ಜೂನ್ ಒಂದರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಶಿವಮೊಗ್ಗದಲ್ಲಿ ಚಾಲನೆ- ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿವಿಧ ವಿಷಯಗಳ ಕುರಿತು ಸಭೆ ನಡೆಸಿ, ಕೂಲಂಕಷವಾಗಿ ಚರ್ಚಿಸಿದರು.

ಈ ಸಭೆಯ ಮುಖ್ಯಾಂಶಗಳು:

•  ಜೂನ್ ಒಂದರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಶಿವಮೊಗ್ಗದಲ್ಲಿ ಚಾಲನೆ ನೀಡಲಾಗುವುದು.

•  ಒಂದು ಕೆಪಿಎಸ್ ಶಾಲೆಯಲ್ಲಿ 1200 ಮಕ್ಕಳಿಗೆ ಪ್ರವೇಶಾವಕಾಶ ಸಿಗಲಿದ್ದು, ಎಲ್‌ಕೆಜಿ ಇಂದ ಪಿಯುಸಿ ವರೆಗೆ ಒಂದೇ ಕಡೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ದೊರೆಯಲಿದೆ. ಮುಂದಿನ ಎರಡು ವರ್ಷಗಳಲ್ಲಿ ಎಲ್ಲಾ 800 ಶಾಲೆಗಳು ಸಂಪೂರ್ಣವಾಗಿ ಸಿದ್ಧವಾಗಬೇಕು.

•  ಈ ವರ್ಷ 800 ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಆರಂಭಿಸಲು ಸಂಬಂಧಪಟ್ಟವರು ಟೆಂಡರ್ ಪ್ರಕ್ರಿಯೆಗೆ ಆದಷ್ಟು ಬೇಗನೆ ಚಾಲನೆ ನೀಡಬೇಕು.

•  ಕೆಪಿಎಸ್ ಶಾಲೆಗಳಿಗೆ ಶಾಲಾ ಬಸ್ ವ್ಯವಸ್ಥೆ ಸೌಲಭ್ಯವನ್ನು ಯಾವ ರೀತಿಯಲ್ಲಿ ಕಲ್ಪಿಸಬಹುದು ಎಂಬ ಬಗ್ಗೆ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು.

•  15 ಸಾವಿರ ಶಿಕ್ಷಕರನ್ನು ಭರ್ತಿ ಮಾಡುವ ಕುರಿತು ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ತಕ್ಷಣ ಸಲ್ಲಿಸಬೇಕು.

ಪರೀಕ್ಷೆಗಳ ಫಲಿತಾಂಶ ಸುಧಾರಣೆಯ ಮಾಹಿತಿ:

•  ಈ ಬಾರಿ ಎಸ್ಎಸ್ಎಲ್‌ಸಿ ಯಲ್ಲಿ ಶೇ. 94.10ರಷ್ಟು ಫಲಿತಾಂಶ ದಾಖಲಾಗಿದ್ದು, ಕಳೆದ ವರ್ಷಕ್ಕಿಂತ ಶೇ.14.06 ಹೆಚ್ಚಾಗಿದೆ. ಪಿಯುಸಿಯಲ್ಲಿ ಈ ಬಾರಿ ಶೇ.86.48ರಷ್ಟು ಹೆಚ್ಚಳವಾಗಿದ್ದು, ಕಳೆದ ವರ್ಷಕ್ಕಿಂತ ಶೇ. 13 ಹೆಚ್ಚಳವಾಗಿದೆ.

•  ಎಸ್ಎಸ್ಎಲ್‌ಸಿ ಯಲ್ಲಿ ಈ ವರ್ಷ ಶೇ.100 ರಷ್ಟು ಫಲಿತಾಂಶ ಪಡೆದ ಶಾಲೆಗಳ ಸಂಖ್ಯೆ 2,393 ಇದ್ದು, ಕಳೆದ ವರ್ಷ 766 ಶಾಲೆಗಳು ಶೇ.100ರಷ್ಟು ಫಲಿತಾಂಶ ದಾಖಲಿಸಿದ್ದವು.

•  ಈ ಬಾರಿ ಎಸ್ಎಸ್ಎಲ್‌ಸಿ ಯಲ್ಲಿ ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ವಿದ್ಯಾರ್ಥಿಗಳ ಫಲಿತಾಂಶ ಶೇ.18 ರಷ್ಟು ಹೆಚ್ಚಳವಾಗಿದೆ. ಇದೇ ರೀತಿ ಎಲ್ಲಾ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಫಲಿತಾಂಶ ಗಣನೀಯವಾಗಿ ಸುಧಾರಣೆಯಾಗಿದೆ. ಕೆಟಗರಿ-1 ಶೇ.16.6, 2 ಎ- ಶೇ. 11.5, 2 ಬಿ – ಶೇ.18, 3ಎ – ಶೇ. 8.12, 3ಬಿ – ಶೇ.10 ಫಲಿತಾಂಶ ಸುಧಾರಣೆಯಾಗಿದೆ.

•  ಕಲ್ಯಾಣ ಕರ್ನಾಟಕದಲ್ಲಿ ಎಸ್ಎಸ್ಎಲ್‌ಸಿ ಫಲಿತಾಂಶ ಸುಧಾರಣೆಯಾಗಿದೆ. ಖಾಸಗಿ ಶಾಲೆಗಳಿಗೆ ಹೋಲಿಸಿದರೆ ಶೇ.2ರಷ್ಟು ಹೆಚ್ಚಾಗಿದೆ. ಈ ಬಾರಿ ಯಾವುದೇ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ನೀಡಿಲ್ಲ. ಈ ಬಾರಿ ಎಸ್ಎಸ್ಎಲ್‌ಸಿ ಮೂರನೇ ಅಂತಿಮ ಪರೀಕ್ಷೆ ಇರುವುದಿಲ್ಲ.

•  2026ರಲ್ಲಿ ದ್ವಿತೀಯ ಪಿಯುಸಿ ಉತ್ತೀರ್ಣ ಪ್ರಮಾಣ ಶೇಕಡ 86.48 ಆಗಿದೆ. 2025ರಲ್ಲಿ ಶೇಕಡ 73.45 ಉತ್ತೀರ್ಣ ಪ್ರಮಾಣ ಇದ್ದು, ಶೇಕಡ 13.03 ಹೆಚ್ಚಳವಾಗಿದೆ

•  ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದು ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಉತ್ತೀರ್ಣ ಪ್ರಮಾಣ ಗ್ರಾಮೀಣ ಪ್ರದೇಶದಲ್ಲಿ ಶೇಕಡ 94.80  ದಾಖಲಾಗಿದೆ. ನಗರ ಪ್ರದೇಶದಲ್ಲಿ ಶೇಕಡ 93.20 ದಾಖಲಾಗಿದೆ.

•  ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಸಾಧನೆ ಪ್ರಸಕ್ತ ಸಾಲಿನಲ್ಲಿ ಶೇಕಡ 87.62, ನಗರ ಪ್ರದೇಶದ ವಿದ್ಯಾರ್ಥಿಗಳ ಉತ್ತೀರ್ಣ ಪ್ರಮಾಣ ಶೇಕಡ 85.95 ದಾಖಲಾಗಿದೆ.

•  ಶಾಲಾ ಮಕ್ಕಳಿಗೆ ಉಚಿತ ಪಠ್ಯ ಪುಸ್ತಕಗಳೊಂದಿಗೆ ಉಚಿತ ನೋಟ್ ಬುಕ್ ವಿತರಿಸುವ ಬೇಡಿಕೆಯ ಬಗ್ಗೆ ಸಕಾಲದಲ್ಲಿ ಪರಿಶೀಲನೆ ನಡೆಸಲಾಗುವುದು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

17 hours ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

2 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

3 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

4 days ago