ದೇಶದ ಯಾವ ಸರ್ಕಾರಗಳೂ ಹಿಂದೆಂದೂ ಮಾಡದ ಸಾಧನೆಯನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಆರೇ ತಿಂಗಳಲ್ಲಿ ಸಾಧಿಸಿ ತೋರಿಸಿದೆ. ಸರ್ಕಾರದ ಸಾಧನೆಗಳ ದಾಖಲೆ ಕಣ್ಣ ಮುಂದಿದೆ. ವಿರೋಧ ಪಕ್ಷಗಳು ಸರ್ಕಾರದ ಬಗ್ಗೆ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು. ಜೂನ್ 11 ಕ್ಕೆ ಶಕ್ತಿ ಯೋಜನೆ ಜಾರಿ ಆಯಿತು. ನವೆಂಬರ್ 23 ಕ್ಕೆ 100 ಕೋಟಿ 47 ಲಕ್ಷ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ಈ ಎಲ್ಲಾ ದಾಖಲೆಗಳು ಕಣ್ಣ ಮುಂದಿವೆ. ಆದರೂ ವಿರೋಧ ಪಕ್ಷಗಳು ಸುಳ್ಳು ಹೇಳುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ
ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ, ಜಾರಿ ಆದರೆ ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿಯವರು ಸೇರಿದಂತೆ ಬಿಜೆಪಿ ನಾಯಕರು ಆಡಿಕೊಂಡಿದ್ದರು. ಈಗ ನಾಡು ಶಕ್ತಿ ಯೋಜನೆಯ ಶತಕೋಟಿ ಸಂಭ್ರಮ ಆಚರಿಸುತ್ತಿದೆ. ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡುವ ಜತೆಗೆ ಸಮಾಜದ ಎಲ್ಲಾ ವರ್ಗದ ಬಡ-ಮಧ್ಯಮ ವರ್ಗದವರಿಗೆ ಶಕ್ತಿ ತುಂಬುವ ವಿಚಾರದಲ್ಲಿ ನಾವು ಇಟ್ಟ ಹೆಜ್ಜೆ ಹಿಂದಿಡುವುದಿಲ್ಲ ಎಂದು ಹೇಳಿದ್ದಾರೆ.
ಬಸ್ ಪ್ರಯಾಣಿಕರಲ್ಲಿ ಶೇ55 ರಷ್ಟು ಉಚಿತ ಬಸ್ ಪ್ರಯಾಣ ಮಾಡಿದ ಮಹಿಳೆಯರೇ ಇದ್ದಾರೆ. ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ತುಂಬುವುದು ನಮ್ಮ ಗುರಿ. ವಿರೋಧ ಪಕ್ಷದವರ ಟೀಕೆಗಳಿಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
1 ಕೋಟಿ 17 ಲಕ್ಷ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡು ಇವರಲ್ಲಿ 1 ಕೋಟಿ 10 ಲಕ್ಷ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ ತಲುಪುತ್ತಿದೆ. ಎಲ್ಲಾ ಜಾತಿ-ಧರ್ಮದ ಬಡವರು ಮಧ್ಯಮ ವರ್ಗದವರ ಮಹಿಳೆಯರಿಗೆ ಈ ಸೌಲಭ್ಯ ತಲುಪುತ್ತಿದೆ. ಜೊತೆಗೆ ಕೋಟಿ ಕೋಟಿ ಮನೆಗೆ ಉಚಿತ ವಿದ್ಯುತ್ ಮತ್ತು ಅಕ್ಕಿ ಹಾಗೂ ಅಕ್ಕಿಯ ಹಣವನ್ನು ಜನರ ಮಡಿಲಿಗೆ ಹಾಕುತ್ತಿದ್ದೇವೆ. ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಕೆಲವರಿಗೆ ಹೊಟ್ಟೆಯುರಿ ಎಂದಿದ್ದಾರೆ.
ಬಡವರ ಕೈಯಲ್ಲಿ ದುಡ್ಡು ಇರಬೇಕು ಎನ್ನುವುದು ನಮ್ಮ ಗುರಿ. ಹಣ ಇದ್ದರೆ ಆರ್ಥಿಕತೆಗೆ ಚೈತನ್ಯ ಬರುತ್ತದೆ. ಈ ಚೈತನ್ಯ ತುಂಬುವ ಕಾರ್ಯಕ್ರಮವನ್ನು ನಾವು ಘೋಷಿಸಿ, ಸಾಧಿಸಿ ತೋರಿಸಿದ್ದೀವಿ. ಜನರಿಗೆ ನಾವು ಕೊಟ್ಟ ಹಣ ವಾಪಾಸ್ ಸರ್ಕಾರಕ್ಕೇ ಬರುತ್ತದೆ. ನಾವು ಪುನಃ ಜನರ ಜೇಬಿಗೆ ಅದೇ ಹಣವನ್ನು ಹಾಕುತ್ತೇವೆ. ಇದರಿಂದ ಜಿಡಿಪಿ, ಆರ್ಥಿಕ ಚಟುವಟಿಕೆ ವೃದ್ಧಿಯಾಗುತ್ತದೆ ಎಂದರು.
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…