ಜು.28ಕ್ಕೆ ಬಗರ್ ಹುಕುಂ ಸಾಗುವಳಿದಾರರ ಸಭೆ: ನಗರದ ಪ್ರವಾಸಿ ಮಂದಿರದಲ್ಲಿ ಸಭೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಗರ್ ಹುಕುಂ ಸಾಗುವಳಿದಾರರ ಸಭೆ ಇದೇ ತಿಂಗಳ 28 ರಂದು ನಡೆಯಲಿದೆ ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಮುಖಂಡ ಕುಮಾರ್ ಸಮತಳ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಿ ಭೂಮಿ ಬರುತ್ತದೆಂದು ಸುಮ್ಮನೆ ಕುಳಿತರೆ ಭೂಮಿ-ವಸತಿ ಜಾಗಗಳು ತಾನೇ ತಾನಾಗಿ ಬರುವುದಿಲ್ಲ. ಈ ಹಿನ್ನೆಲೆಯಲ್ಲಿ ಭೂಮಿ-ವಸತಿ ವಂಚಿತರು ಭೂಮಿ ಪಡೆಯಲು ಏನುಮಾಡಬೇಕು? ಇದಕ್ಕಾಗಿ ಯಾವ ರೀತಿಯ ಹೋರಾಟ-ಕಾರ್ಯಕ್ರಮ ರೂಪಿಸಬೇಕೆಂದು ಚರ್ಚೆ ಮಾಡಿ ತೀರ್ಮಾನಿಸಬೇಕಾಗಿದೆ. ಆದ್ದರಿಂದ ಜು.28ರ ಶುಕ್ರವಾರ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 10-30 ಕ್ಕೆ ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಸಭೆ ಕರೆಯಲಾಗಿದ್ದು, ಈ ಸಭೆಯಲ್ಲಿ ರಾಜ್ಯ ಮುಖಂಡರುಗಳು ಹಾಗೂ ಭೂಮಿ ಮತ್ತು ವಸತಿಗಾಗಿ ಹೋರಾಟ ನಡೆಸುತ್ತಿರುವ ಸ್ಥಳೀಯ ಸಂಘಟನೆಗಳ ಮುಖಂಡರುಗಳು ಸಹ ಭಾಗವಹಿಸಲಿದ್ದಾರೆ. ಆದ್ದರಿಂದ ಭೂಮಿಗಾಗಿ ಫಾರಂ ನಂ. 50, 53, ಮತ್ತು 57 ರಲ್ಲಿ ಅರ್ಜಿ ಸಲ್ಲಿಸಿರುವ ಪ್ರತಿಯೊಬ್ಬರೂ ಮತ್ತು ವಸತಿಗಾಗಿ 94ಸಿ 94ಸಿಸಿ ಹಾಗೂ ಅರಣ್ಯ ಹಕ್ಕು ಕಾಯ್ದೆಯನ್ವಯ ಅರ್ಜಿ ಸಲ್ಲಿಸಿ ಭೂಮಿಯ ಸಮಸ್ಯೆಗಳನ್ನು ಎದುರಿಸುತ್ತಿರುವ ನೊಂದವರೆಲ್ಲರೂ ಈ ಸಭೆಯಲ್ಲಿ ಪಾಲ್ಗೊಳ್ಳಲು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು ಈ ಮೂಲಕ ಮನವಿ ಮಾಡಿಕೊಳ್ಳುತ್ತದೆ.

ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಹಲವು ವರ್ಷಗಳಿಂದ ರಾಜ್ಯದ ಭೂಮಿ ಮತ್ತು ವಸತಿ ರಹಿತರ ಧ್ವನಿಯಾಗಿ ಹೋರಾಡುತ್ತಿದೆಯಲ್ಲದೆ ಈ ನಿಟ್ಟಿನಲ್ಲಿ ಸಮಿತಿಯು ಹಲವು ಮೂಲಭೂತ ಬದಲಾವಣೆಗಾಗಿ ಸರ್ಕಾರಗಳ ಮೇಲೆ ಹಲವು ರೀತಿಯ ಒತ್ತಾಯಗಳನ್ನು ಮಾಡುತ್ತಾ ಬರುತ್ತಿದೆ.

ಈ ನೆಲದ “ಪ್ರತಿಯೊಂದು ಕುಟುಂಬಕ್ಕೆ ಗೌರವಯುತವಾಗಿ ಬದುಕಿ ಬಾಳಲು ಸ್ವಂತ ಮನೆ, ದುಡಿದು ಬದುಕಲು ಭೂಮಿ” ದೊರೆಯಬೇಕು ಎಂದು ನಮ್ಮ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾಗಿದ್ದ ಸ್ವಾತಂತ್ರ್ಯ ಸೇನಾನಿ ದಿವಂಗತ ಎಚ್.ಎಸ್.ದೊರೆಸ್ವಾಮಿಯವರು ಪ್ರತಿಪಾದಿಸಿದಂತೆ ಭೂಮಿ-ವಸತಿಯು ಎಲ್ಲಾ ಜಾತಿ ಜನರ ಹಕ್ಕೂ ಆಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಳೆದ ಎರಡು-ಮೂರು ತಲೆ ಮಾರುಗಳಿಂದ ಸರ್ಕಾರಿ, ಗೋಮಾಳ, ಖರಾಬ್ ಇನ್ನಿತರೆ ಭೂಮಿಗಳನ್ನು ಹಸನುಗೊಳಿಸಿ ಬದುಕು ಸಾಗಿಸುತ್ತಿರುವ ಸಾವಿರಾರು ಕುಟುಂಬಗಳು ಫಾರಂ. 50, 53 ಹಾಗೂ 57 ರಲ್ಲಿ ಸರ್ಕಾರಕ್ಕೆ ಅರ್ಜಿಗಳನ್ನು ಸಲ್ಲಿಸಿ ಸಾಗುವಳಿ ಮಾಡುತ್ತಿರುವ ಭೂರಹಿತರಿಗೆ ಸರ್ಕಾರ ಭೂ ಮಂಜೂರಾತಿ ಮಾಡುತ್ತಿಲ್ಲ. ಇದಕ್ಕಾಗಿ ಡಿ.ಸಿ., ತಹಸೀಲ್ದಾರ್ ಕಚೇರಿ ಮತ್ತು ಶಾಸಕರ ಕಚೇರಿಗಳನ್ನು ಅಲೆದಲೆದು ಬಸವಳಿದಿದ್ದಾರೆ.

ಉಳುವವನೇ ಭೂಒಡೆಯ ಘೋಷಣೆಯಂತೆ ಸಾಮಾಜಿಕವಾಗಿ-ಆರ್ಥಿಕವಾಗಿ ಹಿಂದುಳಿದವರಿಗೆ ಭೂಮಿ ನೀಡದೆ ಸರ್ಕಾರಗಳು ಕಾರ್ಪೋರೇಟ್ ಖುಳಗಳಿಗೆ, ಉಳ್ಳವರಿಗೆ, ಟ್ರಸ್ಟ್ ಗಳಿಗೆ ಮತ್ತು ಜಾತಿವಾರು ಮಠಗಳಿಗೆ, ರಾಜಕಾರಣಿಗಳು ಮತ್ತು ಇವರ ಹಿಂಬಾಲಕರಿಗೆ ಹಾಗೂ ಹಣ ನೀಡಿದವರಿಗೆ ಭೂಮಿ-ವಸತಿ ಜಾಗಗಳು ಮಂಜೂರು‌ ಮಾಡುತ್ತಿವೆ. ಆದರೆ ಇದಕ್ಕಾಗಿ ಅರ್ಜಿ ಸಲ್ಲಿಸಿ ಹಲವು ದಶಕಗಳು ಕಳೆದರೂ ನೆತ್ತಿಯ ಮೇಲೊಂದು ಸೂರು ಮತ್ತು ಉಳುಮೆ ಮಾಡುತ್ತಿರುವ ಭೂಮಿಗಳು ಬಡ ಜನರಿಗೆ ದೊರೆಯುತ್ತಿಲ್ಲ. ಶ್ರೀಮಂತರಿಗೆ ಭೂಮಿ ಕೊಡಲು ಯಾವುದೇ ಕಾನೂನು ತೊಡಕಿಲ್ಲದಿದ್ದರೂ ಬಡವರಿಗೆ ಭೂಮಿ-ವಸತಿ ನೀಡಲು ನೂರೆಂಟು ನೆಪಗಳನ್ನು ಸರ್ಕಾರ ಹೇಳುತ್ತಿದೆ.

ಹೆಚ್ಚಿನ ಮಾಹಿತಿಗಾಗಿ:
ರಾಜುಸಣ್ಣಕ್ಕಿ-9986573503
ಗುರು- 9620824368
ರಮೇಶ್ ಸಂಕ್ರಾತಿ-8105705671 (ಸಾಸಲು) ರಮೇಶ್-9980768329 (ಮಧುರೆ),
ಗೂಳ್ಳ ಹನುಮಣ್ಣ-9902032101 (ತೂಬಗೆರೆ),
ಜೆ.ಮುನಿರಾಜು- 9620818767
ಚಿಕ್ಕಗಂಗಯ್ಯ- 9739681867
ಸತೀಶ್-8095282438
ಅನಿಲ್ ಕುಮಾರ್-9741901430
ಈ ಮೇಲ್ಕಂಡ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

10 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

19 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

23 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

2 days ago