Categories: ರಾಜ್ಯ

ಜೂನ್ 11 ಕ್ಕೆ ಶಕ್ತಿ ಯೋಜನೆ ಜಾರಿ: ನವೆಂಬರ್ 23 ಕ್ಕೆ 100 ಕೋಟಿ 47 ಲಕ್ಷ ಮಹಿಳೆಯರು ಉಚಿತ ಪ್ರಯಾಣ

ದೇಶದ ಯಾವ ಸರ್ಕಾರಗಳೂ ಹಿಂದೆಂದೂ ಮಾಡದ ಸಾಧನೆಯನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಆರೇ ತಿಂಗಳಲ್ಲಿ ಸಾಧಿಸಿ ತೋರಿಸಿದೆ. ಸರ್ಕಾರದ ಸಾಧನೆಗಳ ದಾಖಲೆ ಕಣ್ಣ ಮುಂದಿದೆ. ವಿರೋಧ ಪಕ್ಷಗಳು ಸರ್ಕಾರದ ಬಗ್ಗೆ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು.‌ ಜೂನ್ 11 ಕ್ಕೆ ಶಕ್ತಿ ಯೋಜನೆ ಜಾರಿ ಆಯಿತು. ನವೆಂಬರ್ 23 ಕ್ಕೆ 100 ಕೋಟಿ 47 ಲಕ್ಷ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ಈ ಎಲ್ಲಾ ದಾಖಲೆಗಳು ಕಣ್ಣ ಮುಂದಿವೆ. ಆದರೂ ವಿರೋಧ ಪಕ್ಷಗಳು ಸುಳ್ಳು ಹೇಳುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ

ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ, ಜಾರಿ ಆದರೆ ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿಯವರು ಸೇರಿದಂತೆ ಬಿಜೆಪಿ ನಾಯಕರು ಆಡಿಕೊಂಡಿದ್ದರು. ಈಗ ನಾಡು ಶಕ್ತಿ ಯೋಜನೆಯ ಶತಕೋಟಿ ಸಂಭ್ರಮ ಆಚರಿಸುತ್ತಿದೆ. ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡುವ ಜತೆಗೆ ಸಮಾಜದ ಎಲ್ಲಾ ವರ್ಗದ ಬಡ-ಮಧ್ಯಮ ವರ್ಗದವರಿಗೆ ಶಕ್ತಿ ತುಂಬುವ ವಿಚಾರದಲ್ಲಿ ನಾವು ಇಟ್ಟ ಹೆಜ್ಜೆ ಹಿಂದಿಡುವುದಿಲ್ಲ ಎಂದು ಹೇಳಿದ್ದಾರೆ.

ಬಸ್ ಪ್ರಯಾಣಿಕರಲ್ಲಿ ಶೇ55 ರಷ್ಟು ಉಚಿತ ಬಸ್ ಪ್ರಯಾಣ ಮಾಡಿದ ಮಹಿಳೆಯರೇ ಇದ್ದಾರೆ. ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ತುಂಬುವುದು ನಮ್ಮ ಗುರಿ. ವಿರೋಧ ಪಕ್ಷದವರ ಟೀಕೆಗಳಿಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

1 ಕೋಟಿ 17 ಲಕ್ಷ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡು ಇವರಲ್ಲಿ 1 ಕೋಟಿ 10 ಲಕ್ಷ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ ತಲುಪುತ್ತಿದೆ. ಎಲ್ಲಾ ಜಾತಿ-ಧರ್ಮದ ಬಡವರು ಮಧ್ಯಮ ವರ್ಗದವರ ಮಹಿಳೆಯರಿಗೆ ಈ ಸೌಲಭ್ಯ ತಲುಪುತ್ತಿದೆ. ಜೊತೆಗೆ ಕೋಟಿ ಕೋಟಿ ಮನೆಗೆ ಉಚಿತ ವಿದ್ಯುತ್ ಮತ್ತು ಅಕ್ಕಿ ಹಾಗೂ ಅಕ್ಕಿಯ ಹಣವನ್ನು ಜನರ ಮಡಿಲಿಗೆ ಹಾಕುತ್ತಿದ್ದೇವೆ. ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಕೆಲವರಿಗೆ ಹೊಟ್ಟೆಯುರಿ ಎಂದಿದ್ದಾರೆ.

ಬಡವರ ಕೈಯಲ್ಲಿ ದುಡ್ಡು ಇರಬೇಕು ಎನ್ನುವುದು ನಮ್ಮ ಗುರಿ. ಹಣ ಇದ್ದರೆ ಆರ್ಥಿಕತೆಗೆ ಚೈತನ್ಯ ಬರುತ್ತದೆ. ಈ ಚೈತನ್ಯ ತುಂಬುವ ಕಾರ್ಯಕ್ರಮವನ್ನು ನಾವು ಘೋಷಿಸಿ, ಸಾಧಿಸಿ ತೋರಿಸಿದ್ದೀವಿ.  ಜನರಿಗೆ ನಾವು ಕೊಟ್ಟ ಹಣ ವಾಪಾಸ್ ಸರ್ಕಾರಕ್ಕೇ ಬರುತ್ತದೆ. ನಾವು ಪುನಃ ಜನರ ಜೇಬಿಗೆ ಅದೇ ಹಣವನ್ನು ಹಾಕುತ್ತೇವೆ. ಇದರಿಂದ ಜಿಡಿಪಿ, ಆರ್ಥಿಕ ಚಟುವಟಿಕೆ ವೃದ್ಧಿಯಾಗುತ್ತದೆ ಎಂದರು.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 hour ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

5 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

14 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

21 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

22 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago