ಜು.25ರಂದು ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ಬೆಸ್ಕಾಂ ವತಿಯಿಂದ ತುರ್ತು ನಿರ್ವಹಣೆ ಮತ್ತು ವಿದ್ಯುತ್ ಮಾರ್ಗಗಳ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 25ರಂದು (ಶನಿವಾರ) ದೊಡ್ಡಬಳ್ಳಾಪುರ ನಗರದ ಹಾಗೂ ಗ್ರಾಮೀಣ ಭಾಗಗಳ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.

66/11 ಕೆವಿ ತಾಪಸೀಪುರ ಉಪ ವಿದ್ಯುತ್ ಕೇಂದ್ರದಿಂದ ಹೊರಡುವ ಎಫ್-01 ಪ್ರಗತಿ ಹಾಗೂ ಎಫ್-02 ತಾಪಸೀಪುರ ಫೀಡರ್‌ಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತದೆ. ಈ ಅವಧಿಯಲ್ಲಿ ಸಂಬಂಧಿತ ಪ್ರದೇಶಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಅಧಿಕಾರಿಗಳು ಮನವಿ ಮಾಡಿದ್ದಾರೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:

ಗಂಟಿಗಾನಹಳ್ಳಿ, ಕಾವಲಹಳ್ಳಿ, ಮಾರಹಳ್ಳಿ, ಭೈರೇನಹಳ್ಳಿ, ಮೆಳೇಕೋಟೆ, ಚಿಕ್ಕರಾಯಪ್ಪನಹಳ್ಳಿ, ದೊಡ್ಡರಾಯಪ್ಪನಹಳ್ಳಿ, ಸಾಧುಮಠ, ಸೋಣ್ಣಾಪುರ, ಚೌಗೊಂಡನಹಳ್ಳಿ, ಮುಕ್ಕೇನಹಳ್ಳಿ, ಮೆಳೇಕೋಟೆ ಕ್ರಾಸ್, ಊದನಹಳ್ಳಿ, ಹೆಗ್ಗಡಿಹಳ್ಳಿ, ಕಣಿವೆಪುರ, ಸೋಣ್ಣಮಾರನಹಳ್ಳಿ, ಮಾಚಗೊಂಡನಹಳ್ಳಿ, ಗೂಳ್ಯ, ನಂಬಿಗುಂದ, ದಂಡುದಾಸಕೊಡಿಗೇಹಳ್ಳಿ, ವಾಸುದೇವನಹಳ್ಳಿ, ಕುರುಬರಹಳ್ಳಿ, ಸೀಗೇಹಳ್ಳಿ ಹಾಗೂ ಚನ್ನಾಪುರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.

Ramesh Babu

Journalist

Recent Posts

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

3 hours ago

ಆಕ್ರೋಶ, ಅರಾಜಕತೆ ಮತ್ತು ಮಾಧ್ಯಮಗಳು…..

ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಕಳೆದ ಕೆಲವು ದಿನಗಳ ಘಟನೆಗಳನ್ನು ನೋಡುತ್ತಿದ್ದರೆ ನಮ್ಮ ದೇಶದ ಸುತ್ತಮುತ್ತ ನಡೆದ ಬಾಂಗ್ಲಾ,…

10 hours ago

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಗೆ ಕರ್ನಾಟಕ ಮುಕ್ತ – ಖಾಸಗಿ ಹೂಡಿಕೆದಾರರಿಗೆ ಸರ್ಕಾರದಿಂದ ಸಂಪೂರ್ಣ ಬೆಂಬಲ- ಸಚಿವ ಕೆ.ಜೆ. ಜಾರ್ಜ್

ಕರ್ನಾಟಕವನ್ನು ದೇಶದ ಹೂಡಿಕೆ ಸ್ನೇಹಿ ಪ್ರವಾಸೋದ್ಯಮ ರಾಜ್ಯವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಪ್ರವಾಸೋದ್ಯಮ ನೀತಿಗಳನ್ನು ಮತ್ತಷ್ಟು ಸರಳೀಕರಿಸುತ್ತಿದ್ದು, ಖಾಸಗಿ ಹೂಡಿಕೆದಾರರಿಗೆ…

11 hours ago

ಹೆದ್ದಾರಿಯಿಂದ ನಗರ ಬೀದಿವರೆಗೆ ಶುಭಾಶಯ, ಸ್ವಾಗತ ಬ್ಯಾನರ್‌ಗಳದ್ದೇ ಆರ್ಭಟ: ನ್ಯಾಯಾಲಯದ ನಿರ್ದೇಶನಕ್ಕೂ ಸೊಪ್ಪು ಹಾಕದ ಅನಧಿಕೃತ ಫ್ಲೆಕ್ಸ್‌ಗಳು: ಸ್ವಚ್ಛತೆ, ಸುರಕ್ಷತೆ ಹಾಗೂ ಪರಿಸರಕ್ಕೆ ದೊಡ್ಡ ಸವಾಲು

ಬೆಂಗಳೂರು ಗ್ರಾಮಾಂತರ: ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಕಟೌಟ್ ಹಾಗೂ ಬಿಲ್‌ಬೋರ್ಡ್‌ಗಳನ್ನು ಅಳವಡಿಸದಂತೆ ರಾಜ್ಯ ಸರ್ಕಾರ ಮತ್ತು ನ್ಯಾಯಾಲಯಗಳು…

1 day ago

ನಂದಿಗಿರಿಧಾಮದಲ್ಲಿ ಕೆಎಸ್‌ಟಿಡಿಸಿಯ ನೂತನ ‘ಮಯೂರ ಸನ್‌ರೈಸ್ ರೆಸ್ಟೋರೆಂಟ್’ ಉದ್ಘಾಟನೆ: ನಂದಿಬೆಟ್ಟದ ಸಂಚಾರ ದಟ್ಟಣೆಗೆ ರೋಪ್‌ವೇ ಹಾಗೂ ಸಮಗ್ರ ಪಾರ್ಕಿಂಗ್ ಯೋಜನೆ- ಸಚಿವ ಕೆ.ಜೆ ಜಾರ್ಜ್

ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್‌ಗಳು ಹಾಗೂ ಇತರೆ…

2 days ago

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

2 days ago