ಜು.2ರಂದು ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆ:  ಜೂ.30ರಿಂದ ಜು.3ರವರೆಗೆ ನಂದಿಬೆಟ್ಟ‌ ಹಾಗೂ ಸ್ಕಂದಗಿರಿ ಬೆಟ್ಟದಲ್ಲಿ ಪ್ರವಾಸಿಗರಿಗೆ ಹಾಗೂ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಜು. 2ರಂದು ರಂದು ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯನ್ನು ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳವಾದ ನಂದಿಗಿರಿಧಾಮ ಠಾಣಾ ವ್ಯಾಪ್ತಿಯ ನಂದಿ ಬೆಟ್ಟದಲ್ಲಿ ಆಯೋಜನೆ ಮಾಡಲು ಕರ್ನಾಟಕ ಸರ್ಕಾರ ತೀರ್ಮಾನಿಸಿರುತ್ತದೆ.

ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಕರ್ನಾಟಕ ಸರ್ಕಾರದ ಸಚಿವ ಸಂಪುಟ ದರ್ಜೆಯ ಎಲ್ಲಾ ಮಂತ್ರಿಗಳು, ಶಾಸನ ಸಭಾ ಹಾಗೂ ವಿಧಾನಸಭಾ ಸದಸ್ಯರು, ಇಲಾಖಾ ಮುಖ್ಯಸ್ಥರು ಹಾಗೂ ಇತರೆ ಗಣ್ಯರು ಆಗಮಿಸಲಿದ್ದಾರೆ.

ನಂದಿಬೆಟ್ಟದಲ್ಲಿ ಕಡಿದಾದ ತಿರುವುಗಳಿಂದ ಕೂಡಿದ ರಸ್ತೆಗಳಲ್ಲಿ ವಾಹನ ಮತ್ತು ಪ್ರವಾಸಿಗರನ್ನು ನಿಯಂತ್ರಿಸುವುದು ಅತಿ ಕಷ್ಟಕರವಾಗಿರುತ್ತದೆ ಹಾಗೂ ಅಪಘಾತಗಳಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಆದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜೂ.30ರ ಬೆಳಿಗ್ಗೆ 6:00 ಗಂಟೆಯಿಂದ ಜು.3ರ ಮಧ್ಯಾಹ್ನ 2:00 ಗಂಟೆಯವರಿಗೆ ಪ್ರವಾಸಿಗರಿಗೆ ಹಾಗೂ ವಾಹನಗಳ ಪ್ರವೇಶಕ್ಕೆ ನಿರ್ಬಂಧಿಸಿ ಆದೇಶಿಸಿದೆ. ನಂದಿ ಬೆಟ್ಟದ ಮೇಲೆ ವಸತಿ ಕೊಠಡಿಗಳನ್ನು ಸಾರ್ವಜನಿಕರಿಗೆ ಮುಂಗಡವಾಗಿ ಕಾಯ್ದಿರಿಸುವಿಕೆಯನ್ನು ನಿಷೇಧಿಸಲಾಗಿದೆ.

ಇದೇ ವೇಳೆ ನಂದಿ ಬೆಟ್ಟದ ಸಮೀಪವಿರುವ ಸ್ಕಂದಗಿರಿ ಬೆಟ್ಟಕ್ಕೆ ಪ್ರತಿ ದಿನ ಹೆಚ್ಚು ಚಾರಣಿಗರು ಮತ್ತು ಪ್ರವಾಸಿಗರು ಬರುತ್ತಿರುವುದರಿಂದ ಗಣ್ಯರ ಭದ್ರತಾ ಹಿತದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜೂ.30ರ ಬೆಳಿಗ್ಗೆ 6:00 ಗಂಟೆಯಿಂದ ಜು.3ರ ಮಧ್ಯಾಹ್ನ 2:00 ಗಂಟೆಯವರೆಗೆ ಸ್ಕಂದಗಿರಿ ಬೆಟ್ಟಕ್ಕೆ ಹೋಗುವ ಚಾರಣೆಗರು ಮತ್ತು ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿದೆ.

Ramesh Babu

Journalist

Recent Posts

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

29 minutes ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

12 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

12 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

14 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

23 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

1 day ago