ಜು.25ರಿಂದ ತಾಲೂಕು ಕಚೇರಿ ಎದುರು ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭ- ಕೆರೆ ಸಂರಕ್ಷಣೆ ಹೋರಾಟ ಸಮಿತಿ ಮುಖಂಡ ವಸಂತ್ ಹೇಳಿಕೆ

ದೊಡ್ಡಬಳ್ಳಾಪುರ ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಒಳಚರಂಡಿ ನೀರು, ಕೈಗಾರಿಕಾ ಪ್ರದೇಶದ ಕಾರ್ಖಾನೆಗಳ‌ ರಾಸಾಯನಿಕ ಯುಕ್ತ ತ್ಯಾಜ್ಯ ನೀರು ಸೇರಿದಂತೆ ಇತರೆ ತ್ಯಾಜ್ಯ ನೇರವಾಗಿ ಅರ್ಕಾವತಿ ನದಿ ಪಾತ್ರದ ಕೆರೆಗಳ ಒಡಲು ಸೇರಿ ಸಂಪೂರ್ಣ ಕಲುಷಿತಗೊಂಡಿವೆ.

ಈ ಕೆರೆಗಳ ನೀರನ್ನು ಬಳಿಸಿದ ಜನ ರೋಗಪೀಡಿತರಾಗುತ್ತಿದ್ದಾರೆ. ಪ್ರಾಣಿ ಪಕ್ಷಿಗಳು, ಜಲಚರಗಳು ಸಾವನ್ನಪ್ಪುತ್ತಿವೆ. ಆದ್ದರಿಂದ ಕೆರೆ ಸಂರಕ್ಷಣೆಗೆ, ಕೆರೆ ಶುದ್ಧೀಕರಣಕ್ಕೆ ಈಗಾಗಲೇ ಹಲವು ಮನವಿ, ಹೋರಾಟ, ಪ್ರತಿಭಟನೆ ಸೇರಿದಂತೆ ನಾನಾ ಪ್ರಯತ್ನ ಮಾಡಿದರೂ ಸಮಸ್ಯೆ ಬಗೆಹರಿಯಲಿಲ್ಲ. ಆದರೆ ಗ್ರಾಮಸ್ಥರು ಮತ್ತು ಅರ್ಕಾವತಿ ನದಿ ಪಾತ್ರದ ಕೆರೆ ಸಂರಕ್ಷಣಾ ವೇದಿಕೆ ಸಮಿತಿ ಮುಖಂಡರು ಪಟ್ಟು ಬಿಡದೇ ಕೆರೆ ಶುದ್ದೀಕರಣ, ಸಂರಕ್ಷಣೆಗೆ ಹೋರಾಟ ಮುಂದುವರಿಸಿದ್ದಾರೆ.

ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಸೇರುತ್ತಿರುವ ಕೊಳಚೆ ನೀರಿಗೆ ಕಡಿವಾಣ ಹಾಕಲು ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಸದಸ್ಯರು ನಿರ್ಧರಿಸಿದ್ದು, ಕೊಳಚೆ ನೀರು ಹರಿದು ಬರುವ ಕಾಲುವೆಯನ್ನು ಕಲ್ಲು, ಮಣ್ಣು ತುಂಬಿ ಮುಚ್ಚುವುದಾಗಿ ಪೊಲೀಸ್ ಇಲಾಖೆಯಲ್ಲಿ ಮನವಿ ಮಾಡಿದ್ದರು. ಆದರೆ ಪೊಲೀಸ್ ಇಲಾಖೆಯಿಂದ ಅನುಮತಿ ದೊರೆಯದ ಕಾರಣ ಜು.25ರ ಬೆಳಗ್ಗೆ 6ರಿಂದ  ದೊಡ್ಡಬಳ್ಳಾಪುರ ನಗರದ ತಾಲೂಕು‌ ಕಚೇರಿ ಮುಂಭಾಗ ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡಲು ಸಿದ್ಧತೆ ಕೈಗೊಂಡಿದ್ದಾರೆ.

ಈ ಸಂದರ್ಭದಲ್ಲಿ ಕೆರೆ ಸಂರಕ್ಷಣೆ ಹೋರಾಟ ಸಮಿತಿ ಮುಖಂಡ ವಸಂತ್ ಮಾತನಾಡಿ, 10 ವರ್ಷಗಳಿಂದ ಕೆರೆಗಳ ಉಳಿವುಗಾಗಿ ವಿವಿಧ ಹೋರಾಟ ನಡೆಸಿಕೊಂಡು ಬಂದರು ನಮ್ಮ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ, ಶುದ್ಧ ಕುಡಿಯುವ ನೀರು ಕೊಟ್ಟಿಲ್ಲ. ಈವರೆಗೆ ಅಧಿಕಾರಕ್ಕೆ ಬಂದಿರುವ ಎಲ್ಲಾ ಜನಪ್ರತಿನಿಧಿಗಳು, ಅಧಿಕಾರಿಗಳು ಭರವಸೆಯಲ್ಲೇ ಕಾಲಕಳೆದಿದ್ದಾರೆ. ಯಾವ ಭರವಸೆಯು ಕಾರ್ಯರೂಪಕ್ಕೆ ಬಂದಿಲ್ಲ. ನಮ್ಮ ಭಾಗದ ಎಲ್ಲಾ ಕೆರೆಗಳು ಸಂಪೂರ್ಣ ಕಲುಷಿತಗೊಂಡಿವೆ. ಕೊಳವೆ ಬಾವಿಗಳಲ್ಲಿ ಬರುತ್ತಿರುವ ಕುಡಿಯುವ ನೀರು ಯೋಗ್ಯವಾಗಿಲ್ಲ. ಮಜರಾಹೊಸಹಳ್ಳಿ, ದೊಡ್ಡತುಮಕೂರು ಸೇರಿದಂತೆ ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಕೊಳಚೆ ನೀರನ್ನು ಶುದ್ದೀಕರಿಸಿ ಬಿಡುವಂತೆ ಸಾಕಷ್ಟು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಹೀಗಾಗಿ ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.

ಶೀಘ್ರವಾಗಿ ಇದಕ್ಕೆ ಕಾರಣವಾಗಿರುವವರ ಸೂಕ್ತ ಕಾನೂನು ಕ್ರಮ ಕೈಗೊಂಡು ಕೆರೆಗಳ ಶುದ್ದೀಕರಣ ಕೆಲಸ ಮಾಡಬೇಕು. ಇಲ್ಲವಾದಲ್ಲಿ ನಮ್ಮ ಹೋರಾಟ ನಿಲ್ಲಿಸುವುದಿಲ್ಲ ಎಚ್ಚರಿಸಿದರು.

ಈ ಹಿಂದೆ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮತದಾನ ಬಹಿಷ್ಕಾರ ಮಾಡಲಾಗಿತ್ತು. ಈ ಸಮಯದಲ್ಲಿ ಜಿಲ್ಲಾಧಿಕಾರಿಗಳು ಗ್ರಾಮಗಳಲ್ಲಿ ಸಭೆ ನಡೆಸಿ ನೀಡಲಾಗಿದ್ದ ಯಾವುದೇ ಭರವಸೆಯು ಇದುವರೆಗೂ ಈಡೇರಿಲ್ಲ. ನಮ್ಮ ಭಾಗದಲ್ಲಿ ತಿಂಗಳಿಗೆ ಎರಡು‌ ಮೂರು ಸಾವುಗಳು ಆಗುತ್ತಿವೆ. ಈ ಸಾವು ಸಹಜವಾಗಿ ಬರುತ್ತಿಲ್ಲ. ಬದಲಿಗೆ ಕಿಡ್ನಿ‌ ಸಮಸ್ಯೆ, ಕ್ಯಾನ್ಸರ್, ಶ್ವಾಸಕೋಶ ಸಮಸ್ಯೆ ಸೇರಿದಂತೆ ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾಗಿ ಅಕಾಲಿಕ ಮರಣ ಹೊಂದುತ್ತಿದ್ದಾರೆ. ಇದಕ್ಕೆ ಕಾರಣ ಅಶುದ್ಧ ಕುಡಿಯುವ ನೀರಿನಿಂದ, ಕೆರೆಗಳ ಮಾಲಿನ್ಯದಿಂದ ಎಂದರು.

ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ದೊಡ್ಡಬಳ್ಳಾಪುರದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಿಯ ಕಚೇರಿಯನ್ನು ನಗರಕ್ಕೆ ಸ್ಥಳಾಂತರಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಉರುಳು ಸೇವೆ ಮಾಡಿದರು ಇದುವರೆಗೂ ಸ್ಥಳಾಂತರ ಆಗಿಲ್ಲ. ಇಂತಹ ಕನಿಷ್ಠ ಸಮಸ್ಯೆಗಳನ್ನು ಇತ್ಯರ್ಥ ಪಡಿಸುವಲ್ಲೂ ಸಹ ಜನಪ್ರತಿನಿಧಿಗಳು, ಜಿಲ್ಲಾಡಳಿತ ವಿಫಲವಾಗಿದೆ. ಈ ಎಲ್ಲಾ ಕಾರಣದಿಂದ ಇದೇ ಜು.25ರಂದು ತಾಲೂಕು ಕಚೇರಿ ಎದುರು ಅಮರಣಾಂತ ಉಪವಾಸ ಕೈಗೊಂಡಿದ್ದೇವೆ ಎಂದರು.

ದೊಡ್ಡಬಳ್ಳಾಪುರ ನಗರಸಭೆ ಯುಜಿಡಿ‌ ನೀರು, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ‌ ಯುಜಿಡಿ ನೀರು ಮೂರನೇ ಹಂತದಲ್ಲಿ ಶುದ್ಧೀಕರಣಗೊಂಡು ಕೆರೆಗಳಿಗೆ ಬರುವಂತೆ ಮಾಡಬೇಕು. ಅಂರ್ಜಲ ಹದಗೆಡದೇ ಇರುವ ಭಾಗದಿಂದ ಜನರಿಗೆ ಶುದ್ಧ ಕುಡಿಯುವ ನೀರು, ಜನ ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಬೇಕು. ಮಳೆ ನೀರು ಕೊಯ್ಲು ವ್ಯವಸ್ಥೆ ಮಾಡಬೇಕು. ಕೈಗಾರಿಕಾ ಪ್ರದೇಶದಲ್ಲಿ ತ್ಯಾಜ್ಯ ನೀರಿನ ಸಂಸ್ಕರಣಾ ಘಟಕ ಸ್ಥಾಪನೆ ಮಾಡಿ, ಕೈಗಾರಿಕೆಗಳ ತ್ಯಾಜ್ಯ ನೀರನ್ನು ಶುದ್ಧೀಕರಿಸಿಕೊಂಡು ಅವರೇ ಆ ನೀರನ್ನು ಕೆರೆಗಳಿಗೆ ಬಿಡದೇ ಮರುಬಳಿಕೆ‌ ಮಾಡಿಕೊಳ್ಳುವಂತೆ ನೋಡಿಕೊಳ್ಳಬೇಕು. ಈ ಎಲ್ಲಾ ಬೇಡಿಕೆಗಳನ್ನು ಹಂತಹಂತವಾಗಿ ಈಡೇರಿಸುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಸಮಿತಿ ಹೋರಾಟಗಾರರು ಎಚ್ಚರಿಸಿದ್ದಾರೆ.

Ramesh Babu

Journalist

Recent Posts

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

2 hours ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

2 hours ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

5 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

8 hours ago

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

10 hours ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

13 hours ago