ಜೂಜು ಅಡ್ಡೆಗಳ ಮೇಲೆ ಪೊಲೀಸರ ದಾಳಿ

ನಗರ ಕೇಂದ್ರಿತವಾಗಿದ್ದ ಜೂಜು ಅಡ್ಡೆಗಳು ಈಗ ಗ್ರಾಮಾಂತರ ಪ್ರದೇಶಗಳಲ್ಲೂ ಜಾಲ ಹಬ್ಬಿದೆ. ತಾಲೂಕಿನಲ್ಲಿರುವ ಕೆರಯಂಗಳ, ತೋಟದ ಮನೆಗಳು, ನೀಲಗಿರಿ ತೋಪುಗಳು ಜೂಜುಕೋರರ ಉಪಟಳದಿಂದ ನಲುಗುತ್ತಿವೆ ಎಂಬ ದೂರುಗಳು ಕೇಳಿಬಂದಿವೆ.

ಇಸ್ಪೀಟ್, ಮಟ್ಕಾ, ಬೆಟ್ಟಿಂಗ್ ದಂಧೆಗೆ ಗ್ರಾಮೀಣ ಭಾಗದ ಯುವಜನರೇ ಹೆಚ್ಚು ದಾಸರಾಗುತ್ತಿದ್ದು, ಜೂಜಾಟಕ್ಕೆ ಬಲಿಯಾದ ಕುಟುಂಬಗಳು ಬೀದಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಕೂಲಿ ಕಾರ್ಮಿಕರು ದಿನವಿಡೀ ಬೆವರು ಹರಿಸಿ ದುಡಿದ ಹಣವನ್ನು ಕ್ಷಣಾರ್ಧದಲ್ಲಿ ಜೂಜಿಗೆ ಬಳಸಿ ಖಾಲಿ ಕೈಯಲ್ಲಿ ಮನೆಗೆ ತೆರಳುವಂತಾಗಿದೆ. ಚಟಕ್ಕೆ ಬಿದ್ದ ಬಹುತೇಕರು ತೋಟ, ಮನೆ ಕಳೆದುಕೊಂಡು ಬೀದಿಗೆ ಬಿದ್ದಿರುವ ಸಾಕಷ್ಟು ಉದಾಹರಣೆಗಳು ಇವೆ.

ಎಗ್ಗಿಲ್ಲದೇ ನಡೆಯುತ್ತಿರುವ ಜೂಜಾಟಕ್ಕೆ ಪೊಲೀಸರು ಕೂಡಲೇ ಕಡಿವಾಣ ಹಾಕಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಈ ನಿಟ್ಟಿನಲ್ಲಿ ಇಂದು ನಗರದ ಹೊರವಲಯದಲ್ಲಿರುವ ಕೆರೆಯಂಗಳದಲ್ಲಿ ಅಂದರ್ ಬಾಹರ್ ಆಡುತ್ತಿದ್ದ ಅಡ್ಡೆ ಮೇಲೆ ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ್ದು, 16 ಜೂಜುಕೋರರನ್ನ ಬಂಧಿಸಿದ್ದಾರೆ. ಆರೋಪಿಗಳಿಂದ ಜೂಜಿಗೆ ಇಡಲಾಗಿದ್ದ 13 ಸಾವಿರ ರೂಪಾಯಿ ಹಣವನ್ನ ವಶಕ್ಕೆ ಪಡೆದಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಹೆಗ್ಗಡೆಹಳ್ಳಿ, ಟಿ.ಹೊಸಹಳ್ಳಿ, ನೇರಳೆಗಟ್ಟ ಗ್ರಾಮದಲ್ಲಿ ಸಹ ಮಾರ್ಚ್ 8ರ ಶುಕ್ರವಾರದಂದು ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪೊಲೀಸ್ ತಂಡ ಜೂಜು ಅಡ್ಡೆ ಮೇಲೆ ದಾಳಿ ನಡೆಸಿದೆ, ದಾಳಿ ನೆಡೆಸಿದ ವೇಳೆ 13 ಸಾವಿರ ರೂಪಾಯಿಗೆ ಅಂದರ್ ಬಾಹರ್ ಆಡುತ್ತಿದ್ದು ಕಂಡು ಬಂದಿದೆ. ಜೂಜಿನಲ್ಲಿ ತೊಡಗಿದ್ದ ಒಟ್ಟು 16 ಮಂದಿಯನ್ನ ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಗ್ರಾಮಾಂತರ ಪ್ರದೇಶದ ಜೂಜು ಅಡ್ಡೆಗಳ‌ ಮೇಲೆ ಪೊಲೀಸರು ನಿಯಮಿತವಾಗಿ ದಾಳಿ ನಡೆಸಿದರೂ ತಹಬದಿಗೆ ಬಂದಿಲ್ಲ. ಪರಿಣಾಮಕಾರಿ ಗಸ್ತು ವ್ಯವಸ್ಥೆ ಮಾಡಿದರೆ ಸಾಕಷ್ಟು ಕುಟುಂಬಗಳು ಬಚಾವಾಗಲಿವೆ ಎಂಬುದು ಗ್ರಾಮೀಣ ಭಾಗದ ಜನರ ಅಭಿಪ್ರಾಯವಾಗಿದೆ.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

17 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

23 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

1 day ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

1 day ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

3 days ago