ಜು.28ಕ್ಕೆ ಬಗರ್ ಹುಕುಂ ಸಾಗುವಳಿದಾರರ ಸಭೆ: ನಗರದ ಪ್ರವಾಸಿ ಮಂದಿರದಲ್ಲಿ ಸಭೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಗರ್ ಹುಕುಂ ಸಾಗುವಳಿದಾರರ ಸಭೆ ಇದೇ ತಿಂಗಳ 28 ರಂದು ನಡೆಯಲಿದೆ ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಮುಖಂಡ ಕುಮಾರ್ ಸಮತಳ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಿ ಭೂಮಿ ಬರುತ್ತದೆಂದು ಸುಮ್ಮನೆ ಕುಳಿತರೆ ಭೂಮಿ-ವಸತಿ ಜಾಗಗಳು ತಾನೇ ತಾನಾಗಿ ಬರುವುದಿಲ್ಲ. ಈ ಹಿನ್ನೆಲೆಯಲ್ಲಿ ಭೂಮಿ-ವಸತಿ ವಂಚಿತರು ಭೂಮಿ ಪಡೆಯಲು ಏನುಮಾಡಬೇಕು? ಇದಕ್ಕಾಗಿ ಯಾವ ರೀತಿಯ ಹೋರಾಟ-ಕಾರ್ಯಕ್ರಮ ರೂಪಿಸಬೇಕೆಂದು ಚರ್ಚೆ ಮಾಡಿ ತೀರ್ಮಾನಿಸಬೇಕಾಗಿದೆ. ಆದ್ದರಿಂದ ಜು.28ರ ಶುಕ್ರವಾರ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 10-30 ಕ್ಕೆ ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಸಭೆ ಕರೆಯಲಾಗಿದ್ದು, ಈ ಸಭೆಯಲ್ಲಿ ರಾಜ್ಯ ಮುಖಂಡರುಗಳು ಹಾಗೂ ಭೂಮಿ ಮತ್ತು ವಸತಿಗಾಗಿ ಹೋರಾಟ ನಡೆಸುತ್ತಿರುವ ಸ್ಥಳೀಯ ಸಂಘಟನೆಗಳ ಮುಖಂಡರುಗಳು ಸಹ ಭಾಗವಹಿಸಲಿದ್ದಾರೆ. ಆದ್ದರಿಂದ ಭೂಮಿಗಾಗಿ ಫಾರಂ ನಂ. 50, 53, ಮತ್ತು 57 ರಲ್ಲಿ ಅರ್ಜಿ ಸಲ್ಲಿಸಿರುವ ಪ್ರತಿಯೊಬ್ಬರೂ ಮತ್ತು ವಸತಿಗಾಗಿ 94ಸಿ 94ಸಿಸಿ ಹಾಗೂ ಅರಣ್ಯ ಹಕ್ಕು ಕಾಯ್ದೆಯನ್ವಯ ಅರ್ಜಿ ಸಲ್ಲಿಸಿ ಭೂಮಿಯ ಸಮಸ್ಯೆಗಳನ್ನು ಎದುರಿಸುತ್ತಿರುವ ನೊಂದವರೆಲ್ಲರೂ ಈ ಸಭೆಯಲ್ಲಿ ಪಾಲ್ಗೊಳ್ಳಲು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು ಈ ಮೂಲಕ ಮನವಿ ಮಾಡಿಕೊಳ್ಳುತ್ತದೆ.

ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಹಲವು ವರ್ಷಗಳಿಂದ ರಾಜ್ಯದ ಭೂಮಿ ಮತ್ತು ವಸತಿ ರಹಿತರ ಧ್ವನಿಯಾಗಿ ಹೋರಾಡುತ್ತಿದೆಯಲ್ಲದೆ ಈ ನಿಟ್ಟಿನಲ್ಲಿ ಸಮಿತಿಯು ಹಲವು ಮೂಲಭೂತ ಬದಲಾವಣೆಗಾಗಿ ಸರ್ಕಾರಗಳ ಮೇಲೆ ಹಲವು ರೀತಿಯ ಒತ್ತಾಯಗಳನ್ನು ಮಾಡುತ್ತಾ ಬರುತ್ತಿದೆ.

ಈ ನೆಲದ “ಪ್ರತಿಯೊಂದು ಕುಟುಂಬಕ್ಕೆ ಗೌರವಯುತವಾಗಿ ಬದುಕಿ ಬಾಳಲು ಸ್ವಂತ ಮನೆ, ದುಡಿದು ಬದುಕಲು ಭೂಮಿ” ದೊರೆಯಬೇಕು ಎಂದು ನಮ್ಮ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾಗಿದ್ದ ಸ್ವಾತಂತ್ರ್ಯ ಸೇನಾನಿ ದಿವಂಗತ ಎಚ್.ಎಸ್.ದೊರೆಸ್ವಾಮಿಯವರು ಪ್ರತಿಪಾದಿಸಿದಂತೆ ಭೂಮಿ-ವಸತಿಯು ಎಲ್ಲಾ ಜಾತಿ ಜನರ ಹಕ್ಕೂ ಆಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಳೆದ ಎರಡು-ಮೂರು ತಲೆ ಮಾರುಗಳಿಂದ ಸರ್ಕಾರಿ, ಗೋಮಾಳ, ಖರಾಬ್ ಇನ್ನಿತರೆ ಭೂಮಿಗಳನ್ನು ಹಸನುಗೊಳಿಸಿ ಬದುಕು ಸಾಗಿಸುತ್ತಿರುವ ಸಾವಿರಾರು ಕುಟುಂಬಗಳು ಫಾರಂ. 50, 53 ಹಾಗೂ 57 ರಲ್ಲಿ ಸರ್ಕಾರಕ್ಕೆ ಅರ್ಜಿಗಳನ್ನು ಸಲ್ಲಿಸಿ ಸಾಗುವಳಿ ಮಾಡುತ್ತಿರುವ ಭೂರಹಿತರಿಗೆ ಸರ್ಕಾರ ಭೂ ಮಂಜೂರಾತಿ ಮಾಡುತ್ತಿಲ್ಲ. ಇದಕ್ಕಾಗಿ ಡಿ.ಸಿ., ತಹಸೀಲ್ದಾರ್ ಕಚೇರಿ ಮತ್ತು ಶಾಸಕರ ಕಚೇರಿಗಳನ್ನು ಅಲೆದಲೆದು ಬಸವಳಿದಿದ್ದಾರೆ.

ಉಳುವವನೇ ಭೂಒಡೆಯ ಘೋಷಣೆಯಂತೆ ಸಾಮಾಜಿಕವಾಗಿ-ಆರ್ಥಿಕವಾಗಿ ಹಿಂದುಳಿದವರಿಗೆ ಭೂಮಿ ನೀಡದೆ ಸರ್ಕಾರಗಳು ಕಾರ್ಪೋರೇಟ್ ಖುಳಗಳಿಗೆ, ಉಳ್ಳವರಿಗೆ, ಟ್ರಸ್ಟ್ ಗಳಿಗೆ ಮತ್ತು ಜಾತಿವಾರು ಮಠಗಳಿಗೆ, ರಾಜಕಾರಣಿಗಳು ಮತ್ತು ಇವರ ಹಿಂಬಾಲಕರಿಗೆ ಹಾಗೂ ಹಣ ನೀಡಿದವರಿಗೆ ಭೂಮಿ-ವಸತಿ ಜಾಗಗಳು ಮಂಜೂರು‌ ಮಾಡುತ್ತಿವೆ. ಆದರೆ ಇದಕ್ಕಾಗಿ ಅರ್ಜಿ ಸಲ್ಲಿಸಿ ಹಲವು ದಶಕಗಳು ಕಳೆದರೂ ನೆತ್ತಿಯ ಮೇಲೊಂದು ಸೂರು ಮತ್ತು ಉಳುಮೆ ಮಾಡುತ್ತಿರುವ ಭೂಮಿಗಳು ಬಡ ಜನರಿಗೆ ದೊರೆಯುತ್ತಿಲ್ಲ. ಶ್ರೀಮಂತರಿಗೆ ಭೂಮಿ ಕೊಡಲು ಯಾವುದೇ ಕಾನೂನು ತೊಡಕಿಲ್ಲದಿದ್ದರೂ ಬಡವರಿಗೆ ಭೂಮಿ-ವಸತಿ ನೀಡಲು ನೂರೆಂಟು ನೆಪಗಳನ್ನು ಸರ್ಕಾರ ಹೇಳುತ್ತಿದೆ.

ಹೆಚ್ಚಿನ ಮಾಹಿತಿಗಾಗಿ:
ರಾಜುಸಣ್ಣಕ್ಕಿ-9986573503
ಗುರು- 9620824368
ರಮೇಶ್ ಸಂಕ್ರಾತಿ-8105705671 (ಸಾಸಲು) ರಮೇಶ್-9980768329 (ಮಧುರೆ),
ಗೂಳ್ಳ ಹನುಮಣ್ಣ-9902032101 (ತೂಬಗೆರೆ),
ಜೆ.ಮುನಿರಾಜು- 9620818767
ಚಿಕ್ಕಗಂಗಯ್ಯ- 9739681867
ಸತೀಶ್-8095282438
ಅನಿಲ್ ಕುಮಾರ್-9741901430
ಈ ಮೇಲ್ಕಂಡ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

5 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

6 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

10 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

11 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

17 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

18 hours ago