ದೇವನಹಳ್ಳಿ: ಪಟ್ಟಣದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಜನತಾಪಕ್ಷದ ವತಿಯಿಂದ ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ಇದೇ ಜೂನ್ 25ರ ದೇವನಹಳ್ಳಿ ಚಲೋಗೆ ಬೆಂಬಲಿಸಿ ಪತ್ರಿಕಾಗೋಷ್ಟಿ ನಡೆಸಿದರು.
ಈ ವೇಳೆಯಲ್ಲಿ ಜನತಾ ಪಕ್ಷದ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ನಾಗೇಶ್. ಎನ್ ಮಾತನಾಡಿ ರಾಜ್ಯದಲ್ಲಿ ಮೌಲ್ಯಧಾರಿತ ಆಡಳಿತ ತರುವ ಉದ್ದೇಶದೊಂದಿಗೆ ಜನತಾ ಪಕ್ಷವು ಮತ್ತೆ ಸಕ್ರಿಯವಾಗಿ ಸಂಘಟನೆಯಲ್ಲಿ ತೊಡಗಿದ್ದೇವೆ.
ರಾಜ್ಯದಲ್ಲಿ ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ನಿರಂತರ ಹೋರಾಟವು ಇತಿಹಾಸ ಸೃಷ್ಟಿಸಿರುವ ಹೋರಾಟವಾಗಿದೆ. ಸ್ಥಳೀಯ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ,ಅವರ ಸಮಸ್ಯೆಗಳನ್ನು ಲೆಕ್ಕಿಸದೆ ಅಭಿವೃದ್ಧಿಯ ಹೆಸರಲ್ಲಿ ಕೃಷಿ ಭೂಮಿಯನ್ನು ನಾಶ ಮಾಡುತ್ತಿರುವುದು ಸಮಂಜಸವಲ್ಲ ಅನ್ಯ ಜಿಲ್ಲೆಗಳಲ್ಲಿ ಕೃಷಿಗೆ ಯೋಗ್ಯವಲ್ಲದ ಬರಡು ಭೂಮಿಯನ್ನು ಬಳಸಿಕೊಳ್ಳಿ ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ಮಾಡಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
“ರೈತರ ಹೋರಾಟ ದೇಶದ ಉಳಿವಿಗಾಗಿ “ರೈತರ ವಿಷಯದಲ್ಲಿ ಎಲ್ಲಾ ಪಕ್ಷಗಳು ಒಂದೇ ಹಾಗಾಗಿ ರಾಜಕೀಯ ವ್ಯಕ್ತಿಗಳನ್ನ ನಂಬಿ ಮೋಸ ಹೋಗಿದ್ದು ಸಾಕು ರೈತರು ತಿರುಗಿ ಬಿದ್ದರೆ ಅವರ ಸ್ಥಿತಿ ಹೇಗಿರುತ್ತದೆ ಎಂದು ಭವಿಷ್ಯದಲ್ಲಿ ತಿಳಿಸಲಾಗುತ್ತದೆ ಹಾಗೂ ಪ್ರಜಾಪ್ರಭುತ್ವದಲ್ಲಿ ಕಾರ್ಪೊರೇಟ್ ವ್ಯಕ್ತಿಗಳಿಗಾಗಿ ಆಡಳಿತ ನಡೆಸಲಾಗುತ್ತಿದೆ ಕೈಗಾರಿಕೆಗಳನ್ನು ಫಲವತ್ತಾದ ಭೂಮಿಯಲ್ಲಿ ಮಾಡಲು ಹೊರಟಿರುವುದು ಮೂರ್ಖರ ನಿರ್ಧಾರ. ನೆಲೆ ಇಲ್ಲದೆ ಕೃಷಿ ಅಭಿವೃದ್ಧಿ ಹೇಗೆ ಸಾಧ್ಯ ,ರಾಜಕಾರಣಿಗಳು ಕಾರ್ಪೊರೇಟ್ ಕಂಪೆನಿಗಳಿಗಾಗಿ ಭೂಮಿ ಒದಗಿಸಿ ತೆರಿಗೆ ಹೆಸರಿನಲ್ಲಿ ಲೂಟಿ ಮಾಡುತ್ತಿದ್ದಾರೆ ಎಂದು ಅಗ್ರಹಿಸಿದರು.
ಇಂದಿಗೂ ರೈತರು ಆತ್ಮಹತ್ಯೆ ನಿಂತಿಲ್ಲ ಕಾರಣ ಹಲವಾರು ಭೂಮಿ ರಕ್ಷಣೆಗಾಗಿ ಸರ್ಕಾರ ಮೊರೆ ಹೋದಲ್ಲಿ ರಕ್ಷಿಸಬೇಕಾದ ಸರ್ಕಾರವೇ ಭೂಸ್ವಾಧೀನ ಮಾಡಲು ಹೊರಟರೆ ಹೊಣೆ ಯಾರು ಹಾಗೂ ರೈತರ ಮೇಲೆ ಗುಂಡಿನ ದಾಳಿ ಎಂತಹ ಪರಿಸ್ಥಿತಿ ಲೂಟಿಕೋರರು ದರೋಡೆಕೋರರು, ಕೊಲೆಗಾರರು ಆರಾಮವಾಗಿ ಓಡಾಡುತ್ತಿದ್ದಾರೆ ಆದರೆ ರೈತರು ತಮ್ಮ ಭೂಮಿ ಹೋರಾಟ ಮಾಡಿ ಮಾಡುವಂತಿಲ್ಲ ಬಂದಿಸಲಾಗುತ್ತದೆ ಇದು ಯಾವ ಎಂದು ಪ್ರಶ್ನಿಸಿದ್ದಾರೆ.
ಇದೇ ಸಂದರ್ಭದಲ್ಲಿ ಜನತಾ ಪಕ್ಷದ ರಾಜ್ಯ ಕಾರ್ಯದರ್ಶಿ ಕೋ.ಮದನ್, ರಾಷ್ಟ್ರೀಯ ಮಹಿಳಾ ಘಟಕದ ಅಧ್ಯಕ್ಷರಾದ ಡಾ.ವಾಣಿ .ಎನ್. ಶೆಟ್ಟಿ, ಬೆಂಗಳೂರು ನಗರ ಘಟಕದ ಅಧ್ಯಕ್ಷರಾದ ರಾಜು .ಎ, ಕೋಲಾರ ಜಿಲ್ಲಾಧ್ಯಕ್ಷರಾದ ಸುಬ್ರಮಣಿ ಮುಂತಾದವರು ಭಾಗವಹಿಸಿದ್ದರು.
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…