ಜೂನ್ 21ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ

ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದಲ್ಲಿ 2023-24 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭವು ಜೂನ್ 21(ಶುಕ್ರವಾರ) ರಂದು ಹೊಸಕೋಟೆಯ ಶ್ರೀ ಚನ್ನಭೈರೇಗೌಡ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ನೆರವೇರಿಸಲಿದ್ದಾರೆ.
ಘನ ಉಪಸ್ಥಿತಿಯಲ್ಲಿ ಕರ್ನಾಟಕ ಸರ್ಕಾರದ 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ನಾರಾಯಣಸ್ವಾಮಿ, ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಹೊಸಕೋಟೆ ಶಾಸಕರಾದ ಶರತ್ ಕುಮಾರ್ ಬಚ್ಚೇಗೌಡ ವಹಿಸಿಕೊಳ್ಳಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ.ಕೆ.ಸುಧಾಕರ್, ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ನೆಲಮಂಗಲ ಶಾಸಕ ಎನ್.ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ರವಿ, ಪುಟ್ಟಣ್ಣ, ಎನ್.ನಾಗರಾಜು(ಎಂ.ಟಿ.ಬಿ), ರಾಮೋಜಿಗೌಡ, ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು, ಆಡಳಿತಾಧಿಕಾರಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸಲ್ಮಾಕೆ.ಫಾಹಿಂ, ಹೊಸಕೋಟೆ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಕೇಶವಮೂರ್ತಿ ಎನ್ ಉಪಸ್ತಿತರಿರುವರು.

ವಿಶೇಷ ಆಹ್ವಾನಿತರಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್.ಷಡಕ್ಷರಿ, ರಾಜ್ಯ ಉಪಾಧ್ಯಕ್ಷರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾದ ಹೆಚ್.ಬಾಲಕೃಷ್ಣ ಹಾಗೂ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಎಲ್ಲಾ ನಾಮ ನಿರ್ದೇಶಿತ ಸದಸ್ಯರು, ಮಾಧ್ಯಮ ಮತ್ತು ಪತ್ರಿಕಾ ಪ್ರತಿನಿಧಿಗಳು ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಮುಖಂಡರುಗಳು ಮತ್ತು ಸಾರ್ವಜನಿಕರು ಉಪಸ್ತಿತಿರಿರುತ್ತಾರೆ.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾದ ಡಾ.ಎನ್ ಶಿವಶಂಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ಅಧೀಕ್ಷಕರು ಮಲ್ಲಿಕಾರ್ಜುನ ಬಾಲದಂಡಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಗೌರವಾಧ್ಯಕ್ಷ ಮುನಿಶಾಮಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಟಿ.ಜಯಲಕ್ಷ್ಮಿ, ಹೊಸಕೋಟೆ ತಾಲ್ಲೂಕು ತಹಶೀಲ್ದಾರ ಎಂ.ವಿಜಯಕುಮಾರ್, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಅರುಳ್ ಸಂತೋಷ್, ಖಜಾಂಚಿ ಮೊಹಮ್ಮದ್ ಮುಜಾಮೀರ್, ಪ್ರಧಾನ ಕಾರ್ಯದರ್ಶಿ ಪಿ.ಗಂಗಾಧರಪ್ಪ, ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ ಲಕ್ಷ್ಮಿ ನರಸಿಂಹಯ್ಯ ಎನ್, ನೆಲಮಂಗಲ ತಾಲ್ಲೂಕು ಅದ್ಯಕ್ಷ ವಾಸುದೇವ ಮೂರ್ತಿ, ಹಿರಿಯ ಉಪಾಧ್ಯಕ್ಷ ರವಿಶಂಕರ ಉಪಸ್ತಿತರಿರುವರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

14 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

21 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

24 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

2 days ago