Categories: ರಾಜ್ಯ

ಜೂನ್ 11 ಕ್ಕೆ ಶಕ್ತಿ ಯೋಜನೆ ಜಾರಿ: ನವೆಂಬರ್ 23 ಕ್ಕೆ 100 ಕೋಟಿ 47 ಲಕ್ಷ ಮಹಿಳೆಯರು ಉಚಿತ ಪ್ರಯಾಣ

ದೇಶದ ಯಾವ ಸರ್ಕಾರಗಳೂ ಹಿಂದೆಂದೂ ಮಾಡದ ಸಾಧನೆಯನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಆರೇ ತಿಂಗಳಲ್ಲಿ ಸಾಧಿಸಿ ತೋರಿಸಿದೆ. ಸರ್ಕಾರದ ಸಾಧನೆಗಳ ದಾಖಲೆ ಕಣ್ಣ ಮುಂದಿದೆ. ವಿರೋಧ ಪಕ್ಷಗಳು ಸರ್ಕಾರದ ಬಗ್ಗೆ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು.‌ ಜೂನ್ 11 ಕ್ಕೆ ಶಕ್ತಿ ಯೋಜನೆ ಜಾರಿ ಆಯಿತು. ನವೆಂಬರ್ 23 ಕ್ಕೆ 100 ಕೋಟಿ 47 ಲಕ್ಷ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ಈ ಎಲ್ಲಾ ದಾಖಲೆಗಳು ಕಣ್ಣ ಮುಂದಿವೆ. ಆದರೂ ವಿರೋಧ ಪಕ್ಷಗಳು ಸುಳ್ಳು ಹೇಳುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ

ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ, ಜಾರಿ ಆದರೆ ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿಯವರು ಸೇರಿದಂತೆ ಬಿಜೆಪಿ ನಾಯಕರು ಆಡಿಕೊಂಡಿದ್ದರು. ಈಗ ನಾಡು ಶಕ್ತಿ ಯೋಜನೆಯ ಶತಕೋಟಿ ಸಂಭ್ರಮ ಆಚರಿಸುತ್ತಿದೆ. ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡುವ ಜತೆಗೆ ಸಮಾಜದ ಎಲ್ಲಾ ವರ್ಗದ ಬಡ-ಮಧ್ಯಮ ವರ್ಗದವರಿಗೆ ಶಕ್ತಿ ತುಂಬುವ ವಿಚಾರದಲ್ಲಿ ನಾವು ಇಟ್ಟ ಹೆಜ್ಜೆ ಹಿಂದಿಡುವುದಿಲ್ಲ ಎಂದು ಹೇಳಿದ್ದಾರೆ.

ಬಸ್ ಪ್ರಯಾಣಿಕರಲ್ಲಿ ಶೇ55 ರಷ್ಟು ಉಚಿತ ಬಸ್ ಪ್ರಯಾಣ ಮಾಡಿದ ಮಹಿಳೆಯರೇ ಇದ್ದಾರೆ. ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ತುಂಬುವುದು ನಮ್ಮ ಗುರಿ. ವಿರೋಧ ಪಕ್ಷದವರ ಟೀಕೆಗಳಿಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

1 ಕೋಟಿ 17 ಲಕ್ಷ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡು ಇವರಲ್ಲಿ 1 ಕೋಟಿ 10 ಲಕ್ಷ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ ತಲುಪುತ್ತಿದೆ. ಎಲ್ಲಾ ಜಾತಿ-ಧರ್ಮದ ಬಡವರು ಮಧ್ಯಮ ವರ್ಗದವರ ಮಹಿಳೆಯರಿಗೆ ಈ ಸೌಲಭ್ಯ ತಲುಪುತ್ತಿದೆ. ಜೊತೆಗೆ ಕೋಟಿ ಕೋಟಿ ಮನೆಗೆ ಉಚಿತ ವಿದ್ಯುತ್ ಮತ್ತು ಅಕ್ಕಿ ಹಾಗೂ ಅಕ್ಕಿಯ ಹಣವನ್ನು ಜನರ ಮಡಿಲಿಗೆ ಹಾಕುತ್ತಿದ್ದೇವೆ. ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಕೆಲವರಿಗೆ ಹೊಟ್ಟೆಯುರಿ ಎಂದಿದ್ದಾರೆ.

ಬಡವರ ಕೈಯಲ್ಲಿ ದುಡ್ಡು ಇರಬೇಕು ಎನ್ನುವುದು ನಮ್ಮ ಗುರಿ. ಹಣ ಇದ್ದರೆ ಆರ್ಥಿಕತೆಗೆ ಚೈತನ್ಯ ಬರುತ್ತದೆ. ಈ ಚೈತನ್ಯ ತುಂಬುವ ಕಾರ್ಯಕ್ರಮವನ್ನು ನಾವು ಘೋಷಿಸಿ, ಸಾಧಿಸಿ ತೋರಿಸಿದ್ದೀವಿ.  ಜನರಿಗೆ ನಾವು ಕೊಟ್ಟ ಹಣ ವಾಪಾಸ್ ಸರ್ಕಾರಕ್ಕೇ ಬರುತ್ತದೆ. ನಾವು ಪುನಃ ಜನರ ಜೇಬಿಗೆ ಅದೇ ಹಣವನ್ನು ಹಾಕುತ್ತೇವೆ. ಇದರಿಂದ ಜಿಡಿಪಿ, ಆರ್ಥಿಕ ಚಟುವಟಿಕೆ ವೃದ್ಧಿಯಾಗುತ್ತದೆ ಎಂದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

9 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

13 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago