ದೇವನಹಳ್ಳಿ: ಪಟ್ಟಣದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಜನತಾಪಕ್ಷದ ವತಿಯಿಂದ ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ಇದೇ ಜೂನ್ 25ರ ದೇವನಹಳ್ಳಿ ಚಲೋಗೆ ಬೆಂಬಲಿಸಿ ಪತ್ರಿಕಾಗೋಷ್ಟಿ ನಡೆಸಿದರು.
ಈ ವೇಳೆಯಲ್ಲಿ ಜನತಾ ಪಕ್ಷದ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ನಾಗೇಶ್. ಎನ್ ಮಾತನಾಡಿ ರಾಜ್ಯದಲ್ಲಿ ಮೌಲ್ಯಧಾರಿತ ಆಡಳಿತ ತರುವ ಉದ್ದೇಶದೊಂದಿಗೆ ಜನತಾ ಪಕ್ಷವು ಮತ್ತೆ ಸಕ್ರಿಯವಾಗಿ ಸಂಘಟನೆಯಲ್ಲಿ ತೊಡಗಿದ್ದೇವೆ.
ರಾಜ್ಯದಲ್ಲಿ ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ನಿರಂತರ ಹೋರಾಟವು ಇತಿಹಾಸ ಸೃಷ್ಟಿಸಿರುವ ಹೋರಾಟವಾಗಿದೆ. ಸ್ಥಳೀಯ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ,ಅವರ ಸಮಸ್ಯೆಗಳನ್ನು ಲೆಕ್ಕಿಸದೆ ಅಭಿವೃದ್ಧಿಯ ಹೆಸರಲ್ಲಿ ಕೃಷಿ ಭೂಮಿಯನ್ನು ನಾಶ ಮಾಡುತ್ತಿರುವುದು ಸಮಂಜಸವಲ್ಲ ಅನ್ಯ ಜಿಲ್ಲೆಗಳಲ್ಲಿ ಕೃಷಿಗೆ ಯೋಗ್ಯವಲ್ಲದ ಬರಡು ಭೂಮಿಯನ್ನು ಬಳಸಿಕೊಳ್ಳಿ ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ಮಾಡಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
“ರೈತರ ಹೋರಾಟ ದೇಶದ ಉಳಿವಿಗಾಗಿ “ರೈತರ ವಿಷಯದಲ್ಲಿ ಎಲ್ಲಾ ಪಕ್ಷಗಳು ಒಂದೇ ಹಾಗಾಗಿ ರಾಜಕೀಯ ವ್ಯಕ್ತಿಗಳನ್ನ ನಂಬಿ ಮೋಸ ಹೋಗಿದ್ದು ಸಾಕು ರೈತರು ತಿರುಗಿ ಬಿದ್ದರೆ ಅವರ ಸ್ಥಿತಿ ಹೇಗಿರುತ್ತದೆ ಎಂದು ಭವಿಷ್ಯದಲ್ಲಿ ತಿಳಿಸಲಾಗುತ್ತದೆ ಹಾಗೂ ಪ್ರಜಾಪ್ರಭುತ್ವದಲ್ಲಿ ಕಾರ್ಪೊರೇಟ್ ವ್ಯಕ್ತಿಗಳಿಗಾಗಿ ಆಡಳಿತ ನಡೆಸಲಾಗುತ್ತಿದೆ ಕೈಗಾರಿಕೆಗಳನ್ನು ಫಲವತ್ತಾದ ಭೂಮಿಯಲ್ಲಿ ಮಾಡಲು ಹೊರಟಿರುವುದು ಮೂರ್ಖರ ನಿರ್ಧಾರ. ನೆಲೆ ಇಲ್ಲದೆ ಕೃಷಿ ಅಭಿವೃದ್ಧಿ ಹೇಗೆ ಸಾಧ್ಯ ,ರಾಜಕಾರಣಿಗಳು ಕಾರ್ಪೊರೇಟ್ ಕಂಪೆನಿಗಳಿಗಾಗಿ ಭೂಮಿ ಒದಗಿಸಿ ತೆರಿಗೆ ಹೆಸರಿನಲ್ಲಿ ಲೂಟಿ ಮಾಡುತ್ತಿದ್ದಾರೆ ಎಂದು ಅಗ್ರಹಿಸಿದರು.
ಇಂದಿಗೂ ರೈತರು ಆತ್ಮಹತ್ಯೆ ನಿಂತಿಲ್ಲ ಕಾರಣ ಹಲವಾರು ಭೂಮಿ ರಕ್ಷಣೆಗಾಗಿ ಸರ್ಕಾರ ಮೊರೆ ಹೋದಲ್ಲಿ ರಕ್ಷಿಸಬೇಕಾದ ಸರ್ಕಾರವೇ ಭೂಸ್ವಾಧೀನ ಮಾಡಲು ಹೊರಟರೆ ಹೊಣೆ ಯಾರು ಹಾಗೂ ರೈತರ ಮೇಲೆ ಗುಂಡಿನ ದಾಳಿ ಎಂತಹ ಪರಿಸ್ಥಿತಿ ಲೂಟಿಕೋರರು ದರೋಡೆಕೋರರು, ಕೊಲೆಗಾರರು ಆರಾಮವಾಗಿ ಓಡಾಡುತ್ತಿದ್ದಾರೆ ಆದರೆ ರೈತರು ತಮ್ಮ ಭೂಮಿ ಹೋರಾಟ ಮಾಡಿ ಮಾಡುವಂತಿಲ್ಲ ಬಂದಿಸಲಾಗುತ್ತದೆ ಇದು ಯಾವ ಎಂದು ಪ್ರಶ್ನಿಸಿದ್ದಾರೆ.
ಇದೇ ಸಂದರ್ಭದಲ್ಲಿ ಜನತಾ ಪಕ್ಷದ ರಾಜ್ಯ ಕಾರ್ಯದರ್ಶಿ ಕೋ.ಮದನ್, ರಾಷ್ಟ್ರೀಯ ಮಹಿಳಾ ಘಟಕದ ಅಧ್ಯಕ್ಷರಾದ ಡಾ.ವಾಣಿ .ಎನ್. ಶೆಟ್ಟಿ, ಬೆಂಗಳೂರು ನಗರ ಘಟಕದ ಅಧ್ಯಕ್ಷರಾದ ರಾಜು .ಎ, ಕೋಲಾರ ಜಿಲ್ಲಾಧ್ಯಕ್ಷರಾದ ಸುಬ್ರಮಣಿ ಮುಂತಾದವರು ಭಾಗವಹಿಸಿದ್ದರು.
ಸಮಾಜದಲ್ಲಿ ದಲಿತ ಸಮುದಾಯಗಳು ಎದುರಿಸುತ್ತಿದ್ದ ಸಮಸ್ಯೆಗಳ ವಿರುದ್ಧ ಹೋರಾಟ ನಡೆಸಿದ ಪ್ರೊ. ಬಿ ಕೃಷ್ಣಪ್ಪ ಅವರು ಎಲ್ಲರಿಗೂ ಮಾದರಿ. ಅವರ…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 40 ವರ್ಷಗಳಿಂದ ರಾಜಕಾರಣ ಮಾಡುತ್ತಾ, ಮನೆ ಮಾತಾಗಿರುವ ಹುಸ್ಕೂರು ಟಿ. ಆನಂದ್ ಜೆಡಿಎಸ್ ಪಕ್ಷದಲ್ಲಿ ರಾಜ್ಯ ಪ್ರಧಾನ…
ವೇಶ್ಯಾವಾಟಿಕೆ...... ಒಂದು ವೃತ್ತಿಯೇ, ಜೀವನ ನಿರ್ವಹಣೆಯ ಒಂದು ಮಾರ್ಗವೇ, ಒಂದು ಉದ್ಯೋಗವೇ, ಸಹಜ ಪ್ರಾಕೃತಿಕ ವಿಧಾನವೇ, ಹೆಣ್ಣಿನ ಶೋಷಣೆಯೇ, ಗಂಡಿನ…
ದೊಡ್ಡಬಳ್ಳಾಪುರ: ಮಳೆಗಾಲ ಆರಂಭವಾಗುತ್ತಿದ್ದಂತೆ ದೊಡ್ಡಬಳ್ಳಾಪುರ ನಗರ ಹಾಗೂ ಗ್ರಾಮೀಣ ಭಾಗಗಳ ರಸ್ತೆಗುಂಡಿಗಳ ಸಮಸ್ಯೆ ಮತ್ತೆ ತಲೆದೋರಿದ್ದು, ವಾಹನ ಸವಾರರು ಜೀವ…
ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ರಾತ್ರಿ ದೊಡ್ಡಬಳ್ಳಾಪುರ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಕೆ ಮಾಡಲು ಕೃಷಿ ಇಲಾಖೆ…