ಜೂನ್ 25ರ ದೇವನಹಳ್ಳಿ ಚಲೋಗೆ ಬೆಂಬಲಿಸಿ ಜನತಾಪಕ್ಷದ ವತಿಯಿಂದ ಸಂಪೂರ್ಣ ಬೆಂಬಲ

ದೇವನಹಳ್ಳಿ: ಪಟ್ಟಣದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಜನತಾಪಕ್ಷದ ವತಿಯಿಂದ ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ಇದೇ ಜೂನ್ 25ರ ದೇವನಹಳ್ಳಿ ಚಲೋಗೆ ಬೆಂಬಲಿಸಿ ಪತ್ರಿಕಾಗೋಷ್ಟಿ ನಡೆಸಿದರು.

ಈ ವೇಳೆಯಲ್ಲಿ ಜನತಾ ಪಕ್ಷದ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ನಾಗೇಶ್. ಎನ್ ಮಾತನಾಡಿ ರಾಜ್ಯದಲ್ಲಿ ಮೌಲ್ಯಧಾರಿತ ಆಡಳಿತ ತರುವ ಉದ್ದೇಶದೊಂದಿಗೆ ಜನತಾ ಪಕ್ಷವು ಮತ್ತೆ ಸಕ್ರಿಯವಾಗಿ ಸಂಘಟನೆಯಲ್ಲಿ ತೊಡಗಿದ್ದೇವೆ.

ರಾಜ್ಯದಲ್ಲಿ ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ನಿರಂತರ ಹೋರಾಟವು ಇತಿಹಾಸ ಸೃಷ್ಟಿಸಿರುವ ಹೋರಾಟವಾಗಿದೆ. ಸ್ಥಳೀಯ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ,ಅವರ ಸಮಸ್ಯೆಗಳನ್ನು ಲೆಕ್ಕಿಸದೆ ಅಭಿವೃದ್ಧಿಯ ಹೆಸರಲ್ಲಿ ಕೃಷಿ ಭೂಮಿಯನ್ನು ನಾಶ ಮಾಡುತ್ತಿರುವುದು ಸಮಂಜಸವಲ್ಲ ಅನ್ಯ ಜಿಲ್ಲೆಗಳಲ್ಲಿ ಕೃಷಿಗೆ ಯೋಗ್ಯವಲ್ಲದ ಬರಡು ಭೂಮಿಯನ್ನು ಬಳಸಿಕೊಳ್ಳಿ ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ಮಾಡಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

“ರೈತರ ಹೋರಾಟ ದೇಶದ ಉಳಿವಿಗಾಗಿ “ರೈತರ ವಿಷಯದಲ್ಲಿ ಎಲ್ಲಾ ಪಕ್ಷಗಳು ಒಂದೇ ಹಾಗಾಗಿ ರಾಜಕೀಯ ವ್ಯಕ್ತಿಗಳನ್ನ ನಂಬಿ ಮೋಸ ಹೋಗಿದ್ದು ಸಾಕು ರೈತರು ತಿರುಗಿ ಬಿದ್ದರೆ ಅವರ ಸ್ಥಿತಿ ಹೇಗಿರುತ್ತದೆ ಎಂದು ಭವಿಷ್ಯದಲ್ಲಿ ತಿಳಿಸಲಾಗುತ್ತದೆ ಹಾಗೂ ಪ್ರಜಾಪ್ರಭುತ್ವದಲ್ಲಿ ಕಾರ್ಪೊರೇಟ್ ವ್ಯಕ್ತಿಗಳಿಗಾಗಿ ಆಡಳಿತ ನಡೆಸಲಾಗುತ್ತಿದೆ ಕೈಗಾರಿಕೆಗಳನ್ನು ಫಲವತ್ತಾದ ಭೂಮಿಯಲ್ಲಿ ಮಾಡಲು ಹೊರಟಿರುವುದು ಮೂರ್ಖರ ನಿರ್ಧಾರ. ನೆಲೆ ಇಲ್ಲದೆ ಕೃಷಿ ಅಭಿವೃದ್ಧಿ ಹೇಗೆ ಸಾಧ್ಯ ,ರಾಜಕಾರಣಿಗಳು ಕಾರ್ಪೊರೇಟ್ ಕಂಪೆನಿಗಳಿಗಾಗಿ ಭೂಮಿ ಒದಗಿಸಿ ತೆರಿಗೆ ಹೆಸರಿನಲ್ಲಿ ಲೂಟಿ ಮಾಡುತ್ತಿದ್ದಾರೆ ಎಂದು ಅಗ್ರಹಿಸಿದರು.

ಇಂದಿಗೂ ರೈತರು ಆತ್ಮಹತ್ಯೆ ನಿಂತಿಲ್ಲ ಕಾರಣ ಹಲವಾರು ಭೂಮಿ ರಕ್ಷಣೆಗಾಗಿ ಸರ್ಕಾರ ಮೊರೆ ಹೋದಲ್ಲಿ ರಕ್ಷಿಸಬೇಕಾದ ಸರ್ಕಾರವೇ ಭೂಸ್ವಾಧೀನ ಮಾಡಲು ಹೊರಟರೆ ಹೊಣೆ ಯಾರು ಹಾಗೂ ರೈತರ ಮೇಲೆ ಗುಂಡಿನ ದಾಳಿ ಎಂತಹ ಪರಿಸ್ಥಿತಿ ಲೂಟಿಕೋರರು ದರೋಡೆಕೋರರು, ಕೊಲೆಗಾರರು ಆರಾಮವಾಗಿ ಓಡಾಡುತ್ತಿದ್ದಾರೆ ಆದರೆ ರೈತರು ತಮ್ಮ ಭೂಮಿ ಹೋರಾಟ ಮಾಡಿ ಮಾಡುವಂತಿಲ್ಲ ಬಂದಿಸಲಾಗುತ್ತದೆ ಇದು ಯಾವ ಎಂದು ಪ್ರಶ್ನಿಸಿದ್ದಾರೆ.

ಇದೇ ಸಂದರ್ಭದಲ್ಲಿ ಜನತಾ ಪಕ್ಷದ ರಾಜ್ಯ ಕಾರ್ಯದರ್ಶಿ ಕೋ.ಮದನ್, ರಾಷ್ಟ್ರೀಯ ಮಹಿಳಾ ಘಟಕದ ಅಧ್ಯಕ್ಷರಾದ ಡಾ.ವಾಣಿ .ಎನ್. ಶೆಟ್ಟಿ, ಬೆಂಗಳೂರು ನಗರ ಘಟಕದ ಅಧ್ಯಕ್ಷರಾದ ರಾಜು .ಎ, ಕೋಲಾರ ಜಿಲ್ಲಾಧ್ಯಕ್ಷರಾದ ಸುಬ್ರಮಣಿ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

13 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

20 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

23 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

24 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago