ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿವಿಧ ವಿಷಯಗಳ ಕುರಿತು ಸಭೆ ನಡೆಸಿ, ಕೂಲಂಕಷವಾಗಿ ಚರ್ಚಿಸಿದರು.
ಈ ಸಭೆಯ ಮುಖ್ಯಾಂಶಗಳು:
• ಜೂನ್ ಒಂದರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಶಿವಮೊಗ್ಗದಲ್ಲಿ ಚಾಲನೆ ನೀಡಲಾಗುವುದು.
• ಒಂದು ಕೆಪಿಎಸ್ ಶಾಲೆಯಲ್ಲಿ 1200 ಮಕ್ಕಳಿಗೆ ಪ್ರವೇಶಾವಕಾಶ ಸಿಗಲಿದ್ದು, ಎಲ್ಕೆಜಿ ಇಂದ ಪಿಯುಸಿ ವರೆಗೆ ಒಂದೇ ಕಡೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ದೊರೆಯಲಿದೆ. ಮುಂದಿನ ಎರಡು ವರ್ಷಗಳಲ್ಲಿ ಎಲ್ಲಾ 800 ಶಾಲೆಗಳು ಸಂಪೂರ್ಣವಾಗಿ ಸಿದ್ಧವಾಗಬೇಕು.
• ಈ ವರ್ಷ 800 ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಆರಂಭಿಸಲು ಸಂಬಂಧಪಟ್ಟವರು ಟೆಂಡರ್ ಪ್ರಕ್ರಿಯೆಗೆ ಆದಷ್ಟು ಬೇಗನೆ ಚಾಲನೆ ನೀಡಬೇಕು.
• ಕೆಪಿಎಸ್ ಶಾಲೆಗಳಿಗೆ ಶಾಲಾ ಬಸ್ ವ್ಯವಸ್ಥೆ ಸೌಲಭ್ಯವನ್ನು ಯಾವ ರೀತಿಯಲ್ಲಿ ಕಲ್ಪಿಸಬಹುದು ಎಂಬ ಬಗ್ಗೆ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು.
• 15 ಸಾವಿರ ಶಿಕ್ಷಕರನ್ನು ಭರ್ತಿ ಮಾಡುವ ಕುರಿತು ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ತಕ್ಷಣ ಸಲ್ಲಿಸಬೇಕು.
ಪರೀಕ್ಷೆಗಳ ಫಲಿತಾಂಶ ಸುಧಾರಣೆಯ ಮಾಹಿತಿ:
• ಈ ಬಾರಿ ಎಸ್ಎಸ್ಎಲ್ಸಿ ಯಲ್ಲಿ ಶೇ. 94.10ರಷ್ಟು ಫಲಿತಾಂಶ ದಾಖಲಾಗಿದ್ದು, ಕಳೆದ ವರ್ಷಕ್ಕಿಂತ ಶೇ.14.06 ಹೆಚ್ಚಾಗಿದೆ. ಪಿಯುಸಿಯಲ್ಲಿ ಈ ಬಾರಿ ಶೇ.86.48ರಷ್ಟು ಹೆಚ್ಚಳವಾಗಿದ್ದು, ಕಳೆದ ವರ್ಷಕ್ಕಿಂತ ಶೇ. 13 ಹೆಚ್ಚಳವಾಗಿದೆ.
• ಎಸ್ಎಸ್ಎಲ್ಸಿ ಯಲ್ಲಿ ಈ ವರ್ಷ ಶೇ.100 ರಷ್ಟು ಫಲಿತಾಂಶ ಪಡೆದ ಶಾಲೆಗಳ ಸಂಖ್ಯೆ 2,393 ಇದ್ದು, ಕಳೆದ ವರ್ಷ 766 ಶಾಲೆಗಳು ಶೇ.100ರಷ್ಟು ಫಲಿತಾಂಶ ದಾಖಲಿಸಿದ್ದವು.
• ಈ ಬಾರಿ ಎಸ್ಎಸ್ಎಲ್ಸಿ ಯಲ್ಲಿ ಎಸ್ಸಿ ಮತ್ತು ಎಸ್ಟಿ ಸಮುದಾಯದ ವಿದ್ಯಾರ್ಥಿಗಳ ಫಲಿತಾಂಶ ಶೇ.18 ರಷ್ಟು ಹೆಚ್ಚಳವಾಗಿದೆ. ಇದೇ ರೀತಿ ಎಲ್ಲಾ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಫಲಿತಾಂಶ ಗಣನೀಯವಾಗಿ ಸುಧಾರಣೆಯಾಗಿದೆ. ಕೆಟಗರಿ-1 ಶೇ.16.6, 2 ಎ- ಶೇ. 11.5, 2 ಬಿ – ಶೇ.18, 3ಎ – ಶೇ. 8.12, 3ಬಿ – ಶೇ.10 ಫಲಿತಾಂಶ ಸುಧಾರಣೆಯಾಗಿದೆ.
• ಕಲ್ಯಾಣ ಕರ್ನಾಟಕದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಯಾಗಿದೆ. ಖಾಸಗಿ ಶಾಲೆಗಳಿಗೆ ಹೋಲಿಸಿದರೆ ಶೇ.2ರಷ್ಟು ಹೆಚ್ಚಾಗಿದೆ. ಈ ಬಾರಿ ಯಾವುದೇ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ನೀಡಿಲ್ಲ. ಈ ಬಾರಿ ಎಸ್ಎಸ್ಎಲ್ಸಿ ಮೂರನೇ ಅಂತಿಮ ಪರೀಕ್ಷೆ ಇರುವುದಿಲ್ಲ.
• 2026ರಲ್ಲಿ ದ್ವಿತೀಯ ಪಿಯುಸಿ ಉತ್ತೀರ್ಣ ಪ್ರಮಾಣ ಶೇಕಡ 86.48 ಆಗಿದೆ. 2025ರಲ್ಲಿ ಶೇಕಡ 73.45 ಉತ್ತೀರ್ಣ ಪ್ರಮಾಣ ಇದ್ದು, ಶೇಕಡ 13.03 ಹೆಚ್ಚಳವಾಗಿದೆ
• ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದು ಪ್ರಸಕ್ತ ಸಾಲಿನಲ್ಲಿ ಎಸ್ಎಸ್ಎಲ್ಸಿ ಉತ್ತೀರ್ಣ ಪ್ರಮಾಣ ಗ್ರಾಮೀಣ ಪ್ರದೇಶದಲ್ಲಿ ಶೇಕಡ 94.80 ದಾಖಲಾಗಿದೆ. ನಗರ ಪ್ರದೇಶದಲ್ಲಿ ಶೇಕಡ 93.20 ದಾಖಲಾಗಿದೆ.
• ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಸಾಧನೆ ಪ್ರಸಕ್ತ ಸಾಲಿನಲ್ಲಿ ಶೇಕಡ 87.62, ನಗರ ಪ್ರದೇಶದ ವಿದ್ಯಾರ್ಥಿಗಳ ಉತ್ತೀರ್ಣ ಪ್ರಮಾಣ ಶೇಕಡ 85.95 ದಾಖಲಾಗಿದೆ.
• ಶಾಲಾ ಮಕ್ಕಳಿಗೆ ಉಚಿತ ಪಠ್ಯ ಪುಸ್ತಕಗಳೊಂದಿಗೆ ಉಚಿತ ನೋಟ್ ಬುಕ್ ವಿತರಿಸುವ ಬೇಡಿಕೆಯ ಬಗ್ಗೆ ಸಕಾಲದಲ್ಲಿ ಪರಿಶೀಲನೆ ನಡೆಸಲಾಗುವುದು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…