ಜು.25ರಿಂದ ತಾಲೂಕು ಕಚೇರಿ ಎದುರು ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭ- ಕೆರೆ ಸಂರಕ್ಷಣೆ ಹೋರಾಟ ಸಮಿತಿ ಮುಖಂಡ ವಸಂತ್ ಹೇಳಿಕೆ

ದೊಡ್ಡಬಳ್ಳಾಪುರ ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಒಳಚರಂಡಿ ನೀರು, ಕೈಗಾರಿಕಾ ಪ್ರದೇಶದ ಕಾರ್ಖಾನೆಗಳ‌ ರಾಸಾಯನಿಕ ಯುಕ್ತ ತ್ಯಾಜ್ಯ ನೀರು ಸೇರಿದಂತೆ ಇತರೆ ತ್ಯಾಜ್ಯ ನೇರವಾಗಿ ಅರ್ಕಾವತಿ ನದಿ ಪಾತ್ರದ ಕೆರೆಗಳ ಒಡಲು ಸೇರಿ ಸಂಪೂರ್ಣ ಕಲುಷಿತಗೊಂಡಿವೆ.

ಈ ಕೆರೆಗಳ ನೀರನ್ನು ಬಳಿಸಿದ ಜನ ರೋಗಪೀಡಿತರಾಗುತ್ತಿದ್ದಾರೆ. ಪ್ರಾಣಿ ಪಕ್ಷಿಗಳು, ಜಲಚರಗಳು ಸಾವನ್ನಪ್ಪುತ್ತಿವೆ. ಆದ್ದರಿಂದ ಕೆರೆ ಸಂರಕ್ಷಣೆಗೆ, ಕೆರೆ ಶುದ್ಧೀಕರಣಕ್ಕೆ ಈಗಾಗಲೇ ಹಲವು ಮನವಿ, ಹೋರಾಟ, ಪ್ರತಿಭಟನೆ ಸೇರಿದಂತೆ ನಾನಾ ಪ್ರಯತ್ನ ಮಾಡಿದರೂ ಸಮಸ್ಯೆ ಬಗೆಹರಿಯಲಿಲ್ಲ. ಆದರೆ ಗ್ರಾಮಸ್ಥರು ಮತ್ತು ಅರ್ಕಾವತಿ ನದಿ ಪಾತ್ರದ ಕೆರೆ ಸಂರಕ್ಷಣಾ ವೇದಿಕೆ ಸಮಿತಿ ಮುಖಂಡರು ಪಟ್ಟು ಬಿಡದೇ ಕೆರೆ ಶುದ್ದೀಕರಣ, ಸಂರಕ್ಷಣೆಗೆ ಹೋರಾಟ ಮುಂದುವರಿಸಿದ್ದಾರೆ.

ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಸೇರುತ್ತಿರುವ ಕೊಳಚೆ ನೀರಿಗೆ ಕಡಿವಾಣ ಹಾಕಲು ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಸದಸ್ಯರು ನಿರ್ಧರಿಸಿದ್ದು, ಕೊಳಚೆ ನೀರು ಹರಿದು ಬರುವ ಕಾಲುವೆಯನ್ನು ಕಲ್ಲು, ಮಣ್ಣು ತುಂಬಿ ಮುಚ್ಚುವುದಾಗಿ ಪೊಲೀಸ್ ಇಲಾಖೆಯಲ್ಲಿ ಮನವಿ ಮಾಡಿದ್ದರು. ಆದರೆ ಪೊಲೀಸ್ ಇಲಾಖೆಯಿಂದ ಅನುಮತಿ ದೊರೆಯದ ಕಾರಣ ಜು.25ರ ಬೆಳಗ್ಗೆ 6ರಿಂದ  ದೊಡ್ಡಬಳ್ಳಾಪುರ ನಗರದ ತಾಲೂಕು‌ ಕಚೇರಿ ಮುಂಭಾಗ ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡಲು ಸಿದ್ಧತೆ ಕೈಗೊಂಡಿದ್ದಾರೆ.

ಈ ಸಂದರ್ಭದಲ್ಲಿ ಕೆರೆ ಸಂರಕ್ಷಣೆ ಹೋರಾಟ ಸಮಿತಿ ಮುಖಂಡ ವಸಂತ್ ಮಾತನಾಡಿ, 10 ವರ್ಷಗಳಿಂದ ಕೆರೆಗಳ ಉಳಿವುಗಾಗಿ ವಿವಿಧ ಹೋರಾಟ ನಡೆಸಿಕೊಂಡು ಬಂದರು ನಮ್ಮ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ, ಶುದ್ಧ ಕುಡಿಯುವ ನೀರು ಕೊಟ್ಟಿಲ್ಲ. ಈವರೆಗೆ ಅಧಿಕಾರಕ್ಕೆ ಬಂದಿರುವ ಎಲ್ಲಾ ಜನಪ್ರತಿನಿಧಿಗಳು, ಅಧಿಕಾರಿಗಳು ಭರವಸೆಯಲ್ಲೇ ಕಾಲಕಳೆದಿದ್ದಾರೆ. ಯಾವ ಭರವಸೆಯು ಕಾರ್ಯರೂಪಕ್ಕೆ ಬಂದಿಲ್ಲ. ನಮ್ಮ ಭಾಗದ ಎಲ್ಲಾ ಕೆರೆಗಳು ಸಂಪೂರ್ಣ ಕಲುಷಿತಗೊಂಡಿವೆ. ಕೊಳವೆ ಬಾವಿಗಳಲ್ಲಿ ಬರುತ್ತಿರುವ ಕುಡಿಯುವ ನೀರು ಯೋಗ್ಯವಾಗಿಲ್ಲ. ಮಜರಾಹೊಸಹಳ್ಳಿ, ದೊಡ್ಡತುಮಕೂರು ಸೇರಿದಂತೆ ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಕೊಳಚೆ ನೀರನ್ನು ಶುದ್ದೀಕರಿಸಿ ಬಿಡುವಂತೆ ಸಾಕಷ್ಟು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಹೀಗಾಗಿ ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.

ಶೀಘ್ರವಾಗಿ ಇದಕ್ಕೆ ಕಾರಣವಾಗಿರುವವರ ಸೂಕ್ತ ಕಾನೂನು ಕ್ರಮ ಕೈಗೊಂಡು ಕೆರೆಗಳ ಶುದ್ದೀಕರಣ ಕೆಲಸ ಮಾಡಬೇಕು. ಇಲ್ಲವಾದಲ್ಲಿ ನಮ್ಮ ಹೋರಾಟ ನಿಲ್ಲಿಸುವುದಿಲ್ಲ ಎಚ್ಚರಿಸಿದರು.

ಈ ಹಿಂದೆ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮತದಾನ ಬಹಿಷ್ಕಾರ ಮಾಡಲಾಗಿತ್ತು. ಈ ಸಮಯದಲ್ಲಿ ಜಿಲ್ಲಾಧಿಕಾರಿಗಳು ಗ್ರಾಮಗಳಲ್ಲಿ ಸಭೆ ನಡೆಸಿ ನೀಡಲಾಗಿದ್ದ ಯಾವುದೇ ಭರವಸೆಯು ಇದುವರೆಗೂ ಈಡೇರಿಲ್ಲ. ನಮ್ಮ ಭಾಗದಲ್ಲಿ ತಿಂಗಳಿಗೆ ಎರಡು‌ ಮೂರು ಸಾವುಗಳು ಆಗುತ್ತಿವೆ. ಈ ಸಾವು ಸಹಜವಾಗಿ ಬರುತ್ತಿಲ್ಲ. ಬದಲಿಗೆ ಕಿಡ್ನಿ‌ ಸಮಸ್ಯೆ, ಕ್ಯಾನ್ಸರ್, ಶ್ವಾಸಕೋಶ ಸಮಸ್ಯೆ ಸೇರಿದಂತೆ ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾಗಿ ಅಕಾಲಿಕ ಮರಣ ಹೊಂದುತ್ತಿದ್ದಾರೆ. ಇದಕ್ಕೆ ಕಾರಣ ಅಶುದ್ಧ ಕುಡಿಯುವ ನೀರಿನಿಂದ, ಕೆರೆಗಳ ಮಾಲಿನ್ಯದಿಂದ ಎಂದರು.

ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ದೊಡ್ಡಬಳ್ಳಾಪುರದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಿಯ ಕಚೇರಿಯನ್ನು ನಗರಕ್ಕೆ ಸ್ಥಳಾಂತರಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಉರುಳು ಸೇವೆ ಮಾಡಿದರು ಇದುವರೆಗೂ ಸ್ಥಳಾಂತರ ಆಗಿಲ್ಲ. ಇಂತಹ ಕನಿಷ್ಠ ಸಮಸ್ಯೆಗಳನ್ನು ಇತ್ಯರ್ಥ ಪಡಿಸುವಲ್ಲೂ ಸಹ ಜನಪ್ರತಿನಿಧಿಗಳು, ಜಿಲ್ಲಾಡಳಿತ ವಿಫಲವಾಗಿದೆ. ಈ ಎಲ್ಲಾ ಕಾರಣದಿಂದ ಇದೇ ಜು.25ರಂದು ತಾಲೂಕು ಕಚೇರಿ ಎದುರು ಅಮರಣಾಂತ ಉಪವಾಸ ಕೈಗೊಂಡಿದ್ದೇವೆ ಎಂದರು.

ದೊಡ್ಡಬಳ್ಳಾಪುರ ನಗರಸಭೆ ಯುಜಿಡಿ‌ ನೀರು, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ‌ ಯುಜಿಡಿ ನೀರು ಮೂರನೇ ಹಂತದಲ್ಲಿ ಶುದ್ಧೀಕರಣಗೊಂಡು ಕೆರೆಗಳಿಗೆ ಬರುವಂತೆ ಮಾಡಬೇಕು. ಅಂರ್ಜಲ ಹದಗೆಡದೇ ಇರುವ ಭಾಗದಿಂದ ಜನರಿಗೆ ಶುದ್ಧ ಕುಡಿಯುವ ನೀರು, ಜನ ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಬೇಕು. ಮಳೆ ನೀರು ಕೊಯ್ಲು ವ್ಯವಸ್ಥೆ ಮಾಡಬೇಕು. ಕೈಗಾರಿಕಾ ಪ್ರದೇಶದಲ್ಲಿ ತ್ಯಾಜ್ಯ ನೀರಿನ ಸಂಸ್ಕರಣಾ ಘಟಕ ಸ್ಥಾಪನೆ ಮಾಡಿ, ಕೈಗಾರಿಕೆಗಳ ತ್ಯಾಜ್ಯ ನೀರನ್ನು ಶುದ್ಧೀಕರಿಸಿಕೊಂಡು ಅವರೇ ಆ ನೀರನ್ನು ಕೆರೆಗಳಿಗೆ ಬಿಡದೇ ಮರುಬಳಿಕೆ‌ ಮಾಡಿಕೊಳ್ಳುವಂತೆ ನೋಡಿಕೊಳ್ಳಬೇಕು. ಈ ಎಲ್ಲಾ ಬೇಡಿಕೆಗಳನ್ನು ಹಂತಹಂತವಾಗಿ ಈಡೇರಿಸುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಸಮಿತಿ ಹೋರಾಟಗಾರರು ಎಚ್ಚರಿಸಿದ್ದಾರೆ.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

3 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

5 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

5 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

12 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago