ಜೂನ್ 9-10ಕ್ಕೆ ಬೆಂಗಳೂರಿನಲ್ಲಿ ಕುಂದಾಪ್ರ ಕನ್ನಡದ ʼಮಕ್ಕಳ ರಾಮಾಯಣʼ ನಾಟಕ ಪ್ರದರ್ಶನ

ಕಲೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಬೈಂದೂರಿನಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಸುರಭಿ ರಿ. ಬೈಂದೂರು ಸಂಸ್ಥೆಯ ಕುಂದಾಪ್ರ ಕನ್ನಡ ಭಾಷೆಯ ನಾಟಕ ʼಮಕ್ಕಳ ರಾಮಾಯಣʼ ಬೆಂಗಳೂರಿನಲ್ಲಿ ಪ್ರಥಮ ಭಾರಿಗೆ ಜೂನ್ 9 ಹಾಗೂ 10ರಂದು ಪ್ರದರ್ಶನಗೊಳ್ಳಲಿದೆ.

ಬಿ.ಆರ್. ವೆಂಕಟರಮಣ ಐತಾಳ್ ಅವರ ರಚಿಸಿರುವ ನಾಟಕವನ್ನು, ಗಣೇಶ್ ಮಂದರ್ತಿ ಕುಂದಾಪುರ ಕನ್ನಡಕ್ಕೆ ಅನುವಾದಿಸಿ ನಿರ್ದೇಶನ ಮಾಡಿದ್ದಾರೆ. ಸುರಭಿ ಬೈಂದೂರು ಸಂಸ್ಥೆಯ ಬಾಲ ಕಲಾವಿದರು ನಾಟಕದಲ್ಲಿ ಅಭಿನಯಿಸಿದ್ದಾರೆ. ಈಗಾಗಲೇ ಹಲವು ಪ್ರದರ್ಶನಗಳನ್ನು ಕಂಡಿರುವ ಕುಂದಾಪುರ ಕನ್ನಡದ ಈ ನಾಟಕ ರಂಗಾಸಕ್ತರ ಮೆಚ್ಚುಗೆಗೂ ಪಾತ್ರವಾಗಿದೆ.

ರಂಗಾಸ್ಥೆ ರಿ. ಬೆಂಗಳೂರು ನೇತೃತ್ವದಲ್ಲಿ ನಾಗರಬಾವಿಯ ಕಲಾಗ್ರಾಮದಲ್ಲಿ ಜೂನ್ 9 ಹಾಗೂ 10ರ ಸಂಜೆ 7:30ಕ್ಕೆ ನಾಟಕ ಪ್ರದರ್ಶನವಿರಲಿದೆ. ಟಿಕೆಟ್ ದರ ರೂ.200 ನಿಗದಿಪಡಿಲಾಗಿದ್ದು, ಬುಕ್ ಮೈ ಶೋ ಮೂಲಕ ಆನ್ಲೈನ್ನಲ್ಲಿ ಅಥವಾ ಸಂಘಟಕರನ್ನು ಸಂಪರ್ಕಿಸಿ ಟಿಕೆಟ್ ಬುಕ್ ಮಾಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 8310775855 ಸಂಪರ್ಕಿಸಬಹುದಾಗಿದೆ.

ಸುರಭಿ ಸಂಸ್ಥೆಯು ಸಂಗೀತ, ಭರತನಾಟ್ಯ, ಯಕ್ಷಗಾನ, ಚಂಡೆ, ಜಾದೂ, ನಾಟಕ, ಚಿತ್ರಕಲೆ ಮೊದಲಾದ ಕಲೆ ಹಾಗೂ ಸಾಂಸ್ಕೃತಿಕ ಪ್ರಕಾರಗಳನ್ನು ಕಳೆದ 24 ವರ್ಷಗಳಿಂದ ಬೈಂದೂರು ಪರಿಸರದ ವಿದ್ಯಾರ್ಥಿಗಳಿಗೆ ಕಲಿಸುತ್ತಿದೆ. ಪ್ರತಿವರ್ಷ ಸುರಭಿ ಜೈಸಿರಿ ಕಾರ್ಯಕ್ರಮದ ಮೂಲಕ ವಿಶಿಷ್ಟ ಸಾಧಕರಿಗೆ ಬಿಂದುಶ್ರೀ ಪ್ರಶಸ್ತಿ, ಸಾಧಕರಿಗೆ ಗೌರವಾರ್ಪಣೆ, ನಾಟಕೋತ್ಸವ, ಬೇಸಿಗೆ ಶಿಬಿರ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ. ರಂಗ ಸುರಭಿ ಹಿರಿಯ ಕಲಾವಿದರ ತಂಡವು ದೆಹಲಿ, ಮುಂಬೈ, ಮೈಸೂರು, ಹಂಪಿ, ಬೆಂಗಳೂರು ಸೇರಿದಂತೆ ಹಲವೆಡೆ ಪ್ರದರ್ಶನವನ್ನು ನೀಡಿದೆ.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

8 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

13 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

22 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago