ಜು. 2ರಂದು ರಂದು ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯನ್ನು ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳವಾದ ನಂದಿಗಿರಿಧಾಮ ಠಾಣಾ ವ್ಯಾಪ್ತಿಯ ನಂದಿ ಬೆಟ್ಟದಲ್ಲಿ ಆಯೋಜನೆ ಮಾಡಲು ಕರ್ನಾಟಕ ಸರ್ಕಾರ ತೀರ್ಮಾನಿಸಿರುತ್ತದೆ.
ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಕರ್ನಾಟಕ ಸರ್ಕಾರದ ಸಚಿವ ಸಂಪುಟ ದರ್ಜೆಯ ಎಲ್ಲಾ ಮಂತ್ರಿಗಳು, ಶಾಸನ ಸಭಾ ಹಾಗೂ ವಿಧಾನಸಭಾ ಸದಸ್ಯರು, ಇಲಾಖಾ ಮುಖ್ಯಸ್ಥರು ಹಾಗೂ ಇತರೆ ಗಣ್ಯರು ಆಗಮಿಸಲಿದ್ದಾರೆ.
ನಂದಿಬೆಟ್ಟದಲ್ಲಿ ಕಡಿದಾದ ತಿರುವುಗಳಿಂದ ಕೂಡಿದ ರಸ್ತೆಗಳಲ್ಲಿ ವಾಹನ ಮತ್ತು ಪ್ರವಾಸಿಗರನ್ನು ನಿಯಂತ್ರಿಸುವುದು ಅತಿ ಕಷ್ಟಕರವಾಗಿರುತ್ತದೆ ಹಾಗೂ ಅಪಘಾತಗಳಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಆದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜೂ.30ರ ಬೆಳಿಗ್ಗೆ 6:00 ಗಂಟೆಯಿಂದ ಜು.3ರ ಮಧ್ಯಾಹ್ನ 2:00 ಗಂಟೆಯವರಿಗೆ ಪ್ರವಾಸಿಗರಿಗೆ ಹಾಗೂ ವಾಹನಗಳ ಪ್ರವೇಶಕ್ಕೆ ನಿರ್ಬಂಧಿಸಿ ಆದೇಶಿಸಿದೆ. ನಂದಿ ಬೆಟ್ಟದ ಮೇಲೆ ವಸತಿ ಕೊಠಡಿಗಳನ್ನು ಸಾರ್ವಜನಿಕರಿಗೆ ಮುಂಗಡವಾಗಿ ಕಾಯ್ದಿರಿಸುವಿಕೆಯನ್ನು ನಿಷೇಧಿಸಲಾಗಿದೆ.
ಇದೇ ವೇಳೆ ನಂದಿ ಬೆಟ್ಟದ ಸಮೀಪವಿರುವ ಸ್ಕಂದಗಿರಿ ಬೆಟ್ಟಕ್ಕೆ ಪ್ರತಿ ದಿನ ಹೆಚ್ಚು ಚಾರಣಿಗರು ಮತ್ತು ಪ್ರವಾಸಿಗರು ಬರುತ್ತಿರುವುದರಿಂದ ಗಣ್ಯರ ಭದ್ರತಾ ಹಿತದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜೂ.30ರ ಬೆಳಿಗ್ಗೆ 6:00 ಗಂಟೆಯಿಂದ ಜು.3ರ ಮಧ್ಯಾಹ್ನ 2:00 ಗಂಟೆಯವರೆಗೆ ಸ್ಕಂದಗಿರಿ ಬೆಟ್ಟಕ್ಕೆ ಹೋಗುವ ಚಾರಣೆಗರು ಮತ್ತು ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿದೆ.
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…
ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…