ಜೂನ್ 25ರ ದೇವನಹಳ್ಳಿ ಚಲೋಗೆ ಬೆಂಬಲಿಸಿ ಜನತಾಪಕ್ಷದ ವತಿಯಿಂದ ಸಂಪೂರ್ಣ ಬೆಂಬಲ

ದೇವನಹಳ್ಳಿ: ಪಟ್ಟಣದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಜನತಾಪಕ್ಷದ ವತಿಯಿಂದ ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ಇದೇ ಜೂನ್ 25ರ ದೇವನಹಳ್ಳಿ ಚಲೋಗೆ ಬೆಂಬಲಿಸಿ ಪತ್ರಿಕಾಗೋಷ್ಟಿ ನಡೆಸಿದರು.

ಈ ವೇಳೆಯಲ್ಲಿ ಜನತಾ ಪಕ್ಷದ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ನಾಗೇಶ್. ಎನ್ ಮಾತನಾಡಿ ರಾಜ್ಯದಲ್ಲಿ ಮೌಲ್ಯಧಾರಿತ ಆಡಳಿತ ತರುವ ಉದ್ದೇಶದೊಂದಿಗೆ ಜನತಾ ಪಕ್ಷವು ಮತ್ತೆ ಸಕ್ರಿಯವಾಗಿ ಸಂಘಟನೆಯಲ್ಲಿ ತೊಡಗಿದ್ದೇವೆ.

ರಾಜ್ಯದಲ್ಲಿ ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ನಿರಂತರ ಹೋರಾಟವು ಇತಿಹಾಸ ಸೃಷ್ಟಿಸಿರುವ ಹೋರಾಟವಾಗಿದೆ. ಸ್ಥಳೀಯ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ,ಅವರ ಸಮಸ್ಯೆಗಳನ್ನು ಲೆಕ್ಕಿಸದೆ ಅಭಿವೃದ್ಧಿಯ ಹೆಸರಲ್ಲಿ ಕೃಷಿ ಭೂಮಿಯನ್ನು ನಾಶ ಮಾಡುತ್ತಿರುವುದು ಸಮಂಜಸವಲ್ಲ ಅನ್ಯ ಜಿಲ್ಲೆಗಳಲ್ಲಿ ಕೃಷಿಗೆ ಯೋಗ್ಯವಲ್ಲದ ಬರಡು ಭೂಮಿಯನ್ನು ಬಳಸಿಕೊಳ್ಳಿ ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ಮಾಡಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

“ರೈತರ ಹೋರಾಟ ದೇಶದ ಉಳಿವಿಗಾಗಿ “ರೈತರ ವಿಷಯದಲ್ಲಿ ಎಲ್ಲಾ ಪಕ್ಷಗಳು ಒಂದೇ ಹಾಗಾಗಿ ರಾಜಕೀಯ ವ್ಯಕ್ತಿಗಳನ್ನ ನಂಬಿ ಮೋಸ ಹೋಗಿದ್ದು ಸಾಕು ರೈತರು ತಿರುಗಿ ಬಿದ್ದರೆ ಅವರ ಸ್ಥಿತಿ ಹೇಗಿರುತ್ತದೆ ಎಂದು ಭವಿಷ್ಯದಲ್ಲಿ ತಿಳಿಸಲಾಗುತ್ತದೆ ಹಾಗೂ ಪ್ರಜಾಪ್ರಭುತ್ವದಲ್ಲಿ ಕಾರ್ಪೊರೇಟ್ ವ್ಯಕ್ತಿಗಳಿಗಾಗಿ ಆಡಳಿತ ನಡೆಸಲಾಗುತ್ತಿದೆ ಕೈಗಾರಿಕೆಗಳನ್ನು ಫಲವತ್ತಾದ ಭೂಮಿಯಲ್ಲಿ ಮಾಡಲು ಹೊರಟಿರುವುದು ಮೂರ್ಖರ ನಿರ್ಧಾರ. ನೆಲೆ ಇಲ್ಲದೆ ಕೃಷಿ ಅಭಿವೃದ್ಧಿ ಹೇಗೆ ಸಾಧ್ಯ ,ರಾಜಕಾರಣಿಗಳು ಕಾರ್ಪೊರೇಟ್ ಕಂಪೆನಿಗಳಿಗಾಗಿ ಭೂಮಿ ಒದಗಿಸಿ ತೆರಿಗೆ ಹೆಸರಿನಲ್ಲಿ ಲೂಟಿ ಮಾಡುತ್ತಿದ್ದಾರೆ ಎಂದು ಅಗ್ರಹಿಸಿದರು.

ಇಂದಿಗೂ ರೈತರು ಆತ್ಮಹತ್ಯೆ ನಿಂತಿಲ್ಲ ಕಾರಣ ಹಲವಾರು ಭೂಮಿ ರಕ್ಷಣೆಗಾಗಿ ಸರ್ಕಾರ ಮೊರೆ ಹೋದಲ್ಲಿ ರಕ್ಷಿಸಬೇಕಾದ ಸರ್ಕಾರವೇ ಭೂಸ್ವಾಧೀನ ಮಾಡಲು ಹೊರಟರೆ ಹೊಣೆ ಯಾರು ಹಾಗೂ ರೈತರ ಮೇಲೆ ಗುಂಡಿನ ದಾಳಿ ಎಂತಹ ಪರಿಸ್ಥಿತಿ ಲೂಟಿಕೋರರು ದರೋಡೆಕೋರರು, ಕೊಲೆಗಾರರು ಆರಾಮವಾಗಿ ಓಡಾಡುತ್ತಿದ್ದಾರೆ ಆದರೆ ರೈತರು ತಮ್ಮ ಭೂಮಿ ಹೋರಾಟ ಮಾಡಿ ಮಾಡುವಂತಿಲ್ಲ ಬಂದಿಸಲಾಗುತ್ತದೆ ಇದು ಯಾವ ಎಂದು ಪ್ರಶ್ನಿಸಿದ್ದಾರೆ.

ಇದೇ ಸಂದರ್ಭದಲ್ಲಿ ಜನತಾ ಪಕ್ಷದ ರಾಜ್ಯ ಕಾರ್ಯದರ್ಶಿ ಕೋ.ಮದನ್, ರಾಷ್ಟ್ರೀಯ ಮಹಿಳಾ ಘಟಕದ ಅಧ್ಯಕ್ಷರಾದ ಡಾ.ವಾಣಿ .ಎನ್. ಶೆಟ್ಟಿ, ಬೆಂಗಳೂರು ನಗರ ಘಟಕದ ಅಧ್ಯಕ್ಷರಾದ ರಾಜು .ಎ, ಕೋಲಾರ ಜಿಲ್ಲಾಧ್ಯಕ್ಷರಾದ ಸುಬ್ರಮಣಿ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಮೇ 20 ಇ-ಫಾರ್ಮಸಿ ವಿರೋಧಿ ಬಂದ್‌ಗೆ ಔಷಧ ವ್ಯಾಪಾರಿಗಳ ಬೆಂಬಲ

ದೊಡ್ಡಬಳ್ಳಾಪುರ: ದೇಶದಲ್ಲಿ ಇ-ಫಾರ್ಮಸಿ ಹಾಗೂ ಆನ್ಲೈನ್ ಮೂಲಕ ಔಷಧ ಮಾರಾಟವನ್ನು ವಿರೋಧಿಸಿ ಮೇ 20 ರಂದು ದೇಶವ್ಯಾಪಿ ಕರೆ ನೀಡಿರುವ…

5 hours ago

ಹಾಡೋನಹಳ್ಳಿ ವಿಎಸ್ ಎಸ್ ಎನ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ…

7 hours ago

ವಿ.ಡಿ ಸತೀಶನ್ ಕೇರಳದ ನೂತನ ಮುಖ್ಯಮಂತ್ರಿ

ವಿಡಿ ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ…

11 hours ago

ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ ಪರೀಕ್ಷೆಯ ಅಕ್ರಮ ಖಂಡಿಸಿ “ಕೈ” ಪ್ರತಿಭಟನೆ

ದೊಡ್ಡಬಳ್ಳಾಪುರ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ (NEET) ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಬೆಂಗಳೂರು…

13 hours ago

ಬದುಕಿದ್ದ ಗಂಡನಿಗೆ ಸೋಷಿಯಲ್ ಮೀಡಿಯಾದಲ್ಲಿ “RIP” ಹಾಕಿದ ಹೆಂಡತಿ.?: ಬಿಟ್ಟೋದ ಹೆಂಡತಿಯನ್ನು ಕರೆತರಲು ಹೋದ ಗಂಡನ ಮೇಲೆ ಮಾರಣಾಂತಿಕ ಹಲ್ಲೆ…?

ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…

1 day ago

ಅನುಮಾನಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…

1 day ago