ಜೂನ್ 9-10ಕ್ಕೆ ಬೆಂಗಳೂರಿನಲ್ಲಿ ಕುಂದಾಪ್ರ ಕನ್ನಡದ ʼಮಕ್ಕಳ ರಾಮಾಯಣʼ ನಾಟಕ ಪ್ರದರ್ಶನ

ಕಲೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಬೈಂದೂರಿನಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಸುರಭಿ ರಿ. ಬೈಂದೂರು ಸಂಸ್ಥೆಯ ಕುಂದಾಪ್ರ ಕನ್ನಡ ಭಾಷೆಯ ನಾಟಕ ʼಮಕ್ಕಳ ರಾಮಾಯಣʼ ಬೆಂಗಳೂರಿನಲ್ಲಿ ಪ್ರಥಮ ಭಾರಿಗೆ ಜೂನ್ 9 ಹಾಗೂ 10ರಂದು ಪ್ರದರ್ಶನಗೊಳ್ಳಲಿದೆ.

ಬಿ.ಆರ್. ವೆಂಕಟರಮಣ ಐತಾಳ್ ಅವರ ರಚಿಸಿರುವ ನಾಟಕವನ್ನು, ಗಣೇಶ್ ಮಂದರ್ತಿ ಕುಂದಾಪುರ ಕನ್ನಡಕ್ಕೆ ಅನುವಾದಿಸಿ ನಿರ್ದೇಶನ ಮಾಡಿದ್ದಾರೆ. ಸುರಭಿ ಬೈಂದೂರು ಸಂಸ್ಥೆಯ ಬಾಲ ಕಲಾವಿದರು ನಾಟಕದಲ್ಲಿ ಅಭಿನಯಿಸಿದ್ದಾರೆ. ಈಗಾಗಲೇ ಹಲವು ಪ್ರದರ್ಶನಗಳನ್ನು ಕಂಡಿರುವ ಕುಂದಾಪುರ ಕನ್ನಡದ ಈ ನಾಟಕ ರಂಗಾಸಕ್ತರ ಮೆಚ್ಚುಗೆಗೂ ಪಾತ್ರವಾಗಿದೆ.

ರಂಗಾಸ್ಥೆ ರಿ. ಬೆಂಗಳೂರು ನೇತೃತ್ವದಲ್ಲಿ ನಾಗರಬಾವಿಯ ಕಲಾಗ್ರಾಮದಲ್ಲಿ ಜೂನ್ 9 ಹಾಗೂ 10ರ ಸಂಜೆ 7:30ಕ್ಕೆ ನಾಟಕ ಪ್ರದರ್ಶನವಿರಲಿದೆ. ಟಿಕೆಟ್ ದರ ರೂ.200 ನಿಗದಿಪಡಿಲಾಗಿದ್ದು, ಬುಕ್ ಮೈ ಶೋ ಮೂಲಕ ಆನ್ಲೈನ್ನಲ್ಲಿ ಅಥವಾ ಸಂಘಟಕರನ್ನು ಸಂಪರ್ಕಿಸಿ ಟಿಕೆಟ್ ಬುಕ್ ಮಾಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 8310775855 ಸಂಪರ್ಕಿಸಬಹುದಾಗಿದೆ.

ಸುರಭಿ ಸಂಸ್ಥೆಯು ಸಂಗೀತ, ಭರತನಾಟ್ಯ, ಯಕ್ಷಗಾನ, ಚಂಡೆ, ಜಾದೂ, ನಾಟಕ, ಚಿತ್ರಕಲೆ ಮೊದಲಾದ ಕಲೆ ಹಾಗೂ ಸಾಂಸ್ಕೃತಿಕ ಪ್ರಕಾರಗಳನ್ನು ಕಳೆದ 24 ವರ್ಷಗಳಿಂದ ಬೈಂದೂರು ಪರಿಸರದ ವಿದ್ಯಾರ್ಥಿಗಳಿಗೆ ಕಲಿಸುತ್ತಿದೆ. ಪ್ರತಿವರ್ಷ ಸುರಭಿ ಜೈಸಿರಿ ಕಾರ್ಯಕ್ರಮದ ಮೂಲಕ ವಿಶಿಷ್ಟ ಸಾಧಕರಿಗೆ ಬಿಂದುಶ್ರೀ ಪ್ರಶಸ್ತಿ, ಸಾಧಕರಿಗೆ ಗೌರವಾರ್ಪಣೆ, ನಾಟಕೋತ್ಸವ, ಬೇಸಿಗೆ ಶಿಬಿರ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ. ರಂಗ ಸುರಭಿ ಹಿರಿಯ ಕಲಾವಿದರ ತಂಡವು ದೆಹಲಿ, ಮುಂಬೈ, ಮೈಸೂರು, ಹಂಪಿ, ಬೆಂಗಳೂರು ಸೇರಿದಂತೆ ಹಲವೆಡೆ ಪ್ರದರ್ಶನವನ್ನು ನೀಡಿದೆ.

Ramesh Babu

Journalist

Recent Posts

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

20 minutes ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

14 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

17 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago