ಜು.2ರಂದು ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆ:  ಜೂ.30ರಿಂದ ಜು.3ರವರೆಗೆ ನಂದಿಬೆಟ್ಟ‌ ಹಾಗೂ ಸ್ಕಂದಗಿರಿ ಬೆಟ್ಟದಲ್ಲಿ ಪ್ರವಾಸಿಗರಿಗೆ ಹಾಗೂ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಜು. 2ರಂದು ರಂದು ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯನ್ನು ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳವಾದ ನಂದಿಗಿರಿಧಾಮ ಠಾಣಾ ವ್ಯಾಪ್ತಿಯ ನಂದಿ ಬೆಟ್ಟದಲ್ಲಿ ಆಯೋಜನೆ ಮಾಡಲು ಕರ್ನಾಟಕ ಸರ್ಕಾರ ತೀರ್ಮಾನಿಸಿರುತ್ತದೆ.

ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಕರ್ನಾಟಕ ಸರ್ಕಾರದ ಸಚಿವ ಸಂಪುಟ ದರ್ಜೆಯ ಎಲ್ಲಾ ಮಂತ್ರಿಗಳು, ಶಾಸನ ಸಭಾ ಹಾಗೂ ವಿಧಾನಸಭಾ ಸದಸ್ಯರು, ಇಲಾಖಾ ಮುಖ್ಯಸ್ಥರು ಹಾಗೂ ಇತರೆ ಗಣ್ಯರು ಆಗಮಿಸಲಿದ್ದಾರೆ.

ನಂದಿಬೆಟ್ಟದಲ್ಲಿ ಕಡಿದಾದ ತಿರುವುಗಳಿಂದ ಕೂಡಿದ ರಸ್ತೆಗಳಲ್ಲಿ ವಾಹನ ಮತ್ತು ಪ್ರವಾಸಿಗರನ್ನು ನಿಯಂತ್ರಿಸುವುದು ಅತಿ ಕಷ್ಟಕರವಾಗಿರುತ್ತದೆ ಹಾಗೂ ಅಪಘಾತಗಳಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಆದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜೂ.30ರ ಬೆಳಿಗ್ಗೆ 6:00 ಗಂಟೆಯಿಂದ ಜು.3ರ ಮಧ್ಯಾಹ್ನ 2:00 ಗಂಟೆಯವರಿಗೆ ಪ್ರವಾಸಿಗರಿಗೆ ಹಾಗೂ ವಾಹನಗಳ ಪ್ರವೇಶಕ್ಕೆ ನಿರ್ಬಂಧಿಸಿ ಆದೇಶಿಸಿದೆ. ನಂದಿ ಬೆಟ್ಟದ ಮೇಲೆ ವಸತಿ ಕೊಠಡಿಗಳನ್ನು ಸಾರ್ವಜನಿಕರಿಗೆ ಮುಂಗಡವಾಗಿ ಕಾಯ್ದಿರಿಸುವಿಕೆಯನ್ನು ನಿಷೇಧಿಸಲಾಗಿದೆ.

ಇದೇ ವೇಳೆ ನಂದಿ ಬೆಟ್ಟದ ಸಮೀಪವಿರುವ ಸ್ಕಂದಗಿರಿ ಬೆಟ್ಟಕ್ಕೆ ಪ್ರತಿ ದಿನ ಹೆಚ್ಚು ಚಾರಣಿಗರು ಮತ್ತು ಪ್ರವಾಸಿಗರು ಬರುತ್ತಿರುವುದರಿಂದ ಗಣ್ಯರ ಭದ್ರತಾ ಹಿತದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜೂ.30ರ ಬೆಳಿಗ್ಗೆ 6:00 ಗಂಟೆಯಿಂದ ಜು.3ರ ಮಧ್ಯಾಹ್ನ 2:00 ಗಂಟೆಯವರೆಗೆ ಸ್ಕಂದಗಿರಿ ಬೆಟ್ಟಕ್ಕೆ ಹೋಗುವ ಚಾರಣೆಗರು ಮತ್ತು ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿದೆ.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

14 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

15 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

16 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

16 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

23 hours ago