ಜು.28ಕ್ಕೆ ಬಗರ್ ಹುಕುಂ ಸಾಗುವಳಿದಾರರ ಸಭೆ: ನಗರದ ಪ್ರವಾಸಿ ಮಂದಿರದಲ್ಲಿ ಸಭೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಗರ್ ಹುಕುಂ ಸಾಗುವಳಿದಾರರ ಸಭೆ ಇದೇ ತಿಂಗಳ 28 ರಂದು ನಡೆಯಲಿದೆ ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಮುಖಂಡ ಕುಮಾರ್ ಸಮತಳ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಿ ಭೂಮಿ ಬರುತ್ತದೆಂದು ಸುಮ್ಮನೆ ಕುಳಿತರೆ ಭೂಮಿ-ವಸತಿ ಜಾಗಗಳು ತಾನೇ ತಾನಾಗಿ ಬರುವುದಿಲ್ಲ. ಈ ಹಿನ್ನೆಲೆಯಲ್ಲಿ ಭೂಮಿ-ವಸತಿ ವಂಚಿತರು ಭೂಮಿ ಪಡೆಯಲು ಏನುಮಾಡಬೇಕು? ಇದಕ್ಕಾಗಿ ಯಾವ ರೀತಿಯ ಹೋರಾಟ-ಕಾರ್ಯಕ್ರಮ ರೂಪಿಸಬೇಕೆಂದು ಚರ್ಚೆ ಮಾಡಿ ತೀರ್ಮಾನಿಸಬೇಕಾಗಿದೆ. ಆದ್ದರಿಂದ ಜು.28ರ ಶುಕ್ರವಾರ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 10-30 ಕ್ಕೆ ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಸಭೆ ಕರೆಯಲಾಗಿದ್ದು, ಈ ಸಭೆಯಲ್ಲಿ ರಾಜ್ಯ ಮುಖಂಡರುಗಳು ಹಾಗೂ ಭೂಮಿ ಮತ್ತು ವಸತಿಗಾಗಿ ಹೋರಾಟ ನಡೆಸುತ್ತಿರುವ ಸ್ಥಳೀಯ ಸಂಘಟನೆಗಳ ಮುಖಂಡರುಗಳು ಸಹ ಭಾಗವಹಿಸಲಿದ್ದಾರೆ. ಆದ್ದರಿಂದ ಭೂಮಿಗಾಗಿ ಫಾರಂ ನಂ. 50, 53, ಮತ್ತು 57 ರಲ್ಲಿ ಅರ್ಜಿ ಸಲ್ಲಿಸಿರುವ ಪ್ರತಿಯೊಬ್ಬರೂ ಮತ್ತು ವಸತಿಗಾಗಿ 94ಸಿ 94ಸಿಸಿ ಹಾಗೂ ಅರಣ್ಯ ಹಕ್ಕು ಕಾಯ್ದೆಯನ್ವಯ ಅರ್ಜಿ ಸಲ್ಲಿಸಿ ಭೂಮಿಯ ಸಮಸ್ಯೆಗಳನ್ನು ಎದುರಿಸುತ್ತಿರುವ ನೊಂದವರೆಲ್ಲರೂ ಈ ಸಭೆಯಲ್ಲಿ ಪಾಲ್ಗೊಳ್ಳಲು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು ಈ ಮೂಲಕ ಮನವಿ ಮಾಡಿಕೊಳ್ಳುತ್ತದೆ.

ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಹಲವು ವರ್ಷಗಳಿಂದ ರಾಜ್ಯದ ಭೂಮಿ ಮತ್ತು ವಸತಿ ರಹಿತರ ಧ್ವನಿಯಾಗಿ ಹೋರಾಡುತ್ತಿದೆಯಲ್ಲದೆ ಈ ನಿಟ್ಟಿನಲ್ಲಿ ಸಮಿತಿಯು ಹಲವು ಮೂಲಭೂತ ಬದಲಾವಣೆಗಾಗಿ ಸರ್ಕಾರಗಳ ಮೇಲೆ ಹಲವು ರೀತಿಯ ಒತ್ತಾಯಗಳನ್ನು ಮಾಡುತ್ತಾ ಬರುತ್ತಿದೆ.

ಈ ನೆಲದ “ಪ್ರತಿಯೊಂದು ಕುಟುಂಬಕ್ಕೆ ಗೌರವಯುತವಾಗಿ ಬದುಕಿ ಬಾಳಲು ಸ್ವಂತ ಮನೆ, ದುಡಿದು ಬದುಕಲು ಭೂಮಿ” ದೊರೆಯಬೇಕು ಎಂದು ನಮ್ಮ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾಗಿದ್ದ ಸ್ವಾತಂತ್ರ್ಯ ಸೇನಾನಿ ದಿವಂಗತ ಎಚ್.ಎಸ್.ದೊರೆಸ್ವಾಮಿಯವರು ಪ್ರತಿಪಾದಿಸಿದಂತೆ ಭೂಮಿ-ವಸತಿಯು ಎಲ್ಲಾ ಜಾತಿ ಜನರ ಹಕ್ಕೂ ಆಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಳೆದ ಎರಡು-ಮೂರು ತಲೆ ಮಾರುಗಳಿಂದ ಸರ್ಕಾರಿ, ಗೋಮಾಳ, ಖರಾಬ್ ಇನ್ನಿತರೆ ಭೂಮಿಗಳನ್ನು ಹಸನುಗೊಳಿಸಿ ಬದುಕು ಸಾಗಿಸುತ್ತಿರುವ ಸಾವಿರಾರು ಕುಟುಂಬಗಳು ಫಾರಂ. 50, 53 ಹಾಗೂ 57 ರಲ್ಲಿ ಸರ್ಕಾರಕ್ಕೆ ಅರ್ಜಿಗಳನ್ನು ಸಲ್ಲಿಸಿ ಸಾಗುವಳಿ ಮಾಡುತ್ತಿರುವ ಭೂರಹಿತರಿಗೆ ಸರ್ಕಾರ ಭೂ ಮಂಜೂರಾತಿ ಮಾಡುತ್ತಿಲ್ಲ. ಇದಕ್ಕಾಗಿ ಡಿ.ಸಿ., ತಹಸೀಲ್ದಾರ್ ಕಚೇರಿ ಮತ್ತು ಶಾಸಕರ ಕಚೇರಿಗಳನ್ನು ಅಲೆದಲೆದು ಬಸವಳಿದಿದ್ದಾರೆ.

ಉಳುವವನೇ ಭೂಒಡೆಯ ಘೋಷಣೆಯಂತೆ ಸಾಮಾಜಿಕವಾಗಿ-ಆರ್ಥಿಕವಾಗಿ ಹಿಂದುಳಿದವರಿಗೆ ಭೂಮಿ ನೀಡದೆ ಸರ್ಕಾರಗಳು ಕಾರ್ಪೋರೇಟ್ ಖುಳಗಳಿಗೆ, ಉಳ್ಳವರಿಗೆ, ಟ್ರಸ್ಟ್ ಗಳಿಗೆ ಮತ್ತು ಜಾತಿವಾರು ಮಠಗಳಿಗೆ, ರಾಜಕಾರಣಿಗಳು ಮತ್ತು ಇವರ ಹಿಂಬಾಲಕರಿಗೆ ಹಾಗೂ ಹಣ ನೀಡಿದವರಿಗೆ ಭೂಮಿ-ವಸತಿ ಜಾಗಗಳು ಮಂಜೂರು‌ ಮಾಡುತ್ತಿವೆ. ಆದರೆ ಇದಕ್ಕಾಗಿ ಅರ್ಜಿ ಸಲ್ಲಿಸಿ ಹಲವು ದಶಕಗಳು ಕಳೆದರೂ ನೆತ್ತಿಯ ಮೇಲೊಂದು ಸೂರು ಮತ್ತು ಉಳುಮೆ ಮಾಡುತ್ತಿರುವ ಭೂಮಿಗಳು ಬಡ ಜನರಿಗೆ ದೊರೆಯುತ್ತಿಲ್ಲ. ಶ್ರೀಮಂತರಿಗೆ ಭೂಮಿ ಕೊಡಲು ಯಾವುದೇ ಕಾನೂನು ತೊಡಕಿಲ್ಲದಿದ್ದರೂ ಬಡವರಿಗೆ ಭೂಮಿ-ವಸತಿ ನೀಡಲು ನೂರೆಂಟು ನೆಪಗಳನ್ನು ಸರ್ಕಾರ ಹೇಳುತ್ತಿದೆ.

ಹೆಚ್ಚಿನ ಮಾಹಿತಿಗಾಗಿ:
ರಾಜುಸಣ್ಣಕ್ಕಿ-9986573503
ಗುರು- 9620824368
ರಮೇಶ್ ಸಂಕ್ರಾತಿ-8105705671 (ಸಾಸಲು) ರಮೇಶ್-9980768329 (ಮಧುರೆ),
ಗೂಳ್ಳ ಹನುಮಣ್ಣ-9902032101 (ತೂಬಗೆರೆ),
ಜೆ.ಮುನಿರಾಜು- 9620818767
ಚಿಕ್ಕಗಂಗಯ್ಯ- 9739681867
ಸತೀಶ್-8095282438
ಅನಿಲ್ ಕುಮಾರ್-9741901430
ಈ ಮೇಲ್ಕಂಡ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

2 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

4 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

7 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

8 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

19 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

20 hours ago