ಜೂನ್ 4 ರಂದು‌ ಮತ ಎಣಿಕೆ: ಜೂನ್ 3ರಿಂದ 5ರವರೆಗೆ ನಿಷೇದಾಜ್ಞೆ ಜಾರಿ- ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಆದೇಶ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಮತ ಏಣಿಕೆ ಕಾರ್ಯ ಜೂನ್ 4 ರಂದು ನಡೆಯಲಿರುವ  ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನಲ್ಲಿರುವ ನಾಗಾರ್ಜುನ ಕಾಲೇಜಿನಲ್ಲಿ ನಡೆಯಲಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರನ್ವಯ ಜೂನ್. 03 ರ ಸಂಜೆ 6:00 ಗಂಟೆಯಿಂದ ಜೂನ್ 05 ರ ಮಧ್ಯರಾತ್ರಿ 12:00 ಗಂಟೆಯವರೆಗೆ ನಿಷೇಧಾಜ್ಞೆ ವಿಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಪ್ರಸಕ್ತ ವಿದ್ಯಾಮಾನಗಳನ್ನು ಗಣನೆಗೆ ತೆಗೆದುಕೊಂಡು ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯೋಚಿತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆಯ ಮತ ಎಣಿಕೆಯನ್ನು ನಡೆಸುವ ನಿಟ್ಟಿನಲ್ಲಿ ನಿಷೇಧಾಜ್ಞೆಯನ್ನು ವಿಧಿಸುವುದು ಅವಶ್ಯವಾಗಿದೆ.

ಷರತ್ತುಗಳು:-

1. ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಮೇಲೆ ತಿಳಿಸಿದ ಅವಧಿಯಲ್ಲಿ ಸಾರ್ವಜನಿಕರು ಸಕಾರಣವಿಲ್ಲದೇ ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ರಸ್ತೆ, ಬೀದಿ, ಓಣಿ, ಕೇರಿಗಳಲ್ಲಿ ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ ಮುಂತಾದವುಗಳಲ್ಲಿ ಗುಂಪು ಸೇರುವುದನ್ನು ನಿಷೇಧಿಸಿದೆ.

2. ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಚಿ, ಚೂರಿ, ದೊಣ್ಣೆ, ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಮಾರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಯ್ಯುವುದನ್ನು ಮತ್ತು ಸಾಗಾಟ ಮಾಡುವುದನ್ನು ನಿಷೇಧಿಸಿದೆ.

3. ಗೆದ್ದ ಅಭ್ಯರ್ಥಿಗಳ ಮೆರವಣಿಗೆ ಹಾಗೂ ಪಟಾಕಿ/ಬಾಣ/ಬಿರುಸುಗಳನ್ನು ಹಚ್ಚುವುದು ಸಾರ್ವಜನಿಕ ಸಭೆ ಸಮಾರಂಭಗಳು, ಗೆಲುವಿನ ಸಂಭ್ರಮಗಳನ್ನು ನಡೆಸಬಾರದು.

4. ಸಾರ್ವಜನಿಕವಾಗಿ ಯಾವುದೇ ಕೂಗನ್ನು ಉಚ್ಚರಿಸುವುದು ಅಥವಾ ಪದ ಹಾಡುವುದು, ಚೇಷ್ಮೆ ಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಅಥವಾ ಪ್ರಸಾರ ಮಾಡುವುದು. ಪ್ರಕಟಣಾ ಪತ್ರಿಕೆಗಳ ಅಥವಾ ಇತರ ಯಾವುದೇ ವಸ್ತುಗಳ ಪ್ರದರ್ಶನ, ಬಿತ್ತಿ ಪತ್ರಗಳನ್ನು ಅಂಟಿಸುವುದರಿಂದ, ಸಭ್ಯತನ ಸದಾಚಾರ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಎಸಗುವಂತೆ ಪ್ರೇರೇಪಿಸುವ ಕ್ರಮವನ್ನು ನಿಷೇಧಿಸಿದೆ.

5. ಯಾವುದೇ ರೀತಿಯ ಬಂದ್, ಪ್ರತಿಭಟನೆ, ಮುಷ್ಕರ, ಪ್ರತಿಕೃತಿ ದಹನ, ಪ್ರದರ್ಶನ, ಪೂರಕ ಚಟುವಟಿಕೆಗಳು, ಯಾವುದೇ ಖಾಸಗಿ/ ಸಾರ್ವಜನಿಕ ಆಸ್ತಿ ಪಾಸ್ತಿಗಳನ್ನು ಹಾನಿಗೊಳಿಸುವ ಹಾಗೂ ವಿರೂಪಗೊಳಿಸುವ ಎಲ್ಲಾ ರೀತಿಯ ಚಟುವಟಿಕೆಗಳನ್ನು ನಿಷೇಧಿಸಿದೆ.

6. ಯಾವುದೇ ವ್ಯಕ್ತಿಯ ಜಾತಿ-ಧರ್ಮ, ಕೋಮು ಪಂಥಗಳಿಗೆ ಅಥವಾ ಸಾರ್ವಜನಿಕ ನೈತಿಕತೆಗೆ ಬಾಧಕ ಉಂಟುಮಾಡಬಹುದಾಂತಹ ಚಟುವಟಿಕೆಗಳನ್ನು ನಿಷೇಧಿಸಿದೆ.

7. ಈ ಅವಧಿಯಲ್ಲಿ ಯಾವುದೇ ಸಂತೆ, ಜಾತ್ರೆ ಮತ್ತು ಇತರೆ ಜನಸಮೂಹಗಳನ್ನು ನಿಷೇಧಿಸಿದೆ.

8. ಸರ್ಕಾರಿ ಸಂಸ್ಥೆಗಳು, ಸಂಘಟನೆಗಳು ಹಾಗೂ ಕಾರ್ಯನಿರತ ಅಧಿಕಾರಿ/ಸಿಬ್ಬಂದಿ ವಿರುದ್ಧ ನಿಂದಿಸುವಂತಹ/ ಅವಹೇಳನಾಕಾರಿಯಾದಂತಹ ಯಾವುದೇ ಘೋಷಣೆಗಳು, ಭಾಷಣಾ ಪ್ರಕಟಣೆಗಳು ಅವಾಚ್ಯ ಶಬ್ದಗಳ ಬಳಕೆ, ಆವೇಶಕಾರಿ/ ಪ್ರಚೋದನಾಕಾರಿ ಭಾಷಣಾ ಗಾಯನ ಇತ್ಯಾದಿ ಚಟುವಟಿಗಳನ್ನು ನಿಷೇಧಿಸಿದೆ.

9. ಚುನಾವಣಾ ಆಯೋಗದ ನಿರ್ದೇಶನದಂತೆ ಎಣಿಕೆ ಕೇಂದ್ರದ ವ್ಯಾಪ್ತಿಯಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿಷೇದಿಸಿರುವ ಪ್ರದೇಶದಲ್ಲಿ ಪ್ರವೇಶಿಸುವುದು ನಿಷೇಧಿಸಿದೆ.

10. ಈ ನಿಷೇದಾಜ್ಞೆಯು ಮದುವೆ, ಶುಭ ಸಮಾರಂಭಗಳು, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಶವ ಸಂಸ್ಕಾರಕ್ಕೆ ಹಾಗೂ ಚುನಾವಣಾ ಸಂಬಂಧ ಏರ್ಪಡಿಸಲಾಗಿರುವ ಮತ ಕೇಂದ್ರಕ್ಕೆ ಅನ್ವಯಿಸುವುದಿಲ್ಲ.

ಈ ಆದೇಶದ ಅನುಪಾಲನೆಗೆ ಪೊಲೀಸ್ ಅಧೀಕ್ಷಕರು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಉಪ ಪೊಲೀಸ್ ಆಯುಕ್ತರು, ಈಶಾನ್ಯ ವಲಯ, ಬೆಂಗಳೂರು ರವರು ಕಟ್ಟುನಿಟ್ಟಿನ ಕ್ರಮ ವಹಿಸುವುದು. ತಪ್ಪಿದ್ದಲ್ಲಿ ಅಂತಹ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ವಹಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

12 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

15 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

1 day ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

1 day ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

1 day ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago