ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ತಿಳಿಸಿದರು.
ಇಂದು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರ ಸೇರ್ಪಡೆ , ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಖಚಿತಪಡಿಸಿಕೊಳ್ಳಲು ಮುಕ್ತ, ನಿಷ್ಪಕ್ಷಪಾತ ಚುನಾವಣೆ ನಡೆಸಲು, ಚುನಾವಣಾ ಆಯೋಗ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕೈಗೊಂಡಿದೆ ಎಂದರು.
ವಿಶೇಷ ಸಮಗ್ರ ಪರಿಷ್ಕರಣೆಯು ಮತದಾರರ ಪಟ್ಟಿಯಲ್ಲಿ ಹೆಸರಿದ್ದು ಮೃತಪಟ್ಟವರ ಹೆಸರನ್ನು ಪಟ್ಟಿಯಿಂದ ತೆಗೆಯುವುದು. ವಿವಿಧ ಕಾರಣಗಳಿಂದ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರಗೊಂಡ ಮತದಾರರು, ವಲಸಿಗ ಮತದಾರರು ಹಾಗೂ ಎರಡಕ್ಕೂ ಹೆಚ್ಚು ಕಡೆ ಮತದಾರರ ಪಟ್ಟಿಯಲ್ಲಿ ಹೆಸರಿರುವ ಮತದಾರರು ಹಾಗೂ ಭಾರತೀಯ ನಾಗರೀಕರಲ್ಲದವರಿಗೆ ಮತದಾನದ ಹಕ್ಕು ಇಲ್ಲದ ಕಾರಣ ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆಯುವುದಾಗಿದೆ ಎಂದು ತಿಳಿಸಿದರು.
*ವೇಳಾಪಟ್ಟಿ*
2026ರ ಅಕ್ಟೋಬರ್ 1 ಅರ್ಹತಾ ದಿನಾಂಕವನ್ನಾಗಿ ಮಾನದಂಡವಾಗಿಟ್ಟುಕೊಂಡು ಸಮಗ್ರ ಪರಿಷ್ಕರಣೆ ನಡೆಸಲಾಗುತ್ತಿದೆ. ಇದರ ಭಾಗವಾಗಿ ಜೂನ್ 20 ರಿಂದ 29ರವರೆಗೆ ಸಿದ್ದತೆ, ತರಬೇತಿ, ನಮೂನೆ ಮುದ್ರಣ ಕಾರ್ಯ ನಡೆಯಲಿದೆ. ಜೂನ್ 30 ರಿಂದ ಜುಲೈ 29ರವರೆಗೆ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒ) ಮನೆ-ಮನೆಗೆ ಭೇಟಿ ನೀಡಲಿದ್ದಾರೆ.
*ಅ.7ರಂದು ಅಂತಿಮ ಪಟ್ಟಿ ಪ್ರಕಟ*
ಮತಗಟ್ಟೆಗಳ ಪುನರ್ವಿಂಗಡಣೆ ಪ್ರಕ್ರಿಯೆ ಜುಲೈ 29ರೊಳಗೆ ಪೂರ್ಣಗೊಳ್ಳಲಿದೆ. ಆ.5ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಆ.5ರಿಂದ ಸೆ.4ರ ವರೆಗೆ ಹಕ್ಕು ಹಾಗೂ ಆಕ್ಷೇಪಣೆಗಳ ಸಲ್ಲಿಕೆಗೆ ಅವಕಾಶ ವಿದೆ.ಆಗಸ್ಟ್ 5 ರಿಂದ ಅಕ್ಟೋಬರ್ 3 ರವರೆಗೆ ಆಕ್ಷೇಪಣೆಗಳನ್ನು ವಿಲೇವಾರಿ ಮಾಡಲಾಗುತ್ತದೆ. ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ 4 ವಿಧಾನಸಭಾ ಕ್ಷೇತ್ರಗಳಿದ್ದು,4 ಮತದಾರರ ನೋಂದಣಾಧಿಕಾರಿಗಳು ಕಾರ್ಯ ನಿರ್ವಹಿಸಲಿದ್ದಾರೆ. 4 ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 8 ಸಹಾಯಕ ಮತದಾರ ನೋಂದಣಾಧಿಕಾರಿಗಳು ಕಾರ್ಯ ನಿರ್ವಹಿಸಲಿದ್ದಾರೆ. ಎಲ್ಲಾ ಮತದಾರ ನೋಂದಣಾಧಿಕಾರಿಗಳಿಗೆ ಮತ್ತು ಸಹಾಯಕ ಮತದಾರ ನೋಂದಣಾಧಿಕಾರಿಗಳಿಗೆ ಈಗಾಗಲೇ ತರಬೇತಿಯನ್ನು ನೀಡಲಾಗಿರುತ್ತದೆ. ಜಿಲ್ಲೆಯಲ್ಲಿ 1141 ಮತಗಟ್ಟೆಗಳಿದ್ದು, ಎಲ್ಲಾ ಮತಗಟ್ಟೆಗಳಿಗೆ 1141 ಬಿಎಲ್ಓಗಳನ್ನು ಮತ್ತು ಪ್ರತಿ 10 ರಿಂದ 12 ಮತಗಟ್ಟೆಗಳಿಗೆ ಒಬ್ಬರಂತೆ ಒಟ್ಟು ಬಿಎಲ್ಓ ಮೇಲ್ವಿಚಾರಕರನ್ನು ನೇಮಕ ಮಾಡಲಾಗಿರುತ್ತದೆ. ಮೊದಲನೇ ಹಂತದಲ್ಲಿ ಬಿಎಲ್ಒ ಗಳಿಗೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ ಜೊತೆಗೆ ಗ್ರಾಮ ಪಂಚಾಯಿತಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಬಿಎಲ್ಒ ಸೌಲಭ್ಯ ಕೇಂದ್ರ ತೆರೆಯಲಾಗಿದೆ ಎಂದರು.
ಎಸ್ಐಆರ್ ಪ್ರಕ್ರಿಯೆಯಲ್ಲಿ ಬಿಎಲ್ಒಗಳು ಪ್ರತಿ ಮನೆಗಳಿಗೆ ಭೇಟಿನೀಡಿ ಮತದಾರರಿಗೆ ನಕಲು ಪ್ರತಿಗಳಲ್ಲಿ ಗಣತಿ ನಮೂನೆ ಪ್ರತಿಯನ್ನು ವಿತರಿಸಲಿದ್ದಾರೆ. 2ನೇ ಭೇಟಿಯಲ್ಲಿ ಬಿ.ಎಲ್.ಒಗಳು ಮತದಾರರು ಭರ್ತಿ ಮಾಡಿದ ಫಾರಂ ಸಂಗ್ರಹಿಸಿ ಸ್ವೀಕೃತಿ ನೀಡುತ್ತಾರೆ. ಮತದಾರರು ಹಿಂದಿನ ಎಸ್ಐಆರ್ನ ಮತದಾರರ ಪಟ್ಟಿಯಲ್ಲಿ ವಿವರಗಳನ್ನು ಒದಗಿಸ ಬೇಕು. ಹಿಂದಿನ ಎಸ್ಐಆರ್ ಮಾಹಿತಿಯನ್ನು https://voters.eci.gov.in ವೆಬ್ ಸೈಟ್ ನಲ್ಲಿ ಪಡೆಯಬಹುದು ಎಂದು ತಿಳಿಸಿದರು.
ಬಿಎಲ್ಒಗಳು ಮತದಾರರಿಂದ ಫಾರಂ ಸಂಗ್ರಹಿಸಲು 3 ಬಾರಿ ಭೇಟಿ ನೀಡಲಿದ್ದಾರೆ. ಮನೆ ಬೀಗ ಹಾಕಿದ್ದರೆ ಫಾರಂ ಅನ್ನು ಮನೆಗೆ ಅಂಟಿಸಲಾಗುತ್ತದೆ, ನೆರೆ ಹೊರೆಯವರ ಸಹಾಯ ಪಡೆದು ಮನೆಯ ಮಾಲೀಕರನ್ನು ಸಂಪರ್ಕಿಸುವ ಯತ್ನ ಮಾಡಲಿದ್ದಾರೆ. ಯಾವುದೇ ಪ್ರತಿಕ್ರಿಯೆ ನೀಡದಿದ್ದರೆ ಹಾಗೂ ಫಾರಂಗಳನ್ನು ಸ್ವೀಕರಿಸದಿದ್ದಲ್ಲಿ ಮತದಾರರನ್ನು ಪಟ್ಟಿಯಿಂದ ಹೆಸರು ಕೈಬಿಡಲಾಗುವುದು. ಹೊಸ ಮತದಾರರು ಘೋಷಣೆಯೊಂದಿಗೆ ನಮೂನೆ 6 ಸಲ್ಲಿಸಬೇಕು ಎಂದು ತಿಳಿಸಿದರು.
ಅರ್ಹ ಮತದಾರರನ್ನು ಕರಡು ಮತದಾರರ ಪಟ್ಟಿಗೆ ಸೇರಿಸಲಾಗುತ್ತದೆ. ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಆಕ್ಷೇಪಣೆಗಳನ್ನು ಆಹ್ವಾನಿಸಲಾಗುತ್ತದೆ. ಹೆಸರು ಸೇರ್ಪಡೆಗಾಗಿ ಫಾರಂ 6 ಹಾಗೂ 8 ನೀಡಲಾಗುತ್ತದೆ. ಮತದಾರರ ಪಟ್ಟಿಯಿಂದ ಹೊರಗಿಡುವಿಕೆ, ಅಳಿಸುವಿಕೆ ಆಕ್ಷೇಪಣೆಗಳಿಗೆ ಫಾರಂ 7 ಸಲ್ಲಿಸಬೇಕಾಗುತ್ತದೆ ಎಂದು ತಿಳಿಸಿದರು.
*ಬೂತ್ ಲೆವೆಲ್ ಏಜೆಂಟರ ನೇಮಕ*
ವಿಶೇಷ ಸಮಗ್ರ ಪರಿಷ್ಕರಣಾ ಕಾರ್ಯಕ್ಕೆ ರಾಜಕೀಯ ಪಕ್ಷಗಳು ಸಹ ನೆರವು ನೀಡಲು ಅವಕಾಶ ಕಲ್ಪಿಸಲಾಗಿದೆ, ಈ ಪ್ರಕ್ರಿಯೆಯಲ್ಲಿ ರಾಜಕೀಯ ಪಕ್ಷಗಳು ಬೂತ್ ಲೆವೆಲ್ ಏಜೆಂಟರುಗಳನ್ನು ನೇಮಕ ಮಾಡಿಕೊಳ್ಳಬಹುದಾಗಿದ್ದು ಅವರಿಗೆ ಗುರುತಿನ ಚೀಟಿ ನೀಡುತ್ತಾರೆ. ಇದರೊಂದಿಗೆ ಪ್ರತಿಯೊಂದು ಪಂಚಾಯತ್ಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ವಾರು ಮತದಾರರ ನೆರವು ಕೇಂದ್ರಗಳನ್ನು ರಚಿಸಲಾಗುವುದು, ಅಲ್ಲಿ ಬೂತ್ ಮಟ್ಟದ ಎಜೆಂಟರು ಬಿಎಲ್ಓ ಅವರೊಂದಿಗೆ ತೆರಳಿ ನೆರವು ನೀಡಬಹುದು. ಅದಕ್ಕಾಗಿ ರಾಜಕೀಯ ಪಕ್ಷಗಳು ಏಜೆಂಟರಿಗೆ ಕಂಪ್ಯೂಟರ್ ಹಾಗೂ ಇಂಟರ್ನೆಟ್ ಸಂಪರ್ಕ ಒದಗಿಸಲಾಗುವುದು.
ಬಿಎಲ್ಓಗಳು ಅಲ್ಲಿ ದಾಖಲಾತಿಗಳನ್ನು ಅಪ್ ಲೋಡ್ ಮಾಡಲು ಇದರಿಂದ ಅನುಕೂಲವಾಗಲಿದೆ. ನಾಗರೀಕರು ಕೂಡ ಅಲ್ಲಿ ಬಂದು ದಾಖಲಾತಿಗಳನ್ನು ನೀಡಬಹುದಾಗಿದೆ. ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಸೂಕ್ಷ್ಮವಾದ ಪ್ರಕ್ರಿಯೆಯಾಗಿದ್ದು, ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಅರ್ಹ ಮತದಾರರ ಹೆಸರನ್ನು ಕೈ ಬಿಡದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಲಾಗಿದೆ ಎಂದರು.
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಮುಖ್ಯ. ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ. ಮತದಾರರ ಪಟ್ಟಿ ಪರಿಷ್ಕರಣೆ ಪಾರದರ್ಶಕವಾಗಿ ನಡೆಯಲಿದ್ದು ಸಾರ್ವಜನಿಕರು ಸಹಕರಿಸಿ ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…
ದೇವನಹಳ್ಳಿ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಅವರು…
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಆಘಾತ ಎದುರಾಗಿದೆ. ಸಚಿವ ರಾಮಲಿಂಗ ರೆಡ್ಡಿ ತಮ್ಮ…
ಭಾರತದ ಬಹಳಷ್ಟು ಮಧ್ಯಮ ವರ್ಗದ ಜನರಲ್ಲಿ ಜೀವನೋತ್ಸಾಹ ಕಡಿಮೆಯಾಗುತ್ತಿದೇಯೇ ಎಂಬ ಅನುಮಾನ ಶುರುವಾಗಿದೆ. ನಿಜಕ್ಕೂ ಬೃಹತ್ ಸಂಖ್ಯೆಯ ಮಧ್ಯಮ ವರ್ಗದವರು…
ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…