ಜೂನ್ 9-10ಕ್ಕೆ ಬೆಂಗಳೂರಿನಲ್ಲಿ ಕುಂದಾಪ್ರ ಕನ್ನಡದ ʼಮಕ್ಕಳ ರಾಮಾಯಣʼ ನಾಟಕ ಪ್ರದರ್ಶನ

ಕಲೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಬೈಂದೂರಿನಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಸುರಭಿ ರಿ. ಬೈಂದೂರು ಸಂಸ್ಥೆಯ ಕುಂದಾಪ್ರ ಕನ್ನಡ ಭಾಷೆಯ ನಾಟಕ ʼಮಕ್ಕಳ ರಾಮಾಯಣʼ ಬೆಂಗಳೂರಿನಲ್ಲಿ ಪ್ರಥಮ ಭಾರಿಗೆ ಜೂನ್ 9 ಹಾಗೂ 10ರಂದು ಪ್ರದರ್ಶನಗೊಳ್ಳಲಿದೆ.

ಬಿ.ಆರ್. ವೆಂಕಟರಮಣ ಐತಾಳ್ ಅವರ ರಚಿಸಿರುವ ನಾಟಕವನ್ನು, ಗಣೇಶ್ ಮಂದರ್ತಿ ಕುಂದಾಪುರ ಕನ್ನಡಕ್ಕೆ ಅನುವಾದಿಸಿ ನಿರ್ದೇಶನ ಮಾಡಿದ್ದಾರೆ. ಸುರಭಿ ಬೈಂದೂರು ಸಂಸ್ಥೆಯ ಬಾಲ ಕಲಾವಿದರು ನಾಟಕದಲ್ಲಿ ಅಭಿನಯಿಸಿದ್ದಾರೆ. ಈಗಾಗಲೇ ಹಲವು ಪ್ರದರ್ಶನಗಳನ್ನು ಕಂಡಿರುವ ಕುಂದಾಪುರ ಕನ್ನಡದ ಈ ನಾಟಕ ರಂಗಾಸಕ್ತರ ಮೆಚ್ಚುಗೆಗೂ ಪಾತ್ರವಾಗಿದೆ.

ರಂಗಾಸ್ಥೆ ರಿ. ಬೆಂಗಳೂರು ನೇತೃತ್ವದಲ್ಲಿ ನಾಗರಬಾವಿಯ ಕಲಾಗ್ರಾಮದಲ್ಲಿ ಜೂನ್ 9 ಹಾಗೂ 10ರ ಸಂಜೆ 7:30ಕ್ಕೆ ನಾಟಕ ಪ್ರದರ್ಶನವಿರಲಿದೆ. ಟಿಕೆಟ್ ದರ ರೂ.200 ನಿಗದಿಪಡಿಲಾಗಿದ್ದು, ಬುಕ್ ಮೈ ಶೋ ಮೂಲಕ ಆನ್ಲೈನ್ನಲ್ಲಿ ಅಥವಾ ಸಂಘಟಕರನ್ನು ಸಂಪರ್ಕಿಸಿ ಟಿಕೆಟ್ ಬುಕ್ ಮಾಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 8310775855 ಸಂಪರ್ಕಿಸಬಹುದಾಗಿದೆ.

ಸುರಭಿ ಸಂಸ್ಥೆಯು ಸಂಗೀತ, ಭರತನಾಟ್ಯ, ಯಕ್ಷಗಾನ, ಚಂಡೆ, ಜಾದೂ, ನಾಟಕ, ಚಿತ್ರಕಲೆ ಮೊದಲಾದ ಕಲೆ ಹಾಗೂ ಸಾಂಸ್ಕೃತಿಕ ಪ್ರಕಾರಗಳನ್ನು ಕಳೆದ 24 ವರ್ಷಗಳಿಂದ ಬೈಂದೂರು ಪರಿಸರದ ವಿದ್ಯಾರ್ಥಿಗಳಿಗೆ ಕಲಿಸುತ್ತಿದೆ. ಪ್ರತಿವರ್ಷ ಸುರಭಿ ಜೈಸಿರಿ ಕಾರ್ಯಕ್ರಮದ ಮೂಲಕ ವಿಶಿಷ್ಟ ಸಾಧಕರಿಗೆ ಬಿಂದುಶ್ರೀ ಪ್ರಶಸ್ತಿ, ಸಾಧಕರಿಗೆ ಗೌರವಾರ್ಪಣೆ, ನಾಟಕೋತ್ಸವ, ಬೇಸಿಗೆ ಶಿಬಿರ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ. ರಂಗ ಸುರಭಿ ಹಿರಿಯ ಕಲಾವಿದರ ತಂಡವು ದೆಹಲಿ, ಮುಂಬೈ, ಮೈಸೂರು, ಹಂಪಿ, ಬೆಂಗಳೂರು ಸೇರಿದಂತೆ ಹಲವೆಡೆ ಪ್ರದರ್ಶನವನ್ನು ನೀಡಿದೆ.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

8 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

12 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago