ದೇವನಹಳ್ಳಿ: ಪಟ್ಟಣದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಜನತಾಪಕ್ಷದ ವತಿಯಿಂದ ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ಇದೇ ಜೂನ್ 25ರ ದೇವನಹಳ್ಳಿ ಚಲೋಗೆ ಬೆಂಬಲಿಸಿ ಪತ್ರಿಕಾಗೋಷ್ಟಿ ನಡೆಸಿದರು.
ಈ ವೇಳೆಯಲ್ಲಿ ಜನತಾ ಪಕ್ಷದ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ನಾಗೇಶ್. ಎನ್ ಮಾತನಾಡಿ ರಾಜ್ಯದಲ್ಲಿ ಮೌಲ್ಯಧಾರಿತ ಆಡಳಿತ ತರುವ ಉದ್ದೇಶದೊಂದಿಗೆ ಜನತಾ ಪಕ್ಷವು ಮತ್ತೆ ಸಕ್ರಿಯವಾಗಿ ಸಂಘಟನೆಯಲ್ಲಿ ತೊಡಗಿದ್ದೇವೆ.
ರಾಜ್ಯದಲ್ಲಿ ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ನಿರಂತರ ಹೋರಾಟವು ಇತಿಹಾಸ ಸೃಷ್ಟಿಸಿರುವ ಹೋರಾಟವಾಗಿದೆ. ಸ್ಥಳೀಯ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ,ಅವರ ಸಮಸ್ಯೆಗಳನ್ನು ಲೆಕ್ಕಿಸದೆ ಅಭಿವೃದ್ಧಿಯ ಹೆಸರಲ್ಲಿ ಕೃಷಿ ಭೂಮಿಯನ್ನು ನಾಶ ಮಾಡುತ್ತಿರುವುದು ಸಮಂಜಸವಲ್ಲ ಅನ್ಯ ಜಿಲ್ಲೆಗಳಲ್ಲಿ ಕೃಷಿಗೆ ಯೋಗ್ಯವಲ್ಲದ ಬರಡು ಭೂಮಿಯನ್ನು ಬಳಸಿಕೊಳ್ಳಿ ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ಮಾಡಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
“ರೈತರ ಹೋರಾಟ ದೇಶದ ಉಳಿವಿಗಾಗಿ “ರೈತರ ವಿಷಯದಲ್ಲಿ ಎಲ್ಲಾ ಪಕ್ಷಗಳು ಒಂದೇ ಹಾಗಾಗಿ ರಾಜಕೀಯ ವ್ಯಕ್ತಿಗಳನ್ನ ನಂಬಿ ಮೋಸ ಹೋಗಿದ್ದು ಸಾಕು ರೈತರು ತಿರುಗಿ ಬಿದ್ದರೆ ಅವರ ಸ್ಥಿತಿ ಹೇಗಿರುತ್ತದೆ ಎಂದು ಭವಿಷ್ಯದಲ್ಲಿ ತಿಳಿಸಲಾಗುತ್ತದೆ ಹಾಗೂ ಪ್ರಜಾಪ್ರಭುತ್ವದಲ್ಲಿ ಕಾರ್ಪೊರೇಟ್ ವ್ಯಕ್ತಿಗಳಿಗಾಗಿ ಆಡಳಿತ ನಡೆಸಲಾಗುತ್ತಿದೆ ಕೈಗಾರಿಕೆಗಳನ್ನು ಫಲವತ್ತಾದ ಭೂಮಿಯಲ್ಲಿ ಮಾಡಲು ಹೊರಟಿರುವುದು ಮೂರ್ಖರ ನಿರ್ಧಾರ. ನೆಲೆ ಇಲ್ಲದೆ ಕೃಷಿ ಅಭಿವೃದ್ಧಿ ಹೇಗೆ ಸಾಧ್ಯ ,ರಾಜಕಾರಣಿಗಳು ಕಾರ್ಪೊರೇಟ್ ಕಂಪೆನಿಗಳಿಗಾಗಿ ಭೂಮಿ ಒದಗಿಸಿ ತೆರಿಗೆ ಹೆಸರಿನಲ್ಲಿ ಲೂಟಿ ಮಾಡುತ್ತಿದ್ದಾರೆ ಎಂದು ಅಗ್ರಹಿಸಿದರು.
ಇಂದಿಗೂ ರೈತರು ಆತ್ಮಹತ್ಯೆ ನಿಂತಿಲ್ಲ ಕಾರಣ ಹಲವಾರು ಭೂಮಿ ರಕ್ಷಣೆಗಾಗಿ ಸರ್ಕಾರ ಮೊರೆ ಹೋದಲ್ಲಿ ರಕ್ಷಿಸಬೇಕಾದ ಸರ್ಕಾರವೇ ಭೂಸ್ವಾಧೀನ ಮಾಡಲು ಹೊರಟರೆ ಹೊಣೆ ಯಾರು ಹಾಗೂ ರೈತರ ಮೇಲೆ ಗುಂಡಿನ ದಾಳಿ ಎಂತಹ ಪರಿಸ್ಥಿತಿ ಲೂಟಿಕೋರರು ದರೋಡೆಕೋರರು, ಕೊಲೆಗಾರರು ಆರಾಮವಾಗಿ ಓಡಾಡುತ್ತಿದ್ದಾರೆ ಆದರೆ ರೈತರು ತಮ್ಮ ಭೂಮಿ ಹೋರಾಟ ಮಾಡಿ ಮಾಡುವಂತಿಲ್ಲ ಬಂದಿಸಲಾಗುತ್ತದೆ ಇದು ಯಾವ ಎಂದು ಪ್ರಶ್ನಿಸಿದ್ದಾರೆ.
ಇದೇ ಸಂದರ್ಭದಲ್ಲಿ ಜನತಾ ಪಕ್ಷದ ರಾಜ್ಯ ಕಾರ್ಯದರ್ಶಿ ಕೋ.ಮದನ್, ರಾಷ್ಟ್ರೀಯ ಮಹಿಳಾ ಘಟಕದ ಅಧ್ಯಕ್ಷರಾದ ಡಾ.ವಾಣಿ .ಎನ್. ಶೆಟ್ಟಿ, ಬೆಂಗಳೂರು ನಗರ ಘಟಕದ ಅಧ್ಯಕ್ಷರಾದ ರಾಜು .ಎ, ಕೋಲಾರ ಜಿಲ್ಲಾಧ್ಯಕ್ಷರಾದ ಸುಬ್ರಮಣಿ ಮುಂತಾದವರು ಭಾಗವಹಿಸಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…