ಜೂನ್ 25ರ ದೇವನಹಳ್ಳಿ ಚಲೋಗೆ ಬೆಂಬಲಿಸಿ ಜನತಾಪಕ್ಷದ ವತಿಯಿಂದ ಸಂಪೂರ್ಣ ಬೆಂಬಲ

ದೇವನಹಳ್ಳಿ: ಪಟ್ಟಣದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಜನತಾಪಕ್ಷದ ವತಿಯಿಂದ ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ಇದೇ ಜೂನ್ 25ರ ದೇವನಹಳ್ಳಿ ಚಲೋಗೆ ಬೆಂಬಲಿಸಿ ಪತ್ರಿಕಾಗೋಷ್ಟಿ ನಡೆಸಿದರು.

ಈ ವೇಳೆಯಲ್ಲಿ ಜನತಾ ಪಕ್ಷದ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ನಾಗೇಶ್. ಎನ್ ಮಾತನಾಡಿ ರಾಜ್ಯದಲ್ಲಿ ಮೌಲ್ಯಧಾರಿತ ಆಡಳಿತ ತರುವ ಉದ್ದೇಶದೊಂದಿಗೆ ಜನತಾ ಪಕ್ಷವು ಮತ್ತೆ ಸಕ್ರಿಯವಾಗಿ ಸಂಘಟನೆಯಲ್ಲಿ ತೊಡಗಿದ್ದೇವೆ.

ರಾಜ್ಯದಲ್ಲಿ ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ನಿರಂತರ ಹೋರಾಟವು ಇತಿಹಾಸ ಸೃಷ್ಟಿಸಿರುವ ಹೋರಾಟವಾಗಿದೆ. ಸ್ಥಳೀಯ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ,ಅವರ ಸಮಸ್ಯೆಗಳನ್ನು ಲೆಕ್ಕಿಸದೆ ಅಭಿವೃದ್ಧಿಯ ಹೆಸರಲ್ಲಿ ಕೃಷಿ ಭೂಮಿಯನ್ನು ನಾಶ ಮಾಡುತ್ತಿರುವುದು ಸಮಂಜಸವಲ್ಲ ಅನ್ಯ ಜಿಲ್ಲೆಗಳಲ್ಲಿ ಕೃಷಿಗೆ ಯೋಗ್ಯವಲ್ಲದ ಬರಡು ಭೂಮಿಯನ್ನು ಬಳಸಿಕೊಳ್ಳಿ ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ಮಾಡಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

“ರೈತರ ಹೋರಾಟ ದೇಶದ ಉಳಿವಿಗಾಗಿ “ರೈತರ ವಿಷಯದಲ್ಲಿ ಎಲ್ಲಾ ಪಕ್ಷಗಳು ಒಂದೇ ಹಾಗಾಗಿ ರಾಜಕೀಯ ವ್ಯಕ್ತಿಗಳನ್ನ ನಂಬಿ ಮೋಸ ಹೋಗಿದ್ದು ಸಾಕು ರೈತರು ತಿರುಗಿ ಬಿದ್ದರೆ ಅವರ ಸ್ಥಿತಿ ಹೇಗಿರುತ್ತದೆ ಎಂದು ಭವಿಷ್ಯದಲ್ಲಿ ತಿಳಿಸಲಾಗುತ್ತದೆ ಹಾಗೂ ಪ್ರಜಾಪ್ರಭುತ್ವದಲ್ಲಿ ಕಾರ್ಪೊರೇಟ್ ವ್ಯಕ್ತಿಗಳಿಗಾಗಿ ಆಡಳಿತ ನಡೆಸಲಾಗುತ್ತಿದೆ ಕೈಗಾರಿಕೆಗಳನ್ನು ಫಲವತ್ತಾದ ಭೂಮಿಯಲ್ಲಿ ಮಾಡಲು ಹೊರಟಿರುವುದು ಮೂರ್ಖರ ನಿರ್ಧಾರ. ನೆಲೆ ಇಲ್ಲದೆ ಕೃಷಿ ಅಭಿವೃದ್ಧಿ ಹೇಗೆ ಸಾಧ್ಯ ,ರಾಜಕಾರಣಿಗಳು ಕಾರ್ಪೊರೇಟ್ ಕಂಪೆನಿಗಳಿಗಾಗಿ ಭೂಮಿ ಒದಗಿಸಿ ತೆರಿಗೆ ಹೆಸರಿನಲ್ಲಿ ಲೂಟಿ ಮಾಡುತ್ತಿದ್ದಾರೆ ಎಂದು ಅಗ್ರಹಿಸಿದರು.

ಇಂದಿಗೂ ರೈತರು ಆತ್ಮಹತ್ಯೆ ನಿಂತಿಲ್ಲ ಕಾರಣ ಹಲವಾರು ಭೂಮಿ ರಕ್ಷಣೆಗಾಗಿ ಸರ್ಕಾರ ಮೊರೆ ಹೋದಲ್ಲಿ ರಕ್ಷಿಸಬೇಕಾದ ಸರ್ಕಾರವೇ ಭೂಸ್ವಾಧೀನ ಮಾಡಲು ಹೊರಟರೆ ಹೊಣೆ ಯಾರು ಹಾಗೂ ರೈತರ ಮೇಲೆ ಗುಂಡಿನ ದಾಳಿ ಎಂತಹ ಪರಿಸ್ಥಿತಿ ಲೂಟಿಕೋರರು ದರೋಡೆಕೋರರು, ಕೊಲೆಗಾರರು ಆರಾಮವಾಗಿ ಓಡಾಡುತ್ತಿದ್ದಾರೆ ಆದರೆ ರೈತರು ತಮ್ಮ ಭೂಮಿ ಹೋರಾಟ ಮಾಡಿ ಮಾಡುವಂತಿಲ್ಲ ಬಂದಿಸಲಾಗುತ್ತದೆ ಇದು ಯಾವ ಎಂದು ಪ್ರಶ್ನಿಸಿದ್ದಾರೆ.

ಇದೇ ಸಂದರ್ಭದಲ್ಲಿ ಜನತಾ ಪಕ್ಷದ ರಾಜ್ಯ ಕಾರ್ಯದರ್ಶಿ ಕೋ.ಮದನ್, ರಾಷ್ಟ್ರೀಯ ಮಹಿಳಾ ಘಟಕದ ಅಧ್ಯಕ್ಷರಾದ ಡಾ.ವಾಣಿ .ಎನ್. ಶೆಟ್ಟಿ, ಬೆಂಗಳೂರು ನಗರ ಘಟಕದ ಅಧ್ಯಕ್ಷರಾದ ರಾಜು .ಎ, ಕೋಲಾರ ಜಿಲ್ಲಾಧ್ಯಕ್ಷರಾದ ಸುಬ್ರಮಣಿ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

4 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

5 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

7 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

9 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

11 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

11 hours ago