ನಗರ ಕೇಂದ್ರಿತವಾಗಿದ್ದ ಜೂಜು ಅಡ್ಡೆಗಳು ಈಗ ಗ್ರಾಮಾಂತರ ಪ್ರದೇಶಗಳಲ್ಲೂ ಜಾಲ ಹಬ್ಬಿದೆ. ತಾಲೂಕಿನಲ್ಲಿರುವ ಕೆರಯಂಗಳ, ತೋಟದ ಮನೆಗಳು, ನೀಲಗಿರಿ ತೋಪುಗಳು ಜೂಜುಕೋರರ ಉಪಟಳದಿಂದ ನಲುಗುತ್ತಿವೆ ಎಂಬ ದೂರುಗಳು ಕೇಳಿಬಂದಿವೆ.
ಇಸ್ಪೀಟ್, ಮಟ್ಕಾ, ಬೆಟ್ಟಿಂಗ್ ದಂಧೆಗೆ ಗ್ರಾಮೀಣ ಭಾಗದ ಯುವಜನರೇ ಹೆಚ್ಚು ದಾಸರಾಗುತ್ತಿದ್ದು, ಜೂಜಾಟಕ್ಕೆ ಬಲಿಯಾದ ಕುಟುಂಬಗಳು ಬೀದಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಕೂಲಿ ಕಾರ್ಮಿಕರು ದಿನವಿಡೀ ಬೆವರು ಹರಿಸಿ ದುಡಿದ ಹಣವನ್ನು ಕ್ಷಣಾರ್ಧದಲ್ಲಿ ಜೂಜಿಗೆ ಬಳಸಿ ಖಾಲಿ ಕೈಯಲ್ಲಿ ಮನೆಗೆ ತೆರಳುವಂತಾಗಿದೆ. ಚಟಕ್ಕೆ ಬಿದ್ದ ಬಹುತೇಕರು ತೋಟ, ಮನೆ ಕಳೆದುಕೊಂಡು ಬೀದಿಗೆ ಬಿದ್ದಿರುವ ಸಾಕಷ್ಟು ಉದಾಹರಣೆಗಳು ಇವೆ.
ಎಗ್ಗಿಲ್ಲದೇ ನಡೆಯುತ್ತಿರುವ ಜೂಜಾಟಕ್ಕೆ ಪೊಲೀಸರು ಕೂಡಲೇ ಕಡಿವಾಣ ಹಾಕಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಈ ನಿಟ್ಟಿನಲ್ಲಿ ಇಂದು ನಗರದ ಹೊರವಲಯದಲ್ಲಿರುವ ಕೆರೆಯಂಗಳದಲ್ಲಿ ಅಂದರ್ ಬಾಹರ್ ಆಡುತ್ತಿದ್ದ ಅಡ್ಡೆ ಮೇಲೆ ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ್ದು, 16 ಜೂಜುಕೋರರನ್ನ ಬಂಧಿಸಿದ್ದಾರೆ. ಆರೋಪಿಗಳಿಂದ ಜೂಜಿಗೆ ಇಡಲಾಗಿದ್ದ 13 ಸಾವಿರ ರೂಪಾಯಿ ಹಣವನ್ನ ವಶಕ್ಕೆ ಪಡೆದಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಹೆಗ್ಗಡೆಹಳ್ಳಿ, ಟಿ.ಹೊಸಹಳ್ಳಿ, ನೇರಳೆಗಟ್ಟ ಗ್ರಾಮದಲ್ಲಿ ಸಹ ಮಾರ್ಚ್ 8ರ ಶುಕ್ರವಾರದಂದು ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪೊಲೀಸ್ ತಂಡ ಜೂಜು ಅಡ್ಡೆ ಮೇಲೆ ದಾಳಿ ನಡೆಸಿದೆ, ದಾಳಿ ನೆಡೆಸಿದ ವೇಳೆ 13 ಸಾವಿರ ರೂಪಾಯಿಗೆ ಅಂದರ್ ಬಾಹರ್ ಆಡುತ್ತಿದ್ದು ಕಂಡು ಬಂದಿದೆ. ಜೂಜಿನಲ್ಲಿ ತೊಡಗಿದ್ದ ಒಟ್ಟು 16 ಮಂದಿಯನ್ನ ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಗ್ರಾಮಾಂತರ ಪ್ರದೇಶದ ಜೂಜು ಅಡ್ಡೆಗಳ ಮೇಲೆ ಪೊಲೀಸರು ನಿಯಮಿತವಾಗಿ ದಾಳಿ ನಡೆಸಿದರೂ ತಹಬದಿಗೆ ಬಂದಿಲ್ಲ. ಪರಿಣಾಮಕಾರಿ ಗಸ್ತು ವ್ಯವಸ್ಥೆ ಮಾಡಿದರೆ ಸಾಕಷ್ಟು ಕುಟುಂಬಗಳು ಬಚಾವಾಗಲಿವೆ ಎಂಬುದು ಗ್ರಾಮೀಣ ಭಾಗದ ಜನರ ಅಭಿಪ್ರಾಯವಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…