರುವ ಈ ಭೂತನೆರಿಗೆ ಹಬ್ಬ ಇಂದಿಗೂ ಸಹ ತೂಬಗೆರೆ ಹಾಗೂ ಕಲ್ಲುಕೋಟೆ ಗ್ರಾಮದಲ್ಲಿ ನಡೆದುಕೊಂಡು ಬರುತ್ತಿದೆ. ಭೂತನೆರಿಗೆ ಹಬ್ಬದಲ್ಲಿ ಕರಿಯಣ್ಣ ಮತ್ತು ಕೆಂಚಣ್ಣ ವೇಷಧಾರಿಗಳು ಒಂದು ಕೈಯಲ್ಲಿ ಭೂತದ ಮುಖ ಹೋಲುವ ವರ್ತುಲಾಕಾರದ ನೆರಿಗೆ ಹಿಡಿದಿರುತ್ತಾರೆ. ಮತ್ತೊಂದು ಕೈಯಲ್ಲಿ ಕತ್ತಿ ಹಿಡಿದಿರುತ್ತಾರೆ. ಲಕ್ಷ್ಮಿನರಸಿಂಹಸ್ವಾಮಿ ಭಕ್ತರು ಕೆಂಚಣ್ಣ-ಕರಿಯಣ್ಣರ ಮುಂದೆ ವಿಷ್ಣುವಿನ ನಾಮಸ್ಮರಣೆ ಮತ್ತು ಗುಣಗಾನ ಮಾಡುತ್ತಾ ಇವರನ್ನು ಕೆಣಕುತ್ತಾರೆ. ವಿಷ್ಣುವಿನ ನಾಮಸ್ಮರಣೆ ಸಹಿಸದ ಈ ಕರಿಯಣ್ಣ ಮತ್ತು ಕೆಂಚಣ್ಣ ಭಕ್ತರ ಮೇಲೆ ಕೋಪಗೊಂಡು ಅವರೆಡೆಗೆ ನುಗ್ಗುತ್ತಾರೆ. ಕೋಪಗೊಂಡ ಕರಿಯಣ್ಣ ಕೆಂಚಣ್ಣರನ್ನು ಸಮಾಧಾನ ಮಾಡಲು ಇತರರು ಅವರ ಬಾಯಿಗೆ ಬಾಳೆ ಹಣ್ಣಿನ, ಹಲಸಿನ ಹಣ್ಣಿನಿಂದ ತಯಾರಿಸಿದ ರಸಾಯನವನ್ನು ತಿನ್ನಿಸುತ್ತಾರೆ. ಆವೇಶಕ್ಕೆ ಒಳಗಾದ ಈ ಭೂತಗಳು ಆ ಸಂದರ್ಭದಲ್ಲಿ ಏನು ಕೊಟ್ಟರೂ ತಿನ್ನುತ್ತಾರೆ ಎಂಬುದು ಜಾನಪದರ ನಂಬಿಕೆ ಇದೆ ಎಂದರು.

ಕೆಲವು ಗ್ರಾಮಗಳಲ್ಲಿ ನಡೆಯುವ ಈ ಹಬ್ಬದಲ್ಲಿ ಕರಿಯಣ್ಣ ಮತ್ತು ಕೆಂಚಣ್ಣರ ಬಾಯಿಗೆ ಕುರಿ-ಕೋಳಿಗಳನ್ನು ನೀಡುತ್ತಾರೆ. ಇವುಗಳ ರಕ್ತ ಹೀರುವುದರೊಂದಿಗೆ ಕರಿಯಣ್ಣ-ಕೆಂಚಣ್ಣ ಶಾಂತರಾಗುತಾರೆ ಎನ್ನುವುದು ಈ ಭಾಗದ ಭಕ್ತರ ನಂಬಿಕೆ ಆದ್ದರಿಂದ ತೂಬಗೆರೆ ಸುತ್ತ ಮುತ್ತಲಿನ ಸಕಲ ಆಸ್ತಿಕರು ಈ ಆಚರಣೆಯಲ್ಲಿ ಪಾಲ್ಗೊಳ್ಳಲು ಮನವಿ ಮಾಡಿದರು.

Ramesh Babu

Journalist

Recent Posts

ನೊಂದವರ ನೋವಾ ನೋಯದವರೆತ್ತ ಬಲ್ಲರೋ……

ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…

1 hour ago

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

15 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

16 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

1 day ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 days ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago