ದೊಡ್ಡಬಳ್ಳಾಪುರ(ತೂಬಗೆರೆ): ತಾಲೂಕಿನ ತೂಬಗೆರೆ ಗ್ರಾಮದಲ್ಲಿ 600 ವರ್ಷಗಳಿಂದ ಆಚರಿಸಿಕೊಂಡು ಬಂದಿರುವ ಪಾರಂಪರಿಕ ಜನಪದ ಆಚರಣೆ ಭೂತ ನೆರಿಗೆ ಇದೇ ಜು.18 ರ ಗುರುವಾರ ಮಧ್ಯಾಹ್ನ 3 ಗಂಟೆಗೆ ನಡೆಸಲು ಇಲ್ಲಿನ ಶ್ರೀ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಾಲಯಲ್ಲಿ ಭೂತ ನೆರಿಗೆ ಆಚರಣಾ ಸಮಿತಿ ಸಭೆ ನೆಡೆಸಿ ತೀರ್ಮಾನಿಸಲಾಯಿತು.
ಪ್ರತಿವರ್ಷದಂತೆ ಈ ವರ್ಷವೂ ಸಹ ಆಷಾಢ ಮಾಸದ ಏಕಾದಶಿಯಾದ ಮಾರನೇ ದಿನವಾದ ದ್ವಾದಶಿಯಂದು ಭೂತ ನೆರಿಗೆ ಹಬ್ಬವನ್ನು ಆಚರಿಸಲು ಸಜ್ಜಾಗಿದ್ದಾರೆ.
ಕರಿಯಣ್ಣ – ಕೆಂಚಣ್ಣರ ವೇಷಧಾರಿಯಾದವರ ಮೇಲೆ ಭೂತ ಆಹ್ವಾನಿಸಿ, ಆರ್ಭಟಿಸುತ್ತವೆ. ಈ ವೇಳೆ, ಇವರ ಹಸಿವು ತಣಿಸುವ ಕೆಲಸ ಆಗುತ್ತದೆ. ವೇಷಧಾರಿಗಳು ಮನೆಗೆ ಬಂದರೆ ಮನೆಯಲ್ಲಿನ ದ್ವೆವ್ವ ಪಿಶಾಚಿಗಳು ಓಡಿ ಹೋಗುತ್ತವೆ ಎಂಬ ನಂಬಿಕೆಯೂ ಇದೆ.
ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಭೂತ ನೆರಿಗೆ ಆಚರಣಾ ಸಮಿತಿಯ ಚಿದಾನಂದ ಗುರೂಜಿ, ವಿಷ್ಣುವಿನ ದ್ವಾರಪಾಲಕರಾದ ಜಯ-ವಿಜಯರು ಶಾಪಕ್ಕೆ ಗುರಿಯಾಗಿ ಕಲಿಯುಗದಲ್ಲಿ ಕರಿಯಣ್ಣ ಕೆಂಚಣ್ಣರಾಗಿ ಭೂಲೋಕಕ್ಕೆ ಬರುತ್ತಾರೆ ಎಂಬ ಐತಿಹಾಸಿಕ ಹಿನ್ನೆಲೆ ಇದೆ. ಸುಮಾರು ಐದು ನೂರು ವರ್ಷಗಳ ಇತಿಹಾಸವಿರುವ ಈ ಭೂತನೆರಿಗೆ ಹಬ್ಬ ಇಂದಿಗೂ ಸಹ ತೂಬಗೆರೆ ಹಾಗೂ ಕಲ್ಲುಕೋಟೆ ಗ್ರಾಮದಲ್ಲಿ ನಡೆದುಕೊಂಡು ಬರುತ್ತಿದೆ. ಭೂತನೆರಿಗೆ ಹಬ್ಬದಲ್ಲಿ ಕರಿಯಣ್ಣ ಮತ್ತು ಕೆಂಚಣ್ಣ ವೇಷಧಾರಿಗಳು ಒಂದು ಕೈಯಲ್ಲಿ ಭೂತದ ಮುಖ ಹೋಲುವ ವರ್ತುಲಾಕಾರದ ನೆರಿಗೆ ಹಿಡಿದಿರುತ್ತಾರೆ. ಮತ್ತೊಂದು ಕೈಯಲ್ಲಿ ಕತ್ತಿ ಹಿಡಿದಿರುತ್ತಾರೆ. ಲಕ್ಷ್ಮಿನರಸಿಂಹಸ್ವಾಮಿ ಭಕ್ತರು ಕೆಂಚಣ್ಣ-ಕರಿಯಣ್ಣರ ಮುಂದೆ ವಿಷ್ಣುವಿನ ನಾಮಸ್ಮರಣೆ ಮತ್ತು ಗುಣಗಾನ ಮಾಡುತ್ತಾ ಇವರನ್ನು ಕೆಣಕುತ್ತಾರೆ. ವಿಷ್ಣುವಿನ ನಾಮಸ್ಮರಣೆ ಸಹಿಸದ ಈ ಕರಿಯಣ್ಣ ಮತ್ತು ಕೆಂಚಣ್ಣ ಭಕ್ತರ ಮೇಲೆ ಕೋಪಗೊಂಡು ಅವರೆಡೆಗೆ ನುಗ್ಗುತ್ತಾರೆ. ಕೋಪಗೊಂಡ ಕರಿಯಣ್ಣ ಕೆಂಚಣ್ಣರನ್ನು ಸಮಾಧಾನ ಮಾಡಲು ಇತರರು ಅವರ ಬಾಯಿಗೆ ಬಾಳೆ ಹಣ್ಣಿನ, ಹಲಸಿನ ಹಣ್ಣಿನಿಂದ ತಯಾರಿಸಿದ ರಸಾಯನವನ್ನು ತಿನ್ನಿಸುತ್ತಾರೆ. ಆವೇಶಕ್ಕೆ ಒಳಗಾದ ಈ ಭೂತಗಳು ಆ ಸಂದರ್ಭದಲ್ಲಿ ಏನು ಕೊಟ್ಟರೂ ತಿನ್ನುತ್ತಾರೆ ಎಂಬುದು ಜಾನಪದರ ನಂಬಿಕೆ ಇದೆ ಎಂದರು.
ಕೆಲವು ಗ್ರಾಮಗಳಲ್ಲಿ ನಡೆಯುವ ಈ ಹಬ್ಬದಲ್ಲಿ ಕರಿಯಣ್ಣ ಮತ್ತು ಕೆಂಚಣ್ಣರ ಬಾಯಿಗೆ ಕುರಿ-ಕೋಳಿಗಳನ್ನು ನೀಡುತ್ತಾರೆ. ಇವುಗಳ ರಕ್ತ ಹೀರುವುದರೊಂದಿಗೆ ಕರಿಯಣ್ಣ-ಕೆಂಚಣ್ಣ ಶಾಂತರಾಗುತಾರೆ ಎನ್ನುವುದು ಈ ಭಾಗದ ಭಕ್ತರ ನಂಬಿಕೆ ಆದ್ದರಿಂದ ತೂಬಗೆರೆ ಸುತ್ತ ಮುತ್ತಲಿನ ಸಕಲ ಆಸ್ತಿಕರು ಈ ಆಚರಣೆಯಲ್ಲಿ ಪಾಲ್ಗೊಳ್ಳಲು ಮನವಿ ಮಾಡಿದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…