Categories: ರಾಜ್ಯ

ಜೂನ್ 11 ಕ್ಕೆ ಶಕ್ತಿ ಯೋಜನೆ ಜಾರಿ: ನವೆಂಬರ್ 23 ಕ್ಕೆ 100 ಕೋಟಿ 47 ಲಕ್ಷ ಮಹಿಳೆಯರು ಉಚಿತ ಪ್ರಯಾಣ

ದೇಶದ ಯಾವ ಸರ್ಕಾರಗಳೂ ಹಿಂದೆಂದೂ ಮಾಡದ ಸಾಧನೆಯನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಆರೇ ತಿಂಗಳಲ್ಲಿ ಸಾಧಿಸಿ ತೋರಿಸಿದೆ. ಸರ್ಕಾರದ ಸಾಧನೆಗಳ ದಾಖಲೆ ಕಣ್ಣ ಮುಂದಿದೆ. ವಿರೋಧ ಪಕ್ಷಗಳು ಸರ್ಕಾರದ ಬಗ್ಗೆ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು.‌ ಜೂನ್ 11 ಕ್ಕೆ ಶಕ್ತಿ ಯೋಜನೆ ಜಾರಿ ಆಯಿತು. ನವೆಂಬರ್ 23 ಕ್ಕೆ 100 ಕೋಟಿ 47 ಲಕ್ಷ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ಈ ಎಲ್ಲಾ ದಾಖಲೆಗಳು ಕಣ್ಣ ಮುಂದಿವೆ. ಆದರೂ ವಿರೋಧ ಪಕ್ಷಗಳು ಸುಳ್ಳು ಹೇಳುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ

ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ, ಜಾರಿ ಆದರೆ ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿಯವರು ಸೇರಿದಂತೆ ಬಿಜೆಪಿ ನಾಯಕರು ಆಡಿಕೊಂಡಿದ್ದರು. ಈಗ ನಾಡು ಶಕ್ತಿ ಯೋಜನೆಯ ಶತಕೋಟಿ ಸಂಭ್ರಮ ಆಚರಿಸುತ್ತಿದೆ. ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡುವ ಜತೆಗೆ ಸಮಾಜದ ಎಲ್ಲಾ ವರ್ಗದ ಬಡ-ಮಧ್ಯಮ ವರ್ಗದವರಿಗೆ ಶಕ್ತಿ ತುಂಬುವ ವಿಚಾರದಲ್ಲಿ ನಾವು ಇಟ್ಟ ಹೆಜ್ಜೆ ಹಿಂದಿಡುವುದಿಲ್ಲ ಎಂದು ಹೇಳಿದ್ದಾರೆ.

ಬಸ್ ಪ್ರಯಾಣಿಕರಲ್ಲಿ ಶೇ55 ರಷ್ಟು ಉಚಿತ ಬಸ್ ಪ್ರಯಾಣ ಮಾಡಿದ ಮಹಿಳೆಯರೇ ಇದ್ದಾರೆ. ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ತುಂಬುವುದು ನಮ್ಮ ಗುರಿ. ವಿರೋಧ ಪಕ್ಷದವರ ಟೀಕೆಗಳಿಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

1 ಕೋಟಿ 17 ಲಕ್ಷ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡು ಇವರಲ್ಲಿ 1 ಕೋಟಿ 10 ಲಕ್ಷ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ ತಲುಪುತ್ತಿದೆ. ಎಲ್ಲಾ ಜಾತಿ-ಧರ್ಮದ ಬಡವರು ಮಧ್ಯಮ ವರ್ಗದವರ ಮಹಿಳೆಯರಿಗೆ ಈ ಸೌಲಭ್ಯ ತಲುಪುತ್ತಿದೆ. ಜೊತೆಗೆ ಕೋಟಿ ಕೋಟಿ ಮನೆಗೆ ಉಚಿತ ವಿದ್ಯುತ್ ಮತ್ತು ಅಕ್ಕಿ ಹಾಗೂ ಅಕ್ಕಿಯ ಹಣವನ್ನು ಜನರ ಮಡಿಲಿಗೆ ಹಾಕುತ್ತಿದ್ದೇವೆ. ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಕೆಲವರಿಗೆ ಹೊಟ್ಟೆಯುರಿ ಎಂದಿದ್ದಾರೆ.

ಬಡವರ ಕೈಯಲ್ಲಿ ದುಡ್ಡು ಇರಬೇಕು ಎನ್ನುವುದು ನಮ್ಮ ಗುರಿ. ಹಣ ಇದ್ದರೆ ಆರ್ಥಿಕತೆಗೆ ಚೈತನ್ಯ ಬರುತ್ತದೆ. ಈ ಚೈತನ್ಯ ತುಂಬುವ ಕಾರ್ಯಕ್ರಮವನ್ನು ನಾವು ಘೋಷಿಸಿ, ಸಾಧಿಸಿ ತೋರಿಸಿದ್ದೀವಿ.  ಜನರಿಗೆ ನಾವು ಕೊಟ್ಟ ಹಣ ವಾಪಾಸ್ ಸರ್ಕಾರಕ್ಕೇ ಬರುತ್ತದೆ. ನಾವು ಪುನಃ ಜನರ ಜೇಬಿಗೆ ಅದೇ ಹಣವನ್ನು ಹಾಕುತ್ತೇವೆ. ಇದರಿಂದ ಜಿಡಿಪಿ, ಆರ್ಥಿಕ ಚಟುವಟಿಕೆ ವೃದ್ಧಿಯಾಗುತ್ತದೆ ಎಂದರು.

Ramesh Babu

Journalist

Recent Posts

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

23 minutes ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

14 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

17 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago