ದೇಶದ ಯಾವ ಸರ್ಕಾರಗಳೂ ಹಿಂದೆಂದೂ ಮಾಡದ ಸಾಧನೆಯನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಆರೇ ತಿಂಗಳಲ್ಲಿ ಸಾಧಿಸಿ ತೋರಿಸಿದೆ. ಸರ್ಕಾರದ ಸಾಧನೆಗಳ ದಾಖಲೆ ಕಣ್ಣ ಮುಂದಿದೆ. ವಿರೋಧ ಪಕ್ಷಗಳು ಸರ್ಕಾರದ ಬಗ್ಗೆ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು. ಜೂನ್ 11 ಕ್ಕೆ ಶಕ್ತಿ ಯೋಜನೆ ಜಾರಿ ಆಯಿತು. ನವೆಂಬರ್ 23 ಕ್ಕೆ 100 ಕೋಟಿ 47 ಲಕ್ಷ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ಈ ಎಲ್ಲಾ ದಾಖಲೆಗಳು ಕಣ್ಣ ಮುಂದಿವೆ. ಆದರೂ ವಿರೋಧ ಪಕ್ಷಗಳು ಸುಳ್ಳು ಹೇಳುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ
ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ, ಜಾರಿ ಆದರೆ ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿಯವರು ಸೇರಿದಂತೆ ಬಿಜೆಪಿ ನಾಯಕರು ಆಡಿಕೊಂಡಿದ್ದರು. ಈಗ ನಾಡು ಶಕ್ತಿ ಯೋಜನೆಯ ಶತಕೋಟಿ ಸಂಭ್ರಮ ಆಚರಿಸುತ್ತಿದೆ. ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡುವ ಜತೆಗೆ ಸಮಾಜದ ಎಲ್ಲಾ ವರ್ಗದ ಬಡ-ಮಧ್ಯಮ ವರ್ಗದವರಿಗೆ ಶಕ್ತಿ ತುಂಬುವ ವಿಚಾರದಲ್ಲಿ ನಾವು ಇಟ್ಟ ಹೆಜ್ಜೆ ಹಿಂದಿಡುವುದಿಲ್ಲ ಎಂದು ಹೇಳಿದ್ದಾರೆ.
ಬಸ್ ಪ್ರಯಾಣಿಕರಲ್ಲಿ ಶೇ55 ರಷ್ಟು ಉಚಿತ ಬಸ್ ಪ್ರಯಾಣ ಮಾಡಿದ ಮಹಿಳೆಯರೇ ಇದ್ದಾರೆ. ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ತುಂಬುವುದು ನಮ್ಮ ಗುರಿ. ವಿರೋಧ ಪಕ್ಷದವರ ಟೀಕೆಗಳಿಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
1 ಕೋಟಿ 17 ಲಕ್ಷ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡು ಇವರಲ್ಲಿ 1 ಕೋಟಿ 10 ಲಕ್ಷ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ ತಲುಪುತ್ತಿದೆ. ಎಲ್ಲಾ ಜಾತಿ-ಧರ್ಮದ ಬಡವರು ಮಧ್ಯಮ ವರ್ಗದವರ ಮಹಿಳೆಯರಿಗೆ ಈ ಸೌಲಭ್ಯ ತಲುಪುತ್ತಿದೆ. ಜೊತೆಗೆ ಕೋಟಿ ಕೋಟಿ ಮನೆಗೆ ಉಚಿತ ವಿದ್ಯುತ್ ಮತ್ತು ಅಕ್ಕಿ ಹಾಗೂ ಅಕ್ಕಿಯ ಹಣವನ್ನು ಜನರ ಮಡಿಲಿಗೆ ಹಾಕುತ್ತಿದ್ದೇವೆ. ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಕೆಲವರಿಗೆ ಹೊಟ್ಟೆಯುರಿ ಎಂದಿದ್ದಾರೆ.
ಬಡವರ ಕೈಯಲ್ಲಿ ದುಡ್ಡು ಇರಬೇಕು ಎನ್ನುವುದು ನಮ್ಮ ಗುರಿ. ಹಣ ಇದ್ದರೆ ಆರ್ಥಿಕತೆಗೆ ಚೈತನ್ಯ ಬರುತ್ತದೆ. ಈ ಚೈತನ್ಯ ತುಂಬುವ ಕಾರ್ಯಕ್ರಮವನ್ನು ನಾವು ಘೋಷಿಸಿ, ಸಾಧಿಸಿ ತೋರಿಸಿದ್ದೀವಿ. ಜನರಿಗೆ ನಾವು ಕೊಟ್ಟ ಹಣ ವಾಪಾಸ್ ಸರ್ಕಾರಕ್ಕೇ ಬರುತ್ತದೆ. ನಾವು ಪುನಃ ಜನರ ಜೇಬಿಗೆ ಅದೇ ಹಣವನ್ನು ಹಾಕುತ್ತೇವೆ. ಇದರಿಂದ ಜಿಡಿಪಿ, ಆರ್ಥಿಕ ಚಟುವಟಿಕೆ ವೃದ್ಧಿಯಾಗುತ್ತದೆ ಎಂದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…